Homeಚಳವಳಿಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ...

ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡ ಪಕ್ಷಗಳ ಕರೆ

ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು ಹಾಗೂ ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

- Advertisement -
- Advertisement -

ಇಂಧನ, ಅಗತ್ಯ ವಸ್ತುಗಳು ಮತ್ತು ಔಷಧಿಗಳ ಬೆಲೆಗಳು ಹೆಚ್ಚುತ್ತಿರುವುದರ ವಿರುದ್ಧ ಎಡ ಪಕ್ಷಗಳು ಬುಧವಾರದಿಂದ ಹದಿನೈದು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿವೆ ಎಂದು ಭಾನುವಾರ ಜಂಟಿ ಹೇಳಿಕೆ ನೀಡಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಅಖಿಲ ಭಾರತ ಫಾರ್ವರ್ಡ್ ಬ್ಲಾಕ್, ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ-ಲೆನಿನಿಸ್ಟ್)-ಲಿಬರೇಶನ್ ಸೇರಿದಂತೆ ಹಲವು ಎಡ ಪಕ್ಷಗಳು ಈ ಪ್ರತಿಭಟನೆಯನ್ನು ಬೆಂಬಲಿಸಿದೆ.

ಜೂನ್ 16 ರಂದು ಪ್ರತಿಭಟನೆ ಆರಂಭಗೊಂಡು ಜೂನ್ 30 ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹೆಚ್ಚಿದ ಇಂಧನ ಬೆಲೆಯನ್ನು ಕಡಿಮೆ ಮಾಡಬೇಕು, ಅಗತ್ಯ ವಸ್ತುಗಳ ಮತ್ತು ಔಷಧಿಗಳ ಬೆಲೆಯನ್ನು ನಿಯಂತ್ರಿಸಲು ಎಡ ಪಕ್ಷಗಳು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿವೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

“ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯಾಗಿರುವುದರಿಂದ ಜನರ ಜೀವನೋಪಾಯದ ಮೇಲೆ ಹೊಡೆತ ಬೀಳುತ್ತಿವೆ. ಕೊರೊನಾ ದುರಂತದ ವಿನಾಶವನ್ನು ಎದುರಿಸಲು ಜನರಿಗೆ ಸಹಾಯ ಮಾಡುವ ಬದಲು, ನರೇಂದ್ರ ಮೋದಿ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು, ಮೇ 2 ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳ ನಂತರ ಕನಿಷ್ಠ 21 ಪಟ್ಟು ಹೆಚ್ಚಿಸಿದೆ” ಎಂದು ಎಡ ಪಕ್ಷಗಳು ಆರೋಪಿಸಿವೆ.

“ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಹನ್ನೊಂದು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಗಳು ಏಪ್ರಿಲ್‌ನಲ್ಲಿ 5% ದಷ್ಟು ಏರಿಕೆಯಾಗಿದೆ. ಪ್ರಾಥಮಿಕ ಸರಕುಗಳ ಬೆಲೆಗಳು 10.16% ದಷ್ಟು ಏರಿಕೆಯಾಗಿದೆ ಮತ್ತು ರೆಡಿ ಉತ್ಪನ್ನಗಳ ಬೆಲೆ 9.01% ದಷ್ಟು ಏರಿಕೆಯಾಗಿದೆ. ಈ ಸರಕುಗಳು ಚಿಲ್ಲರೆ ಮಾರುಕಟ್ಟೆಗಳನ್ನು ತಲುಪುವ ಹೊತ್ತಿಗೆ, ಗ್ರಾಹಕರಿಗೆ ಹೆಚ್ಚಿನ ಶುಲ್ಕ ವಿಧಿಸಲಾಗುತ್ತದೆ” ಎಂದು ಎಡ ಪಕ್ಷಗಳ ಜಂಟಿ ಹೇಳಿಕೆಯು ಹೇಳಿದೆ.

ಇದನ್ನೂ ಓದಿ: ಎಚ್.ಎಸ್. ದೊರೆಸ್ವಾಮಿಯವರ ’ನೆನಪಿನ ಸುರುಳಿ ತೆರೆದಾಗ’ ಕಂಡ ಕುವೆಂಪು

ಆರ್ಥಿಕತೆಯ ತೀವ್ರ ಹಿನ್ನಡೆ, ನಿರುದ್ಯೋಗ ಹೆಚ್ಚಳ, ಕೊಳ್ಳುವ ಶಕ್ತಿ ಕುಸಿಯುವಿಕೆ ಮತ್ತು ಹಸಿವಿನ ಮಟ್ಟ ಹೆಚ್ಚಳದ ಈ ಸಂಕಷ್ಟದ ಸಮಯದಲ್ಲಿ ಬೆಲೆ ಏರಿಕೆ ನಡೆಯುತ್ತಿದೆ ಎಂದು ಎಡ ಪಕ್ಷಗಳು ತಿಳಿಸಿವೆ.

“ಸರ್ಕಾರದ ಪ್ರೋತ್ಸಾಹದಡಿಯಲ್ಲೇ ಸ್ಪಷ್ಟ ಹಾಗೂ ನಿರ್ಲಜ್ಜವಾಗಿ ಕಾಳ ಮಾರುಕಟ್ಟೆ ಮತ್ತು ಸಂಗ್ರಹಣೆ ನಡೆಯುತ್ತಿದೆ. ಮೋದಿ ಸರ್ಕಾರವು ಇಂತಹ ಕಾಳ ಮಾರುಕಟ್ಟೆಯನ್ನು, ಅದರಲ್ಲೂ ವಿಶೇಷವಾಗಿ ಅಗತ್ಯ ಔಷಧಿಗಳ ಕಾಳ ಮಾರುಕಟ್ಟೆಯನ್ನು ಕಟ್ಟುನಿಟ್ಟಾಗಿ ನಿಗ್ರಹಿಸಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆ ಪಾವತಿ ಮಾಡುವ ಅಡಿಯಲ್ಲಿ ಬರದ ಎಲ್ಲಾ ಕುಟುಂಬಗಳಿಗೆ ಒಕ್ಕೂಟ ಸರ್ಕಾರವು ತಕ್ಷಣ ಆರು ತಿಂಗಳವರೆಗೆ ತಿಂಗಳಿಗೆ 7,500 ರೂ.ಗಳ ನೇರ ನಗದು ವರ್ಗಾವಣೆಯನ್ನು ನೀಡಬೇಕು ಎಂದು ಎಡ ಪಕ್ಷಗಳು ಒತ್ತಾಯಿಸಿವೆ.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...