Homeಚಳವಳಿಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ...

ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ ಕರೆ

ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

- Advertisement -
- Advertisement -

ಇಂಧನ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳು ಹೆಚ್ಚುತ್ತಿರುವುದರ ವಿರುದ್ಧ ಎಡ ಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ ಎಂದು ಭಾನುವಾರ ಜಂಟಿ ಹೇಳಿಕೆ ನೀಡಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನಿಸ್ಟ್)-ಲಿಬರೇಶನ್ ಸೇರಿದಂತೆ ಹಲವು ಎಡ ಪಕ್ಷಗಳು ಈ ಪ್ರತಿಭಟನೆಯನ್ನು ಬೆಂಬಲಿಸಿದೆ.

ಜೂನ್ 16 ರಂದು ಪ್ರತಿಭಟನೆ ಆರಂಭಗೊಂಡು ಜೂನ್ 30 ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹೆಚ್ಚಿದ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು, ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಲು ಎಡ ಪಕ್ಷಗಳು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

“ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನರ ಜೀವನೋಪಾಯದ ಮೇಲೆ ಹೊಡೆತ ಬೀಳುತ್ತಿವೆ. ಕೊರೊನಾ ದುರಂತದ ವಿನಾಶವನ್ನು ಎದುರಿಸಲು ಜನರಿಗೆ ಸಹಾಯ ಮಾಡುವ ಬದಲು, ನರೇಂದ್ರ ಮೋದಿ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು, ಮೇ 2 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ನಂತರ ಕನಿಷ್ಠ 21 ಪಟ್ಟು ಹೆಚ್ಚಿಸಿದೆ” ಎಂದು ಎಡ ಪಕ್ಷಗಳು ಆರೋಪಿಸಿವೆ.

“ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಹನ್ನೊಂದು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಗಳು ಏಪ್ರಿಲ್‌ನಲ್ಲಿ 5% ದಷ್ಟು ಏರಿಕೆಯಾಗಿದೆ. ಪ್ರಾಥಮಿಕ ಸರಕುಗಳ ಬೆಲೆಗಳು 10.16% ದಷ್ಟು ಏರಿಕೆಯಾಗಿದೆ ಮತ್ತು ರೆಡಿ ಉತ್ಪನ್ನಗಳ ಬೆಲೆ 9.01% ದಷ್ಟು ಏರಿಕೆಯಾಗಿದೆ. ಈ ಸರಕುಗಳು ಚಿಲ್ಲರೆ ಮಾರುಕಟ್ಟೆಗಳನ್ನು ತಲುಪುವ ಹೊತ್ತಿಗೆ, ಗ್ರಾಹಕರಿಗೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ” ಎಂದು ಎಡ ಪಕ್ಷಗಳ ಜಂಟಿ ಹೇಳಿಕೆಯು ಹೇಳಿದೆ.

ಇದನ್ನೂ ಓದಿ: ಎಚ್.ಎಸ್. ದೊರೆಸ್ವಾಮಿಯವರ ’ನೆನಪಿನ ಸುರುಳಿ ತೆರೆದಾಗ’ ಕಂಡ ಕುವೆಂಪು

ಆರ್ಥಿಕತೆಯ ತೀವ್ರ ಹಿನ್ನಡೆ, ನಿರುದ್ಯೋಗ ಹೆಚ್ಚಳ, ಕೊಳ್ಳುವ ಶಕ್ತಿ ಕುಸಿಯುವಿಕೆ ಮತ್ತು ಹಸಿವಿನ ಮಟ್ಟ ಹೆಚ್ಚಳದ ಈ ಸಂಕಷ್ಟದ ಸಮಯದಲ್ಲಿ ಬೆಲೆ ಏರಿಕೆ ನಡೆಯುತ್ತಿದೆ ಎಂದು ಎಡ ಪಕ್ಷಗಳು ತಿಳಿಸಿವೆ.

“ಸರ್ಕಾರದ ಪ್ರೋತ್ಸಾಹದಡಿಯಲ್ಲೇ ಸ್ಪಷ್ಟ ಹಾಗೂ ನಿರ್ಲಜ್ಜವಾಗಿ ಕಾಳ ಮಾರುಕಟ್ಟೆ ಮತ್ತು ಸಂಗ್ರಹಣೆ ನಡೆಯುತ್ತಿದೆ. ಮೋದಿ ಸರ್ಕಾರವು ಇಂತಹ ಕಾಳ ಮಾರುಕಟ್ಟೆಯನ್ನು, ಅದರಲ್ಲೂ ವಿಶೇಷವಾಗಿ ಅಗತ್ಯ ಔಷಧಿಗಳ ಕಾಳ ಮಾರುಕಟ್ಟೆಯನ್ನು ಕಟ್ಟುನಿಟ್ಟಾಗಿ ನಿಗ್ರಹಿಸಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆ ಪಾವತಿ ಮಾಡುವ ಅಡಿಯಲ್ಲಿ ಬರದ ಎಲ್ಲಾ ಕುಟುಂಬಗಳಿಗೆ ಒಕ್ಕೂಟ ಸರ್ಕಾರವು ತಕ್ಷಣ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳ ನೇರ ನಗದು ವರ್ಗಾವಣೆಯನ್ನು ನೀಡಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...