Homeಕರ್ನಾಟಕಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ಎಡ ಸಂಘಟನೆಗಳ ಬೆಂಬಲ : ಫೆಬ್ರವರಿಯಲ್ಲಿ ರಾಜ್ಯಮಟ್ಟದ ಹೋರಾಟಕ್ಕೆ ಕರೆ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ನಾಡಕಚೇರಿ ಮುಂಭಾಗ ಕಳೆದ 1018 ದಿನಗಳಿಂದ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ರೈತರ ಅನಿರ್ದಿಷ್ಟಾವಧಿ ಧರಣಿಗೆ ಕರ್ನಾಟಕ ಪ್ರಾಂತ ರೈತ‌ಸಂಘ ಸೇರಿದಂತೆ ಹಲವು ಎಡ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ ಬಯ್ಯಾರೆಡ್ಡಿ ಅಗಲಿಕೆಯ ಹಿನ್ನೆಲೆ, ಇಂದು (ಜ.15) ಧರಣಿ ಸ್ಥಳಕ್ಕೆ ಬಂದ ಎಡ ಸಂಘಟನೆಗಳ ಮುಖಂಡರು, ಬಯ್ಯಾರೆಡ್ಡಿಯವರ ಅನುಪಸ್ಥಿತಿಯಲ್ಲಿಯೂ ನಾವು ಸಂಘಟನೆಯಾಗಿ ರೈತರ ಜೊತೆಗಿದ್ದೇವೆ ಎಂದು ಘೋಷಿಸಿದರು.

ಈ ವೇಳೆ ಮಾತನಾಡಿದ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ್ ಅವರು, “ವಿವಿಧ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆದು ಬಂದಿರುವ ಚನ್ನರಾಯಪಟ್ಟಣ ರೈತ ಹೋರಾಟದ ಜೊತೆಗೆ ನಮ್ಮ ಕಾಮ್ರೇಡ್ ಬಯ್ಯಾರೆಡ್ಡಿಯವರೂ ಕೂಡ ಮುಂಚೂಣಿಯಲ್ಲಿದ್ದರು. ಅವರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಹೋರಾಟದ ಸ್ಪೂರ್ತಿ ನಮ್ಮ ಜೊತೆಗಿದೆ ಎಂದರು.

ಮೂರುಕಾಸಿನ ಸಂಬಳಕ್ಕೆ ಕೆಲಸ ಮಾಡಲು ಬಂಡವಾಳಶಾಹಿಗಳಿಗೆ ನೌಕರರು ಬೇಕು, ಅದಕ್ಕಾಗಿ ಕೃಷಿ ನಂಬಿರುವ ಜನರ ಭೂಮಿ‌ಯನ್ನು ಕಸಿದುಕೊಳ್ಳುವ‌ ಮೂಲಕ ಸರ್ಕಾರಗಳು ಕೂಲಿಯಾಳುಗಳನ್ನು ಸೃಷ್ಟಿಸುತ್ತಿದೆ. ರೈತರ ಕೈಯಲ್ಲಿ ಭೂಮಿ‌ ಇರಲೇ ಬಾರದು ಎಂಬುದು ಸರ್ಕಾರಗಳ ನಿರ್ಧಾರ. ಅದನ್ನು ನಾವು ವಿರೋಧಿಸಲೇಬೇಕು. ಮುಖ್ಯಮಂತ್ರಿಗಳು ಒಳ್ಳೆಯವರಾಗಿದ್ದರು ಕೂಡ ಬಂಡವಾಳಶಾಹಿಗಳಿಗೆ ಹೆದುರುತ್ತಿದ್ದಾರೆ. ಅವರು ತಕ್ಷಣವೇ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಚನ್ನರಾಯಪಟ್ಟಣ ಹೋರಾಟ ಕೃಷಿ ಭಾರತವನ್ನು ಕಬಳಿಸಲು ಹೊರಟಿರುವ ಬಹುರಾಷ್ಟ್ರೀಯ ಕಂಪನಿಗಳ ವಿರುದ್ದ ನಡೆಸುತ್ತಿರುವ ಹೋರಾಟ. ನಾವಿದನ್ನು ಗೆಲ್ಲಲೇಬೇಕು, ಗೆಲ್ಲುತ್ತೇವೆ. ಅಲ್ಲಿಯವರೆಗೆ ಹೋರಾಡೋಣ ನಾವು ಸದಾ ಜೊತೆಗಿರುತ್ತೇವೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಯು. ಬಸವರಾಜು ಹೇಳಿದರು.

ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ಮಾತನಾಡಿ, ಹಿಂದೆ ಭೂಮಿಗಾಗಿ ಚಳವಳಿ ನಡೆಯುತ್ತಿದ್ದವು. ಈಗ ನಮಗಿರುವ ಭೂಮಿಯನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಾಗಿದೆ, ಇದು ದುರಂತವೇ ಸರಿ. ಚಳವಳಿಯನ್ನು ಇಷ್ಟು ದೀರ್ಘಕಾಲ ಜೀವಂತವಾಗಿಟ್ಟಿರುವುದು ಇಲ್ಲಿನ ರೈತರ ಹೆಗ್ಗಳಿಕೆ ಮತ್ತು ಇದೊಂದು ಸಾಹಸವೇ ಸರಿ. ಹೋರಾಟಕ್ಕೆ ಎಂದಿಗೂ ಸೋಲಾಗುವುದಿಲ್ಲ. ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಜನವರಿ ತಿಂಗಳಲ್ಲಿ ಯಾವುದೇ ನಿರ್ಧಾರಕ್ಕೆ ಬರದಿದ್ದರೆ ಫಬ್ರವರಿ ತಿಂಗಳಲ್ಲಿ ತೀವ್ರ ಹೋರಾಟಕ್ಕೆ ಮುಂದಾಗೋಣ ಎಂದರು.

ಕರ್ನಾಟಕ ಪ್ರಾಂತ್ಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಶವಂತ್ ಮಾತನಾಡಿ, ಚನ್ನರಾಯಪಟ್ಟಣ ಭೂಮಿ ಹೋರಾಟದ ವಿಷಯವನ್ನು ಪ್ರಾಧಾನವಾಗಿಟ್ಟುಕೊಂಡು, ರೈತರ, ಕಾರ್ಮಿಕರ ವಿವಿಧ ಒತ್ತಾಯಗಳ ಜೊತೆಗೆ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟವನ್ನು ರೂಪಿಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳ ಕನಿಷ್ಟ ಹತ್ತು ಸಾವಿರ ಜನರನ್ನು ಒಟ್ಟಿಗೆ ಸೇರಿಸುವ ಯೋಜನೆ ಇದೆ. ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಬನ್ನಿ ಎಂದು ಕರೆಕೊಟ್ಟರು.

ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ ಸಂಘಟನೆಗಳೂ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ನಮ್ಮೊಂದಿಗಿವೆ. ಕರ್ನಾಟಕದ ಐಕ್ಯ ಹೋರಾಟಕ್ಕೆ ಇದೊಂದು ಜಿವಂತ ಉದಾಹರಣೆ. ನೀವೆಲ್ಲರೂ ಜೊತೆಗಿರುವುದೆ ನಮ್ಮ ರೈತ ಹೋರಾಟಕ್ಕೆ ಆನೆ ಬಲ. ಬಯ್ಯಾರೆಡ್ಡಿಯವರು ಇಲ್ಲದಿರುವ ಖಾಲಿ ತನವನ್ನು ತಾವು ತುಂಬಲು ಬಂದಿದ್ದೀರಿ. ನೀವೆಲ್ಲರು ಜೊತೆಗಿದ್ದರೆ ಯಾವುದೇ ಸಂದರ್ಭದಲ್ಲಿಯಾದರೂ ಸರಿ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ. ಅದಕ್ಕಾಗಿ ಎಂತಹ ಹೋರಾಟಕ್ಕಾದರೂ ನಾವು ಸಿದ್ದ ಎಂದು ಚನ್ನರಾಯಪಟ್ಟಣ ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯ ಮುಖಂಡ ಕಾರಳ್ಳಿ ಶ್ರೀನಿವಾಸ್ ತಿಳಿಸಿದರು.

ಹೋರಾಟಗಾರರಾದ ಚಂದ್ರ ತೇಜಸ್ವಿ, ಪ್ರಭಾ ಬೆಳವಂಗಲ, ನಲ್ಲಪ್ಪನಹಳ್ಳಿ ನಂಜಪ್ಪ, ಸಿದ್ದಾರ್ಥ, ಮಾರೇಗೌಡ, ಮೀನಾಕ್ಷಿ ಸುಂದರಂ, ಮುನಿವೆಂಕಟಪ್ಪ ಸೇರಿದಂತೆ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ ಮತ್ತಿತರ ಸಂಘಟನೆಗಳ ಮುಖಂಡರು, 13 ಹಳ್ಳಿಗಳ ರೈತರು, ರೈತ ಮಹಿಳೆಯರು, ಯುವ ಜನರು ಇಂದು ಧರಣಿಯಲ್ಲಿ ಭಾಗಿಯಾಗಿದ್ದರು.

ಜನವರಿ 17, 18, 19ರಂದು ಬಹುತ್ವ ಸಂಸ್ಕೃತಿ ಭಾರತೋತ್ಸವ – 2025 ಹಾಗೂ ಚಲೋ ಕಲಬುರಗಿ ಸೌಹಾರ್ದ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...