Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಕಳೆದ 1018 ದಿನಗಳಿಂದ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ರೈತರ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕ ಪ್ರಾಂತ ರೈತ‌ಸಂಘ ಸೇರಿದಂತೆ ಹಲವು ಎಡ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ಅಗಲಿಕೆಯ ಹಿನ್ನೆಲೆ, ಇಂದು (ಜ.15) ಧರಣಿ ಸ್ಥಳಕ್ಕೆ ಬಂದ ಎಡ ಸಂಘಟನೆಗಳ ಮುಖಂಡರು, ಬಯ್ಯಾರೆಡ್ಡಿಯವರ ಅನುಪಸ್ಥಿತಿಯಲ್ಲಿಯೂ ನಾವು ಸಂಘಟನೆಯಾಗಿ ರೈತರ ಜೊತೆಗಿದ್ದೇವೆ ಎಂದು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಅವರು, “ವಿವಿಧ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆದು ಬಂದಿರುವ ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗೆ ನಮ್ಮ ಕಾಮ್ರೇಡ್ ಬಯ್ಯಾರೆಡ್ಡಿಯವರೂ ಕೂಡ ಮುಂಚೂಣಿಯಲ್ಲಿದ್ದರು. ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹೋರಾಟದ ಸ್ಪೂರ್ತಿ ನಮ್ಮ ಜೊತೆಗಿದೆ ಎಂದರು.

ಮೂರುಕಾಸಿನ ಸಂಬಳಕ್ಕೆ ಕೆಲಸ ಮಾಡಲು ಬಂಡವಾಳಶಾಹಿಗಳಿಗೆ ನೌಕರರು ಬೇಕು, ಅದಕ್ಕಾಗಿ ಕೃಷಿ ನಂಬಿರುವ ಜನರ ಭೂಮಿ‌ಯನ್ನು ಕಸಿದುಕೊಳ್ಳುವ‌ ಮೂಲಕ ಸರ್ಕಾರಗಳು ಕೂಲಿಯಾಳುಗಳನ್ನು ಸೃಷ್ಟಿಸುತ್ತಿದೆ. ರೈತರ ಕೈಯಲ್ಲಿ ಭೂಮಿ‌ ಇರಲೇ ಬಾರದು ಎಂಬುದು ಸರ್ಕಾರಗಳ ನಿರ್ಧಾರ. ಅದನ್ನು ನಾವು ವಿರೋಧಿಸಲೇಬೇಕು. ಮುಖ್ಯಮಂತ್ರಿಗಳು ಒಳ್ಳೆಯವರಾಗಿದ್ದರು ಕೂಡ ಬಂಡವಾಳಶಾಹಿಗಳಿಗೆ ಹೆದುರುತ್ತಿದ್ದಾರೆ. ಅವರು ತಕ್ಷಣವೇ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಚನ್ನರಾಯಪಟ್ಟಣ ಹೋರಾಟ ಕೃಷಿ ಭಾರತವನ್ನು ಕಬಳಿಸಲು ಹೊರಟಿರುವ ಬಹುರಾಷ್ಟ್ರೀಯ ಕಂಪನಿಗಳ ವಿರುದ್ದ ನಡೆಸುತ್ತಿರುವ ಹೋರಾಟ. ನಾವಿದನ್ನು ಗೆಲ್ಲಲೇಬೇಕು, ಗೆಲ್ಲುತ್ತೇವೆ. ಅಲ್ಲಿಯವರೆಗೆ ಹೋರಾಡೋಣ ನಾವು ಸದಾ ಜೊತೆಗಿರುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜು ಹೇಳಿದರು.

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ಮಾತನಾಡಿ, ಹಿಂದೆ ಭೂಮಿಗಾಗಿ ಚಳವಳಿ ನಡೆಯುತ್ತಿದ್ದವು. ಈಗ ನಮಗಿರುವ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗಿದೆ, ಇದು ದುರಂತವೇ ಸರಿ. ಚಳವಳಿಯನ್ನು ಇಷ್ಟು ದೀರ್ಘಕಾಲ ಜೀವಂತವಾಗಿಟ್ಟಿರುವುದು ಇಲ್ಲಿನ ರೈತರ ಹೆಗ್ಗಳಿಕೆ ಮತ್ತು ಇದೊಂದು ಸಾಹಸವೇ ಸರಿ. ಹೋರಾಟಕ್ಕೆ ಎಂದಿಗೂ ಸೋಲಾಗುವುದಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಜನವರಿ ತಿಂಗಳಲ್ಲಿ ಯಾವುದೇ ನಿರ್ಧಾರಕ್ಕೆ ಬರದಿದ್ದರೆ ಫಬ್ರವರಿ ತಿಂಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗೋಣ ಎಂದರು.

ಕರ್ನಾಟಕ ಪ್ರಾಂತ್ಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ, ಚನ್ನರಾಯಪಟ್ಟಣ ಭೂಮಿ ಹೋರಾಟದ ವಿಷಯವನ್ನು ಪ್ರಾಧಾನವಾಗಿಟ್ಟುಕೊಂಡು, ರೈತರ, ಕಾರ್ಮಿಕರ ವಿವಿಧ ಒತ್ತಾಯಗಳ ಜೊತೆಗೆ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳ ಕನಿಷ್ಟ ಹತ್ತು ಸಾವಿರ ಜನರನ್ನು ಒಟ್ಟಿಗೆ ಸೇರಿಸುವ ಯೋಜನೆ ಇದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಬನ್ನಿ ಎಂದು ಕರೆಕೊಟ್ಟರು.

ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ನಮ್ಮೊಂದಿಗಿವೆ. ಕರ್ನಾಟಕದ ಐಕ್ಯ ಹೋರಾಟಕ್ಕೆ ಇದೊಂದು ಜಿವಂತ ಉದಾಹರಣೆ. ನೀವೆಲ್ಲರೂ ಜೊತೆಗಿರುವುದೆ ನಮ್ಮ ರೈತ ಹೋರಾಟಕ್ಕೆ ಆನೆ ಬಲ. ಬಯ್ಯಾರೆಡ್ಡಿಯವರು ಇಲ್ಲದಿರುವ ಖಾಲಿ ತನವನ್ನು ತಾವು ತುಂಬಲು ಬಂದಿದ್ದೀರಿ. ನೀವೆಲ್ಲರು ಜೊತೆಗಿದ್ದರೆ ಯಾವುದೇ ಸಂದರ್ಭದಲ್ಲಿಯಾದರೂ ಸರಿ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ. ಅದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾವು ಸಿದ್ದ ಎಂದು ಚನ್ನರಾಯಪಟ್ಟಣ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ಕಾರಳ್ಳಿ ಶ್ರೀನಿವಾಸ್ ತಿಳಿಸಿದರು.

ಹೋರಾಟಗಾರರಾದ ಚಂದ್ರ ತೇಜಸ್ವಿ, ಪ್ರಭಾ ಬೆಳವಂಗಲ, ನಲ್ಲಪ್ಪನಹಳ್ಳಿ ನಂಜಪ್ಪ, ಸಿದ್ದಾರ್ಥ, ಮಾರೇಗೌಡ, ಮೀನಾಕ್ಷಿ ಸುಂದರಂ, ಮುನಿವೆಂಕಟಪ್ಪ ಸೇರಿದಂತೆ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ ಮತ್ತಿತರ ಸಂಘಟನೆಗಳ ಮುಖಂಡರು, 13 ಹಳ್ಳಿಗಳ ರೈತರು, ರೈತ ಮಹಿಳೆಯರು, ಯುವ ಜನರು ಇಂದು ಧರಣಿಯಲ್ಲಿ ಭಾಗಿಯಾಗಿದ್ದರು.

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...