Homeಮುಖಪುಟಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ: ಶಶಿ ತರೂರ್

- Advertisement -
- Advertisement -

ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಎಡಪಕ್ಷಗಳು ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿವೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ‘ಎಡಪಕ್ಷಗಳು ವಿರೋಧ ಪಕ್ಷಗಳ ಒಗ್ಗಟ್ಟಿನ ಬಗ್ಗೆ ತುಂಬಾ ಕಾಳಜಿ ವಹಿಸುತ್ತವೆ ಎಂದು ಹೇಳಿಕೊಂಡರೂ, ತನ್ನ ಹೆಚ್ಚಿನ ಶಕ್ತಿಯನ್ನು ಬಿಜೆಪಿಯ ದುರಾಡಳಿತದ ಬಗ್ಗೆ ಕೇಂದ್ರೀಕರಿಸುವ ಬದಲು, ದುರ್ಬಲಗೊಳಿಸಲು ಏಕೆ ವಿನಿಯೋಗಿಸುತ್ತಿದೆ ಎಂಬುದನ್ನು ತಿಳಿಸಲು ವಿಫಲವಾಗಿದೆ’ ಎಂದು ಹೇಳಿದ್ದಾರೆ.

ಕೇರಳದ ತಿರುವನಂತಪುರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಸಿಪಿಐನ ಪನ್ಯನ್ ರವೀಂದ್ರನ್ ಅವರೊಂದಿಗೆ ತ್ರಿಕೋನ ಸ್ಪರ್ಧೆಯಲ್ಲಿ ಸಿಲುಕಿರುವ ತರೂರ್, ಸಂಸತ್ತಿನ ಸ್ಥಾನದಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಎಡಪಕ್ಷಗಳು ಪ್ರಯತ್ನಿಸುತ್ತಿರುವುದು ವಿಪರ್ಯಾಸ ಎಂದು ಹೇಳಿದರು.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ‘ನನ್ನ ವಿರುದ್ಧ ಅಭ್ಯರ್ಥಿಯನ್ನು ಹಾಕುವುದನ್ನು ಎಡಪಕ್ಷವು ಪ್ರತಿ ಬಾರಿಯೂ ಮಾಡುತ್ತದೆ; ಅದಕ್ಕಾಗಿ ಅವರನ್ನು ಟೀಕಿಸಲು ಸಾಧ್ಯವಿಲ್ಲ. ಏಕೆಂದರೆ, ನಾನು 2009 ರಲ್ಲಿ ಮೊದಲ ಸಲ ಅವರಿಂದ ಸ್ಥಾನ ಪಡೆದುಕೊಂಡೆ’ ಎಂದು ಹೇಳಿದ್ದಾರೆ.

“ಎಡ ಕ್ಷವು ಅವರ ಸಂಪೂರ್ಣ ಅಭಿಯಾನವನ್ನು ನನ್ನ ಮೇಲೆ ದಾಳಿ ಮಾಡಲು ಮೀಸಲಿಡುವುದು ಬಿಜೆಪಿಗೆ ಸಹಾಯ ಮಾಡುವ ತಂತ್ರವಾಗಿದೆ. ಎಡಪಕ್ಷಗಳು ವಿರೋಧ ಪಕ್ಷದ ಒಗ್ಗಟ್ಟಿನ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತವೆ ಎಂದು ಹೇಳಿಕೊಳ್ಳುತ್ತವೆ. ಆದರೆ, ಬಿಜೆಪಿಯ ದುರಾಡಳಿತದ ಮೇಲೆ ಕೇಂದ್ರೀಕರಿಸುವ ಬದಲು ಏಕೆ ಎಂದು ತಿಳಿಸಲು ವಿಫಲವಾಗಿದೆ. ಅವರು ತಮ್ಮ ಹೆಚ್ಚಿನ ಶಕ್ತಿಯನ್ನು ನನ್ನನ್ನು ದುರ್ಬಲಗೊಳಿಸಲು ವಿನಿಯೋಗಿಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

“ಉದ್ದೇಶಪೂರ್ವಕವಾಗಿ ಅಥವಾ ಬೇರೆ ರೀತಿಯಲ್ಲಿ, ಅವರ ಪ್ರಚಾರವು ಸಂಪೂರ್ಣವಾಗಿ ನನ್ನ ವಿರುದ್ಧವಾಗಿದೆ. ಉದಾಹರಣೆಗೆ, ಪ್ಯಾಲೆಸ್ತೀನ್ ವಿರೋಧಿ ಮತ್ತು ಮುಸ್ಲಿಂ ವಿರೋಧಿ ಎಂದು ಆರೋಪಿಸಿ, ಇದು ಸಂಪೂರ್ಣ ಅಸಂಬದ್ಧವಾಗಿದೆ. ವಿಪರ್ಯಾಸವೆಂದರೆ, ಅವರು ಇಲ್ಲಿ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸಲು ಮತ್ತು ಬೋಧಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಕ್ಷೇತ್ರದಲ್ಲಿರುವ ತನ್ನ ಪ್ರತಿಸ್ಪರ್ಧಿಗಳೊಂದಿಗೆ ನಾನು ಚರ್ಚೆಯನ್ನು ಬಯಸುತ್ತಿದ್ದೇನೆ. ಆದರೆ, ಅವರ ಕಡೆಯಿಂದ ತೊಡಗಿಸಿಕೊಳ್ಳಲು “ಇಷ್ಟವಿಲ್ಲ” ಎಂದು ತೋರುತ್ತಿದೆ. ಅವರು ವಿವಿಧ ಸಂಘಟನೆಗಳಿಂದ ಚರ್ಚೆಗೆ ಅನೇಕ ಆಹ್ವಾನಗಳನ್ನು ತಿರಸ್ಕರಿಸಿದ್ದಾರೆ ಎಂದು ತರೂರ್ ಹೇಳಿದರು.

“ಅವರಿಗೆ ಹಿಂಜರಿಕೆ ಎಲ್ಲಿಂದ ಬರುತ್ತದೆ ಎಂದು ನನಗೆ ತಿಳಿದಿಲ್ಲ. ನಾನು ನನಗಾಗಿ ಮಾತ್ರ ಮಾತನಾಡಬಲ್ಲೆ: ಯಾವುದೇ ಚರ್ಚೆಯಲ್ಲಿ ನನ್ನದೇ ಆದದನ್ನು ಹಿಡಿದಿಟ್ಟುಕೊಳ್ಳುವ ನನ್ನ ವಿಶ್ವಾಸವು ನನ್ನ ಮತದಾರರಿಗಾಗಿ ನಾನು ಮಾಡಿದ ಕೆಲಸ ಮತ್ತು ರಾಷ್ಟ್ರೀಯ, ಜಾಗತಿಕ ಸಮಸ್ಯೆಗಳ ಬಗ್ಗೆ ನಾನು ತೆಗೆದುಕೊಂಡಿರುವ ನಿಲುವುಗಳಿಂದ ಉಂಟಾಗುತ್ತದೆ” ಎಂದು ತಿಳಿಸಿದರು.

“ರಾಜಕೀಯ ಮತ್ತು ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡೋಣ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಕೋಮುವಾದ ಮತ್ತು ಬಿಜೆಪಿಯ 10 ವರ್ಷಗಳ ದ್ವೇಷದ ರಾಜಕಾರಣದ ಬಗ್ಗೆ ಚರ್ಚೆ ಮಾಡೋಣ. ತಿರುವನಂತಪುರಂನ ಅಭಿವೃದ್ಧಿ ಮತ್ತು ಕಳೆದ 15 ರಲ್ಲಿ ನಾವು ಮಾಡಿದ ಗೋಚರ ಪ್ರಗತಿಯ ಬಗ್ಗೆಯೂ ಚರ್ಚಿಸೋಣ” ಎಂದರು.

ಇದನ್ನೂ ಓದಿ; ಮಾಂಸಹಾರ ಸೇವಿಸಿದ್ದ ವಿಪಕ್ಷ ನಾಯಕರನ್ನು ಮೊಘಲರಿಗೆ ಹೋಲಿಸಿದ ಪ್ರಧಾನಿ; ವೈಯಕ್ತಿಕ ಟೀಕೆಗಿಳಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...