Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಕಳೆದ 1018 ದಿನಗಳಿಂದ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ರೈತರ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕ ಪ್ರಾಂತ ರೈತ‌ಸಂಘ ಸೇರಿದಂತೆ ಹಲವು ಎಡ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ಅಗಲಿಕೆಯ ಹಿನ್ನೆಲೆ, ಇಂದು (ಜ.15) ಧರಣಿ ಸ್ಥಳಕ್ಕೆ ಬಂದ ಎಡ ಸಂಘಟನೆಗಳ ಮುಖಂಡರು, ಬಯ್ಯಾರೆಡ್ಡಿಯವರ ಅನುಪಸ್ಥಿತಿಯಲ್ಲಿಯೂ ನಾವು ಸಂಘಟನೆಯಾಗಿ ರೈತರ ಜೊತೆಗಿದ್ದೇವೆ ಎಂದು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಅವರು, “ವಿವಿಧ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆದು ಬಂದಿರುವ ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗೆ ನಮ್ಮ ಕಾಮ್ರೇಡ್ ಬಯ್ಯಾರೆಡ್ಡಿಯವರೂ ಕೂಡ ಮುಂಚೂಣಿಯಲ್ಲಿದ್ದರು. ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹೋರಾಟದ ಸ್ಪೂರ್ತಿ ನಮ್ಮ ಜೊತೆಗಿದೆ ಎಂದರು.

ಮೂರುಕಾಸಿನ ಸಂಬಳಕ್ಕೆ ಕೆಲಸ ಮಾಡಲು ಬಂಡವಾಳಶಾಹಿಗಳಿಗೆ ನೌಕರರು ಬೇಕು, ಅದಕ್ಕಾಗಿ ಕೃಷಿ ನಂಬಿರುವ ಜನರ ಭೂಮಿ‌ಯನ್ನು ಕಸಿದುಕೊಳ್ಳುವ‌ ಮೂಲಕ ಸರ್ಕಾರಗಳು ಕೂಲಿಯಾಳುಗಳನ್ನು ಸೃಷ್ಟಿಸುತ್ತಿದೆ. ರೈತರ ಕೈಯಲ್ಲಿ ಭೂಮಿ‌ ಇರಲೇ ಬಾರದು ಎಂಬುದು ಸರ್ಕಾರಗಳ ನಿರ್ಧಾರ. ಅದನ್ನು ನಾವು ವಿರೋಧಿಸಲೇಬೇಕು. ಮುಖ್ಯಮಂತ್ರಿಗಳು ಒಳ್ಳೆಯವರಾಗಿದ್ದರು ಕೂಡ ಬಂಡವಾಳಶಾಹಿಗಳಿಗೆ ಹೆದುರುತ್ತಿದ್ದಾರೆ. ಅವರು ತಕ್ಷಣವೇ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಚನ್ನರಾಯಪಟ್ಟಣ ಹೋರಾಟ ಕೃಷಿ ಭಾರತವನ್ನು ಕಬಳಿಸಲು ಹೊರಟಿರುವ ಬಹುರಾಷ್ಟ್ರೀಯ ಕಂಪನಿಗಳ ವಿರುದ್ದ ನಡೆಸುತ್ತಿರುವ ಹೋರಾಟ. ನಾವಿದನ್ನು ಗೆಲ್ಲಲೇಬೇಕು, ಗೆಲ್ಲುತ್ತೇವೆ. ಅಲ್ಲಿಯವರೆಗೆ ಹೋರಾಡೋಣ ನಾವು ಸದಾ ಜೊತೆಗಿರುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜು ಹೇಳಿದರು.

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ಮಾತನಾಡಿ, ಹಿಂದೆ ಭೂಮಿಗಾಗಿ ಚಳವಳಿ ನಡೆಯುತ್ತಿದ್ದವು. ಈಗ ನಮಗಿರುವ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗಿದೆ, ಇದು ದುರಂತವೇ ಸರಿ. ಚಳವಳಿಯನ್ನು ಇಷ್ಟು ದೀರ್ಘಕಾಲ ಜೀವಂತವಾಗಿಟ್ಟಿರುವುದು ಇಲ್ಲಿನ ರೈತರ ಹೆಗ್ಗಳಿಕೆ ಮತ್ತು ಇದೊಂದು ಸಾಹಸವೇ ಸರಿ. ಹೋರಾಟಕ್ಕೆ ಎಂದಿಗೂ ಸೋಲಾಗುವುದಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಜನವರಿ ತಿಂಗಳಲ್ಲಿ ಯಾವುದೇ ನಿರ್ಧಾರಕ್ಕೆ ಬರದಿದ್ದರೆ ಫಬ್ರವರಿ ತಿಂಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗೋಣ ಎಂದರು.

ಕರ್ನಾಟಕ ಪ್ರಾಂತ್ಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ, ಚನ್ನರಾಯಪಟ್ಟಣ ಭೂಮಿ ಹೋರಾಟದ ವಿಷಯವನ್ನು ಪ್ರಾಧಾನವಾಗಿಟ್ಟುಕೊಂಡು, ರೈತರ, ಕಾರ್ಮಿಕರ ವಿವಿಧ ಒತ್ತಾಯಗಳ ಜೊತೆಗೆ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳ ಕನಿಷ್ಟ ಹತ್ತು ಸಾವಿರ ಜನರನ್ನು ಒಟ್ಟಿಗೆ ಸೇರಿಸುವ ಯೋಜನೆ ಇದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಬನ್ನಿ ಎಂದು ಕರೆಕೊಟ್ಟರು.

ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ನಮ್ಮೊಂದಿಗಿವೆ. ಕರ್ನಾಟಕದ ಐಕ್ಯ ಹೋರಾಟಕ್ಕೆ ಇದೊಂದು ಜಿವಂತ ಉದಾಹರಣೆ. ನೀವೆಲ್ಲರೂ ಜೊತೆಗಿರುವುದೆ ನಮ್ಮ ರೈತ ಹೋರಾಟಕ್ಕೆ ಆನೆ ಬಲ. ಬಯ್ಯಾರೆಡ್ಡಿಯವರು ಇಲ್ಲದಿರುವ ಖಾಲಿ ತನವನ್ನು ತಾವು ತುಂಬಲು ಬಂದಿದ್ದೀರಿ. ನೀವೆಲ್ಲರು ಜೊತೆಗಿದ್ದರೆ ಯಾವುದೇ ಸಂದರ್ಭದಲ್ಲಿಯಾದರೂ ಸರಿ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ. ಅದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾವು ಸಿದ್ದ ಎಂದು ಚನ್ನರಾಯಪಟ್ಟಣ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ಕಾರಳ್ಳಿ ಶ್ರೀನಿವಾಸ್ ತಿಳಿಸಿದರು.

ಹೋರಾಟಗಾರರಾದ ಚಂದ್ರ ತೇಜಸ್ವಿ, ಪ್ರಭಾ ಬೆಳವಂಗಲ, ನಲ್ಲಪ್ಪನಹಳ್ಳಿ ನಂಜಪ್ಪ, ಸಿದ್ದಾರ್ಥ, ಮಾರೇಗೌಡ, ಮೀನಾಕ್ಷಿ ಸುಂದರಂ, ಮುನಿವೆಂಕಟಪ್ಪ ಸೇರಿದಂತೆ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ ಮತ್ತಿತರ ಸಂಘಟನೆಗಳ ಮುಖಂಡರು, 13 ಹಳ್ಳಿಗಳ ರೈತರು, ರೈತ ಮಹಿಳೆಯರು, ಯುವ ಜನರು ಇಂದು ಧರಣಿಯಲ್ಲಿ ಭಾಗಿಯಾಗಿದ್ದರು.

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...