Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಕಳೆದ 1018 ದಿನಗಳಿಂದ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ರೈತರ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕ ಪ್ರಾಂತ ರೈತ‌ಸಂಘ ಸೇರಿದಂತೆ ಹಲವು ಎಡ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ಅಗಲಿಕೆಯ ಹಿನ್ನೆಲೆ, ಇಂದು (ಜ.15) ಧರಣಿ ಸ್ಥಳಕ್ಕೆ ಬಂದ ಎಡ ಸಂಘಟನೆಗಳ ಮುಖಂಡರು, ಬಯ್ಯಾರೆಡ್ಡಿಯವರ ಅನುಪಸ್ಥಿತಿಯಲ್ಲಿಯೂ ನಾವು ಸಂಘಟನೆಯಾಗಿ ರೈತರ ಜೊತೆಗಿದ್ದೇವೆ ಎಂದು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಅವರು, “ವಿವಿಧ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆದು ಬಂದಿರುವ ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗೆ ನಮ್ಮ ಕಾಮ್ರೇಡ್ ಬಯ್ಯಾರೆಡ್ಡಿಯವರೂ ಕೂಡ ಮುಂಚೂಣಿಯಲ್ಲಿದ್ದರು. ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹೋರಾಟದ ಸ್ಪೂರ್ತಿ ನಮ್ಮ ಜೊತೆಗಿದೆ ಎಂದರು.

ಮೂರುಕಾಸಿನ ಸಂಬಳಕ್ಕೆ ಕೆಲಸ ಮಾಡಲು ಬಂಡವಾಳಶಾಹಿಗಳಿಗೆ ನೌಕರರು ಬೇಕು, ಅದಕ್ಕಾಗಿ ಕೃಷಿ ನಂಬಿರುವ ಜನರ ಭೂಮಿ‌ಯನ್ನು ಕಸಿದುಕೊಳ್ಳುವ‌ ಮೂಲಕ ಸರ್ಕಾರಗಳು ಕೂಲಿಯಾಳುಗಳನ್ನು ಸೃಷ್ಟಿಸುತ್ತಿದೆ. ರೈತರ ಕೈಯಲ್ಲಿ ಭೂಮಿ‌ ಇರಲೇ ಬಾರದು ಎಂಬುದು ಸರ್ಕಾರಗಳ ನಿರ್ಧಾರ. ಅದನ್ನು ನಾವು ವಿರೋಧಿಸಲೇಬೇಕು. ಮುಖ್ಯಮಂತ್ರಿಗಳು ಒಳ್ಳೆಯವರಾಗಿದ್ದರು ಕೂಡ ಬಂಡವಾಳಶಾಹಿಗಳಿಗೆ ಹೆದುರುತ್ತಿದ್ದಾರೆ. ಅವರು ತಕ್ಷಣವೇ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಚನ್ನರಾಯಪಟ್ಟಣ ಹೋರಾಟ ಕೃಷಿ ಭಾರತವನ್ನು ಕಬಳಿಸಲು ಹೊರಟಿರುವ ಬಹುರಾಷ್ಟ್ರೀಯ ಕಂಪನಿಗಳ ವಿರುದ್ದ ನಡೆಸುತ್ತಿರುವ ಹೋರಾಟ. ನಾವಿದನ್ನು ಗೆಲ್ಲಲೇಬೇಕು, ಗೆಲ್ಲುತ್ತೇವೆ. ಅಲ್ಲಿಯವರೆಗೆ ಹೋರಾಡೋಣ ನಾವು ಸದಾ ಜೊತೆಗಿರುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜು ಹೇಳಿದರು.

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ಮಾತನಾಡಿ, ಹಿಂದೆ ಭೂಮಿಗಾಗಿ ಚಳವಳಿ ನಡೆಯುತ್ತಿದ್ದವು. ಈಗ ನಮಗಿರುವ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗಿದೆ, ಇದು ದುರಂತವೇ ಸರಿ. ಚಳವಳಿಯನ್ನು ಇಷ್ಟು ದೀರ್ಘಕಾಲ ಜೀವಂತವಾಗಿಟ್ಟಿರುವುದು ಇಲ್ಲಿನ ರೈತರ ಹೆಗ್ಗಳಿಕೆ ಮತ್ತು ಇದೊಂದು ಸಾಹಸವೇ ಸರಿ. ಹೋರಾಟಕ್ಕೆ ಎಂದಿಗೂ ಸೋಲಾಗುವುದಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಜನವರಿ ತಿಂಗಳಲ್ಲಿ ಯಾವುದೇ ನಿರ್ಧಾರಕ್ಕೆ ಬರದಿದ್ದರೆ ಫಬ್ರವರಿ ತಿಂಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗೋಣ ಎಂದರು.

ಕರ್ನಾಟಕ ಪ್ರಾಂತ್ಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ, ಚನ್ನರಾಯಪಟ್ಟಣ ಭೂಮಿ ಹೋರಾಟದ ವಿಷಯವನ್ನು ಪ್ರಾಧಾನವಾಗಿಟ್ಟುಕೊಂಡು, ರೈತರ, ಕಾರ್ಮಿಕರ ವಿವಿಧ ಒತ್ತಾಯಗಳ ಜೊತೆಗೆ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳ ಕನಿಷ್ಟ ಹತ್ತು ಸಾವಿರ ಜನರನ್ನು ಒಟ್ಟಿಗೆ ಸೇರಿಸುವ ಯೋಜನೆ ಇದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಬನ್ನಿ ಎಂದು ಕರೆಕೊಟ್ಟರು.

ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ನಮ್ಮೊಂದಿಗಿವೆ. ಕರ್ನಾಟಕದ ಐಕ್ಯ ಹೋರಾಟಕ್ಕೆ ಇದೊಂದು ಜಿವಂತ ಉದಾಹರಣೆ. ನೀವೆಲ್ಲರೂ ಜೊತೆಗಿರುವುದೆ ನಮ್ಮ ರೈತ ಹೋರಾಟಕ್ಕೆ ಆನೆ ಬಲ. ಬಯ್ಯಾರೆಡ್ಡಿಯವರು ಇಲ್ಲದಿರುವ ಖಾಲಿ ತನವನ್ನು ತಾವು ತುಂಬಲು ಬಂದಿದ್ದೀರಿ. ನೀವೆಲ್ಲರು ಜೊತೆಗಿದ್ದರೆ ಯಾವುದೇ ಸಂದರ್ಭದಲ್ಲಿಯಾದರೂ ಸರಿ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ. ಅದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾವು ಸಿದ್ದ ಎಂದು ಚನ್ನರಾಯಪಟ್ಟಣ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ಕಾರಳ್ಳಿ ಶ್ರೀನಿವಾಸ್ ತಿಳಿಸಿದರು.

ಹೋರಾಟಗಾರರಾದ ಚಂದ್ರ ತೇಜಸ್ವಿ, ಪ್ರಭಾ ಬೆಳವಂಗಲ, ನಲ್ಲಪ್ಪನಹಳ್ಳಿ ನಂಜಪ್ಪ, ಸಿದ್ದಾರ್ಥ, ಮಾರೇಗೌಡ, ಮೀನಾಕ್ಷಿ ಸುಂದರಂ, ಮುನಿವೆಂಕಟಪ್ಪ ಸೇರಿದಂತೆ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ ಮತ್ತಿತರ ಸಂಘಟನೆಗಳ ಮುಖಂಡರು, 13 ಹಳ್ಳಿಗಳ ರೈತರು, ರೈತ ಮಹಿಳೆಯರು, ಯುವ ಜನರು ಇಂದು ಧರಣಿಯಲ್ಲಿ ಭಾಗಿಯಾಗಿದ್ದರು.

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...