Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಕಳೆದ 1018 ದಿನಗಳಿಂದ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ರೈತರ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕ ಪ್ರಾಂತ ರೈತ‌ಸಂಘ ಸೇರಿದಂತೆ ಹಲವು ಎಡ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ಅಗಲಿಕೆಯ ಹಿನ್ನೆಲೆ, ಇಂದು (ಜ.15) ಧರಣಿ ಸ್ಥಳಕ್ಕೆ ಬಂದ ಎಡ ಸಂಘಟನೆಗಳ ಮುಖಂಡರು, ಬಯ್ಯಾರೆಡ್ಡಿಯವರ ಅನುಪಸ್ಥಿತಿಯಲ್ಲಿಯೂ ನಾವು ಸಂಘಟನೆಯಾಗಿ ರೈತರ ಜೊತೆಗಿದ್ದೇವೆ ಎಂದು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಅವರು, “ವಿವಿಧ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆದು ಬಂದಿರುವ ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗೆ ನಮ್ಮ ಕಾಮ್ರೇಡ್ ಬಯ್ಯಾರೆಡ್ಡಿಯವರೂ ಕೂಡ ಮುಂಚೂಣಿಯಲ್ಲಿದ್ದರು. ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹೋರಾಟದ ಸ್ಪೂರ್ತಿ ನಮ್ಮ ಜೊತೆಗಿದೆ ಎಂದರು.

ಮೂರುಕಾಸಿನ ಸಂಬಳಕ್ಕೆ ಕೆಲಸ ಮಾಡಲು ಬಂಡವಾಳಶಾಹಿಗಳಿಗೆ ನೌಕರರು ಬೇಕು, ಅದಕ್ಕಾಗಿ ಕೃಷಿ ನಂಬಿರುವ ಜನರ ಭೂಮಿ‌ಯನ್ನು ಕಸಿದುಕೊಳ್ಳುವ‌ ಮೂಲಕ ಸರ್ಕಾರಗಳು ಕೂಲಿಯಾಳುಗಳನ್ನು ಸೃಷ್ಟಿಸುತ್ತಿದೆ. ರೈತರ ಕೈಯಲ್ಲಿ ಭೂಮಿ‌ ಇರಲೇ ಬಾರದು ಎಂಬುದು ಸರ್ಕಾರಗಳ ನಿರ್ಧಾರ. ಅದನ್ನು ನಾವು ವಿರೋಧಿಸಲೇಬೇಕು. ಮುಖ್ಯಮಂತ್ರಿಗಳು ಒಳ್ಳೆಯವರಾಗಿದ್ದರು ಕೂಡ ಬಂಡವಾಳಶಾಹಿಗಳಿಗೆ ಹೆದುರುತ್ತಿದ್ದಾರೆ. ಅವರು ತಕ್ಷಣವೇ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಚನ್ನರಾಯಪಟ್ಟಣ ಹೋರಾಟ ಕೃಷಿ ಭಾರತವನ್ನು ಕಬಳಿಸಲು ಹೊರಟಿರುವ ಬಹುರಾಷ್ಟ್ರೀಯ ಕಂಪನಿಗಳ ವಿರುದ್ದ ನಡೆಸುತ್ತಿರುವ ಹೋರಾಟ. ನಾವಿದನ್ನು ಗೆಲ್ಲಲೇಬೇಕು, ಗೆಲ್ಲುತ್ತೇವೆ. ಅಲ್ಲಿಯವರೆಗೆ ಹೋರಾಡೋಣ ನಾವು ಸದಾ ಜೊತೆಗಿರುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜು ಹೇಳಿದರು.

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ಮಾತನಾಡಿ, ಹಿಂದೆ ಭೂಮಿಗಾಗಿ ಚಳವಳಿ ನಡೆಯುತ್ತಿದ್ದವು. ಈಗ ನಮಗಿರುವ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗಿದೆ, ಇದು ದುರಂತವೇ ಸರಿ. ಚಳವಳಿಯನ್ನು ಇಷ್ಟು ದೀರ್ಘಕಾಲ ಜೀವಂತವಾಗಿಟ್ಟಿರುವುದು ಇಲ್ಲಿನ ರೈತರ ಹೆಗ್ಗಳಿಕೆ ಮತ್ತು ಇದೊಂದು ಸಾಹಸವೇ ಸರಿ. ಹೋರಾಟಕ್ಕೆ ಎಂದಿಗೂ ಸೋಲಾಗುವುದಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಜನವರಿ ತಿಂಗಳಲ್ಲಿ ಯಾವುದೇ ನಿರ್ಧಾರಕ್ಕೆ ಬರದಿದ್ದರೆ ಫಬ್ರವರಿ ತಿಂಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗೋಣ ಎಂದರು.

ಕರ್ನಾಟಕ ಪ್ರಾಂತ್ಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ, ಚನ್ನರಾಯಪಟ್ಟಣ ಭೂಮಿ ಹೋರಾಟದ ವಿಷಯವನ್ನು ಪ್ರಾಧಾನವಾಗಿಟ್ಟುಕೊಂಡು, ರೈತರ, ಕಾರ್ಮಿಕರ ವಿವಿಧ ಒತ್ತಾಯಗಳ ಜೊತೆಗೆ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳ ಕನಿಷ್ಟ ಹತ್ತು ಸಾವಿರ ಜನರನ್ನು ಒಟ್ಟಿಗೆ ಸೇರಿಸುವ ಯೋಜನೆ ಇದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಬನ್ನಿ ಎಂದು ಕರೆಕೊಟ್ಟರು.

ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ನಮ್ಮೊಂದಿಗಿವೆ. ಕರ್ನಾಟಕದ ಐಕ್ಯ ಹೋರಾಟಕ್ಕೆ ಇದೊಂದು ಜಿವಂತ ಉದಾಹರಣೆ. ನೀವೆಲ್ಲರೂ ಜೊತೆಗಿರುವುದೆ ನಮ್ಮ ರೈತ ಹೋರಾಟಕ್ಕೆ ಆನೆ ಬಲ. ಬಯ್ಯಾರೆಡ್ಡಿಯವರು ಇಲ್ಲದಿರುವ ಖಾಲಿ ತನವನ್ನು ತಾವು ತುಂಬಲು ಬಂದಿದ್ದೀರಿ. ನೀವೆಲ್ಲರು ಜೊತೆಗಿದ್ದರೆ ಯಾವುದೇ ಸಂದರ್ಭದಲ್ಲಿಯಾದರೂ ಸರಿ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ. ಅದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾವು ಸಿದ್ದ ಎಂದು ಚನ್ನರಾಯಪಟ್ಟಣ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ಕಾರಳ್ಳಿ ಶ್ರೀನಿವಾಸ್ ತಿಳಿಸಿದರು.

ಹೋರಾಟಗಾರರಾದ ಚಂದ್ರ ತೇಜಸ್ವಿ, ಪ್ರಭಾ ಬೆಳವಂಗಲ, ನಲ್ಲಪ್ಪನಹಳ್ಳಿ ನಂಜಪ್ಪ, ಸಿದ್ದಾರ್ಥ, ಮಾರೇಗೌಡ, ಮೀನಾಕ್ಷಿ ಸುಂದರಂ, ಮುನಿವೆಂಕಟಪ್ಪ ಸೇರಿದಂತೆ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ ಮತ್ತಿತರ ಸಂಘಟನೆಗಳ ಮುಖಂಡರು, 13 ಹಳ್ಳಿಗಳ ರೈತರು, ರೈತ ಮಹಿಳೆಯರು, ಯುವ ಜನರು ಇಂದು ಧರಣಿಯಲ್ಲಿ ಭಾಗಿಯಾಗಿದ್ದರು.

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...