Homeಮುಖಪುಟಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

- Advertisement -
- Advertisement -

ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ‘ಎಡಪಕ್ಷಗಳು ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ತುಂಬಾ ಕಾಳಜಿ ವಹಿಸುತ್ತವೆ ಎಂದು ಹೇಳಿಕೊಂಡರೂ, ತನ್ನ ಹೆಚ್ಚಿನ ಶಕ್ತಿಯನ್ನು ಬಿಜೆಪಿಯ ದುರಾಡಳಿತದ ಬಗ್ಗೆ ಕೇಂದ್ರೀಕರಿಸುವ ಬದಲು, ದುರ್ಬಲಗೊಳಿಸಲು ಏಕೆ ವಿನಿಯೋಗಿಸುತ್ತಿದೆ ಎಂಬುದನ್ನು ತಿಳಿಸಲು ವಿಫಲವಾಗಿದೆ’ ಎಂದು ಹೇಳಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಸಿಪಿಐನ ಪನ್ಯನ್ ರವೀಂದ್ರನ್ ಅವರೊಂದಿಗೆ ತ್ರಿಕೋನ ಸ್ಪರ್ಧೆಯಲ್ಲಿ ಸಿಲುಕಿರುವ ತರೂರ್, ಸಂಸತ್ತಿನ ಸ್ಥಾನದಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಎಡಪಕ್ಷಗಳು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದು ಹೇಳಿದರು.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ‘ನನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕುವುದನ್ನು ಎಡಪಕ್ಷವು ಪ್ರತಿ ಬಾರಿಯೂ ಮಾಡುತ್ತದೆ; ಅದಕ್ಕಾಗಿ ಅವರನ್ನು ಟೀಕಿಸಲು ಸಾಧ್ಯವಿಲ್ಲ. ಏಕೆಂದರೆ, ನಾನು 2009 ರಲ್ಲಿ ಮೊದಲ ಸಲ ಅವರಿಂದ ಸ್ಥಾನ ಪಡೆದುಕೊಂಡೆ’ ಎಂದು ಹೇಳಿದ್ದಾರೆ.

“ಎಡ ಕ್ಷವು ಅವರ ಸಂಪೂರ್ಣ ಅಭಿಯಾನವನ್ನು ನನ್ನ ಮೇಲೆ ದಾಳಿ ಮಾಡಲು ಮೀಸಲಿಡುವುದು ಬಿಜೆಪಿಗೆ ಸಹಾಯ ಮಾಡುವ ತಂತ್ರವಾಗಿದೆ. ಎಡಪಕ್ಷಗಳು ವಿರೋಧ ಪಕ್ಷದ ಒಗ್ಗಟ್ಟಿನ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತವೆ ಎಂದು ಹೇಳಿಕೊಳ್ಳುತ್ತವೆ. ಆದರೆ, ಬಿಜೆಪಿಯ ದುರಾಡಳಿತದ ಮೇಲೆ ಕೇಂದ್ರೀಕರಿಸುವ ಬದಲು ಏಕೆ ಎಂದು ತಿಳಿಸಲು ವಿಫಲವಾಗಿದೆ. ಅವರು ತಮ್ಮ ಹೆಚ್ಚಿನ ಶಕ್ತಿಯನ್ನು ನನ್ನನ್ನು ದುರ್ಬಲಗೊಳಿಸಲು ವಿನಿಯೋಗಿಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

“ಉದ್ದೇಶಪೂರ್ವಕವಾಗಿ ಅಥವಾ ಬೇರೆ ರೀತಿಯಲ್ಲಿ, ಅವರ ಪ್ರಚಾರವು ಸಂಪೂರ್ಣವಾಗಿ ನನ್ನ ವಿರುದ್ಧವಾಗಿದೆ. ಉದಾಹರಣೆಗೆ, ಪ್ಯಾಲೆಸ್ತೀನ್ ವಿರೋಧಿ ಮತ್ತು ಮುಸ್ಲಿಂ ವಿರೋಧಿ ಎಂದು ಆರೋಪಿಸಿ, ಇದು ಸಂಪೂರ್ಣ ಅಸಂಬದ್ಧವಾಗಿದೆ. ವಿಪರ್ಯಾಸವೆಂದರೆ, ಅವರು ಇಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಮತ್ತು ಬೋಧಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಕ್ಷೇತ್ರದಲ್ಲಿರುವ ತನ್ನ ಪ್ರತಿಸ್ಪರ್ಧಿಗಳೊಂದಿಗೆ ನಾನು ಚರ್ಚೆಯನ್ನು ಬಯಸುತ್ತಿದ್ದೇನೆ. ಆದರೆ, ಅವರ ಕಡೆಯಿಂದ ತೊಡಗಿಸಿಕೊಳ್ಳಲು “ಇಷ್ಟವಿಲ್ಲ” ಎಂದು ತೋರುತ್ತಿದೆ. ಅವರು ವಿವಿಧ ಸಂಘಟನೆಗಳಿಂದ ಚರ್ಚೆಗೆ ಅನೇಕ ಆಹ್ವಾನಗಳನ್ನು ತಿರಸ್ಕರಿಸಿದ್ದಾರೆ ಎಂದು ತರೂರ್ ಹೇಳಿದರು.

“ಅವರಿಗೆ ಹಿಂಜರಿಕೆ ಎಲ್ಲಿಂದ ಬರುತ್ತದೆ ಎಂದು ನನಗೆ ತಿಳಿದಿಲ್ಲ. ನಾನು ನನಗಾಗಿ ಮಾತ್ರ ಮಾತನಾಡಬಲ್ಲೆ: ಯಾವುದೇ ಚರ್ಚೆಯಲ್ಲಿ ನನ್ನದೇ ಆದದನ್ನು ಹಿಡಿದಿಟ್ಟುಕೊಳ್ಳುವ ನನ್ನ ವಿಶ್ವಾಸವು ನನ್ನ ಮತದಾರರಿಗಾಗಿ ನಾನು ಮಾಡಿದ ಕೆಲಸ ಮತ್ತು ರಾಷ್ಟ್ರೀಯ, ಜಾಗತಿಕ ಸಮಸ್ಯೆಗಳ ಬಗ್ಗೆ ನಾನು ತೆಗೆದುಕೊಂಡಿರುವ ನಿಲುವುಗಳಿಂದ ಉಂಟಾಗುತ್ತದೆ” ಎಂದು ತಿಳಿಸಿದರು.

“ರಾಜಕೀಯ ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಕೋಮುವಾದ ಮತ್ತು ಬಿಜೆಪಿಯ 10 ವರ್ಷಗಳ ದ್ವೇಷದ ರಾಜಕಾರಣದ ಬಗ್ಗೆ ಚರ್ಚೆ ಮಾಡೋಣ. ತಿರುವನಂತಪುರಂನ ಅಭಿವೃದ್ಧಿ ಮತ್ತು ಕಳೆದ 15 ರಲ್ಲಿ ನಾವು ಮಾಡಿದ ಗೋಚರ ಪ್ರಗತಿಯ ಬಗ್ಗೆಯೂ ಚರ್ಚಿಸೋಣ” ಎಂದರು.

ಇದನ್ನೂ ಓದಿ; ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...