Homeಚಳವಳಿಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ...

ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ ಕರೆ

ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

- Advertisement -
- Advertisement -

ಇಂಧನ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳು ಹೆಚ್ಚುತ್ತಿರುವುದರ ವಿರುದ್ಧ ಎಡ ಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ ಎಂದು ಭಾನುವಾರ ಜಂಟಿ ಹೇಳಿಕೆ ನೀಡಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನಿಸ್ಟ್)-ಲಿಬರೇಶನ್ ಸೇರಿದಂತೆ ಹಲವು ಎಡ ಪಕ್ಷಗಳು ಈ ಪ್ರತಿಭಟನೆಯನ್ನು ಬೆಂಬಲಿಸಿದೆ.

ಜೂನ್ 16 ರಂದು ಪ್ರತಿಭಟನೆ ಆರಂಭಗೊಂಡು ಜೂನ್ 30 ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹೆಚ್ಚಿದ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು, ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಲು ಎಡ ಪಕ್ಷಗಳು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

“ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನರ ಜೀವನೋಪಾಯದ ಮೇಲೆ ಹೊಡೆತ ಬೀಳುತ್ತಿವೆ. ಕೊರೊನಾ ದುರಂತದ ವಿನಾಶವನ್ನು ಎದುರಿಸಲು ಜನರಿಗೆ ಸಹಾಯ ಮಾಡುವ ಬದಲು, ನರೇಂದ್ರ ಮೋದಿ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು, ಮೇ 2 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ನಂತರ ಕನಿಷ್ಠ 21 ಪಟ್ಟು ಹೆಚ್ಚಿಸಿದೆ” ಎಂದು ಎಡ ಪಕ್ಷಗಳು ಆರೋಪಿಸಿವೆ.

“ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಹನ್ನೊಂದು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಗಳು ಏಪ್ರಿಲ್‌ನಲ್ಲಿ 5% ದಷ್ಟು ಏರಿಕೆಯಾಗಿದೆ. ಪ್ರಾಥಮಿಕ ಸರಕುಗಳ ಬೆಲೆಗಳು 10.16% ದಷ್ಟು ಏರಿಕೆಯಾಗಿದೆ ಮತ್ತು ರೆಡಿ ಉತ್ಪನ್ನಗಳ ಬೆಲೆ 9.01% ದಷ್ಟು ಏರಿಕೆಯಾಗಿದೆ. ಈ ಸರಕುಗಳು ಚಿಲ್ಲರೆ ಮಾರುಕಟ್ಟೆಗಳನ್ನು ತಲುಪುವ ಹೊತ್ತಿಗೆ, ಗ್ರಾಹಕರಿಗೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ” ಎಂದು ಎಡ ಪಕ್ಷಗಳ ಜಂಟಿ ಹೇಳಿಕೆಯು ಹೇಳಿದೆ.

ಇದನ್ನೂ ಓದಿ: ಎಚ್.ಎಸ್. ದೊರೆಸ್ವಾಮಿಯವರ ’ನೆನಪಿನ ಸುರುಳಿ ತೆರೆದಾಗ’ ಕಂಡ ಕುವೆಂಪು

ಆರ್ಥಿಕತೆಯ ತೀವ್ರ ಹಿನ್ನಡೆ, ನಿರುದ್ಯೋಗ ಹೆಚ್ಚಳ, ಕೊಳ್ಳುವ ಶಕ್ತಿ ಕುಸಿಯುವಿಕೆ ಮತ್ತು ಹಸಿವಿನ ಮಟ್ಟ ಹೆಚ್ಚಳದ ಈ ಸಂಕಷ್ಟದ ಸಮಯದಲ್ಲಿ ಬೆಲೆ ಏರಿಕೆ ನಡೆಯುತ್ತಿದೆ ಎಂದು ಎಡ ಪಕ್ಷಗಳು ತಿಳಿಸಿವೆ.

“ಸರ್ಕಾರದ ಪ್ರೋತ್ಸಾಹದಡಿಯಲ್ಲೇ ಸ್ಪಷ್ಟ ಹಾಗೂ ನಿರ್ಲಜ್ಜವಾಗಿ ಕಾಳ ಮಾರುಕಟ್ಟೆ ಮತ್ತು ಸಂಗ್ರಹಣೆ ನಡೆಯುತ್ತಿದೆ. ಮೋದಿ ಸರ್ಕಾರವು ಇಂತಹ ಕಾಳ ಮಾರುಕಟ್ಟೆಯನ್ನು, ಅದರಲ್ಲೂ ವಿಶೇಷವಾಗಿ ಅಗತ್ಯ ಔಷಧಿಗಳ ಕಾಳ ಮಾರುಕಟ್ಟೆಯನ್ನು ಕಟ್ಟುನಿಟ್ಟಾಗಿ ನಿಗ್ರಹಿಸಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆ ಪಾವತಿ ಮಾಡುವ ಅಡಿಯಲ್ಲಿ ಬರದ ಎಲ್ಲಾ ಕುಟುಂಬಗಳಿಗೆ ಒಕ್ಕೂಟ ಸರ್ಕಾರವು ತಕ್ಷಣ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳ ನೇರ ನಗದು ವರ್ಗಾವಣೆಯನ್ನು ನೀಡಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...