Homeಕರ್ನಾಟಕಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರಿಂದ ರಂಗಪಾಠ

- Advertisement -
- Advertisement -

ವಿವಾದಗಳಿಂದಲೇ ಸದಾ ಚರ್ಚೆಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ರಂಗಪಾಠ ಮಾಡಿದ್ದಾರೆ.

ಎಡಪಂಥೀಯರ ಕುರಿತು ವಾಗ್ದಾಳಿ ನಡೆಸುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ ಬಹಿರಂಗ ಪತ್ರ ಬರೆದಿರುವ ಅವರು, “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿವೆ” ಎಂದು ತಿಳಿಸಿದ್ದಾರೆ.

ಪತ್ರದ ಪೂರ್ಣ ಪಠ್ಯ:

ಮಾನ್ಯರೇ,

ಕಳೆದ ಕೆಲವು ದಿನಗಳಿಂದ ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರಿಂದಾಗಿ ‘ರಂಗಾಯಣ ಮೈಸೂರು’ ವಿವಾದಗಳ ಕಗ್ಗಾಡಿನಲ್ಲಿ ಸಿಕ್ಕಿಬಿದ್ದಿದೆ. ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ.

ನಾನು ಬಿ.ವಿ.ಕಾರಂತರು ರಂಗಾಯಣವನ್ನು ಆರಂಭಿಸಿದಾಗಲೇ ನಟನಾಗಿ, ಕೆಲಸಗಾರನಾಗಿ, ನಿರಂತರವಾಗಿ ತೊಡಗಿಸಿಕೊಂಡು ನಿವೃತ್ತನಾದವನು. ನಾನು ರಂಗಾಯಣದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಅವರಲ್ಲಿ ಯಾರೂ ರಂಗಭೂಮಿಯ ಶಕ್ತಿಗೆ, ಸಾಧ್ಯತೆಗಳಿಗೆ ವಿರೋಧವೆನಿಸುವ ಕೆಲಸ ಮಾಡಿದ ಉದಾಹರಣೆ ಇಲ್ಲ. ಆದರೆ ಒಬ್ಬ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮಾನ್ಯ ಅಡ್ಡಂಡ ಕಾರ್ಯಪ್ಪನವರು ಬಂದ ಬಳಿಕ ತಾನು ಹೇಳಿದ್ದೇ ಮಾತು, ತಾನು ಹೇಳಿದಂತೆಯೇ ಆಗಬೇಕು. ಇತ್ಯಾದಿಯಾಗಿ ಹೇಳುತ್ತಾ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ.

ಅವರು ಯಾವುದೇ ಪಕ್ಷದ ಸಂಘಟನೆಯ ಕಾರ್ಯಕರ್ತನಾಗಿರಲಿ. ಒಂದು ಸಾರ್ವಜನಿಕ ಸಂಸ್ಥೆಯ ನೇತೃತ್ವ ವಹಿಸಿದ ಬಳಿಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಂಗಭೂಮಿಯ ಕಾಯಕವನ್ನು ನಿರ್ವಹಿಸಬೇಕು. ಇದು ರಂಗಭೂಮಿಯಲ್ಲಿ ಕೆಲಸ ಮಾಡುವ ಎಲ್ಲರ ಜವಾಬ್ದಾರಿ.

ಸಂಸ್ಥೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನಡೆಸಿದ ಎಲ್ಲ ಚಟುವಟಿಕೆಗಳು, ಮಾತುಗಳು, ವಿಡಿಯೋಗಳು ಅವರು ಅಂತರಂಗದಲ್ಲಿ ಎಂತಹ ವ್ಯಕ್ತಿತ್ವವುಳ್ಳವರು ಎಂಬುದನ್ನು ಬಹಿರಂಗಗೊಳಿಸಿವೆ. ಅವರು ಉಳಿದವರನ್ನು ನಿಂದಿಸುವ ರಭಸದಲ್ಲಿ ಮುಖ್ಯವಾಗಿ ಎಡಪಂಥೀಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ನಾಡಿನಲ್ಲಿ ಹೆಸರು ಮಾಡಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮತ್ತು ಖ್ಯಾತ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿಯವರನ್ನು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎನ್ನುವುದು ಬೇರೆ ಮಾತು. ಆದರೆ “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿ” ಎಂದು ಅವರಿಗೆ ತಿಳಿಯದೇ ಹೋಗುತ್ತದೆ.

ರಂಗಭೂಮಿ ಒಬ್ಬನದ್ದಲ್ಲ. ಅದು ಸಮೂಹ ಸೃಷ್ಟಿ. ನಟ ನಟಿಯರು, ನಿರ್ದೇಶಕರು ಮತ್ತು ಪ್ರೇಕ್ಷಕರು ಒಟ್ಟಾಗಿ ನಡೆಸುವ ಸಂವಹನ ಸಂಸ್ಕೃತಿ. ಅವರು ಎಷ್ಟೇ ಸಮರ್ಥನೆ ಮಾಡಿದರೂ ಪ್ರೇಕ್ಷಕರು ಮತ್ತು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುವುದರಿಂದ ಮಾನ್ಯ ಕಾರ್ಯಪ್ಪನವರು ತಮ್ಮಿಂದಾಗುತ್ತಿರುವ ತಪ್ಪು ಹೇಳಿಕೆಗಳನ್ನು ಧೋರಣೆಗಳನ್ನು ಗುರುತಿಸಿಕೊಳ್ಳಬೇಕು. ಅವರಿಗೆ ಒದಗಿರುವ ಗೌರವದ ನಿರ್ದೇಶಕನ ಸ್ಥಾನ ಮತ್ತು ಅವಕಾಶವನ್ನು ಸದುಪಯೋಗಗೊಳಿಸಬೇಕು. ಈ ಅವಕಾಶ ತಾತ್ಕಾಲಿಕವಾದದ್ದು, ರಂಗಭೂಮಿ ಯಾವತ್ತೂ ಜೀವಂತವಾಗಿ ಉಳಿಯುತ್ತದೆ. ಅದನ್ನು ಉಳಿಸುವುದು ಎಲ್ಲರ ಜವಾಬ್ದಾರಿ. ಸರ್ವಾಧಿಕಾರಿ ನಿಲುವುಗಳನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ, ವಿರೋಧಿಸುತ್ತಾರೆ, ಪ್ರತಿಭಟಿಸುತ್ತಾರೆ. ಇದು ಅವರೇ ಘೋಷಿಸಿಕೊಳ್ಳುವ ಸಂಸ್ಥೆ, ಪಕ್ಷ, ಸರಕಾರದವರು ಕೂಡಾ ಒಪ್ಪಿಕೊಳ್ಳಲಾರದ ವಿಚಾರವಾಗಿದೆ. ಆ ಸಂಸ್ಥೆಗಳವರೇ ಅಡ್ಡಂಡ ಕಾರ್ಯಪ್ಪನವರನ್ನು ತಮ್ಮ ಪಕ್ಷ, ಸಂಸ್ಥೆ ವಿರೋಧಿ ಧೋರಣೆಗಳಿಗಾಗಿ ದೂರ ತಳ್ಳುತ್ತಾರೆ, ತಿಳಿದಿರಲಿ.

ಮೈಮ್ ರಮೇಶ,
ರಂಗನಿರ್ದೇಶಕ, ನಿವೃತ್ತ ರಂಗಾಯಣ ಕಲಾವಿದ, ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...