Homeಚಳವಳಿಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ...

ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ ಕರೆ

ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

- Advertisement -
- Advertisement -

ಇಂಧನ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳು ಹೆಚ್ಚುತ್ತಿರುವುದರ ವಿರುದ್ಧ ಎಡ ಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ ಎಂದು ಭಾನುವಾರ ಜಂಟಿ ಹೇಳಿಕೆ ನೀಡಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನಿಸ್ಟ್)-ಲಿಬರೇಶನ್ ಸೇರಿದಂತೆ ಹಲವು ಎಡ ಪಕ್ಷಗಳು ಈ ಪ್ರತಿಭಟನೆಯನ್ನು ಬೆಂಬಲಿಸಿದೆ.

ಜೂನ್ 16 ರಂದು ಪ್ರತಿಭಟನೆ ಆರಂಭಗೊಂಡು ಜೂನ್ 30 ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹೆಚ್ಚಿದ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು, ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಲು ಎಡ ಪಕ್ಷಗಳು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

“ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನರ ಜೀವನೋಪಾಯದ ಮೇಲೆ ಹೊಡೆತ ಬೀಳುತ್ತಿವೆ. ಕೊರೊನಾ ದುರಂತದ ವಿನಾಶವನ್ನು ಎದುರಿಸಲು ಜನರಿಗೆ ಸಹಾಯ ಮಾಡುವ ಬದಲು, ನರೇಂದ್ರ ಮೋದಿ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು, ಮೇ 2 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ನಂತರ ಕನಿಷ್ಠ 21 ಪಟ್ಟು ಹೆಚ್ಚಿಸಿದೆ” ಎಂದು ಎಡ ಪಕ್ಷಗಳು ಆರೋಪಿಸಿವೆ.

“ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಹನ್ನೊಂದು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಗಳು ಏಪ್ರಿಲ್‌ನಲ್ಲಿ 5% ದಷ್ಟು ಏರಿಕೆಯಾಗಿದೆ. ಪ್ರಾಥಮಿಕ ಸರಕುಗಳ ಬೆಲೆಗಳು 10.16% ದಷ್ಟು ಏರಿಕೆಯಾಗಿದೆ ಮತ್ತು ರೆಡಿ ಉತ್ಪನ್ನಗಳ ಬೆಲೆ 9.01% ದಷ್ಟು ಏರಿಕೆಯಾಗಿದೆ. ಈ ಸರಕುಗಳು ಚಿಲ್ಲರೆ ಮಾರುಕಟ್ಟೆಗಳನ್ನು ತಲುಪುವ ಹೊತ್ತಿಗೆ, ಗ್ರಾಹಕರಿಗೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ” ಎಂದು ಎಡ ಪಕ್ಷಗಳ ಜಂಟಿ ಹೇಳಿಕೆಯು ಹೇಳಿದೆ.

ಇದನ್ನೂ ಓದಿ: ಎಚ್.ಎಸ್. ದೊರೆಸ್ವಾಮಿಯವರ ’ನೆನಪಿನ ಸುರುಳಿ ತೆರೆದಾಗ’ ಕಂಡ ಕುವೆಂಪು

ಆರ್ಥಿಕತೆಯ ತೀವ್ರ ಹಿನ್ನಡೆ, ನಿರುದ್ಯೋಗ ಹೆಚ್ಚಳ, ಕೊಳ್ಳುವ ಶಕ್ತಿ ಕುಸಿಯುವಿಕೆ ಮತ್ತು ಹಸಿವಿನ ಮಟ್ಟ ಹೆಚ್ಚಳದ ಈ ಸಂಕಷ್ಟದ ಸಮಯದಲ್ಲಿ ಬೆಲೆ ಏರಿಕೆ ನಡೆಯುತ್ತಿದೆ ಎಂದು ಎಡ ಪಕ್ಷಗಳು ತಿಳಿಸಿವೆ.

“ಸರ್ಕಾರದ ಪ್ರೋತ್ಸಾಹದಡಿಯಲ್ಲೇ ಸ್ಪಷ್ಟ ಹಾಗೂ ನಿರ್ಲಜ್ಜವಾಗಿ ಕಾಳ ಮಾರುಕಟ್ಟೆ ಮತ್ತು ಸಂಗ್ರಹಣೆ ನಡೆಯುತ್ತಿದೆ. ಮೋದಿ ಸರ್ಕಾರವು ಇಂತಹ ಕಾಳ ಮಾರುಕಟ್ಟೆಯನ್ನು, ಅದರಲ್ಲೂ ವಿಶೇಷವಾಗಿ ಅಗತ್ಯ ಔಷಧಿಗಳ ಕಾಳ ಮಾರುಕಟ್ಟೆಯನ್ನು ಕಟ್ಟುನಿಟ್ಟಾಗಿ ನಿಗ್ರಹಿಸಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆ ಪಾವತಿ ಮಾಡುವ ಅಡಿಯಲ್ಲಿ ಬರದ ಎಲ್ಲಾ ಕುಟುಂಬಗಳಿಗೆ ಒಕ್ಕೂಟ ಸರ್ಕಾರವು ತಕ್ಷಣ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳ ನೇರ ನಗದು ವರ್ಗಾವಣೆಯನ್ನು ನೀಡಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...