Homeಕರ್ನಾಟಕಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರಿಂದ ರಂಗಪಾಠ

- Advertisement -
- Advertisement -

ವಿವಾದಗಳಿಂದಲೇ ಸದಾ ಚರ್ಚೆಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ರಂಗಪಾಠ ಮಾಡಿದ್ದಾರೆ.

ಎಡಪಂಥೀಯರ ಕುರಿತು ವಾಗ್ದಾಳಿ ನಡೆಸುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ ಬಹಿರಂಗ ಪತ್ರ ಬರೆದಿರುವ ಅವರು, “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿವೆ” ಎಂದು ತಿಳಿಸಿದ್ದಾರೆ.

ಪತ್ರದ ಪೂರ್ಣ ಪಠ್ಯ:

ಮಾನ್ಯರೇ,

ಕಳೆದ ಕೆಲವು ದಿನಗಳಿಂದ ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರಿಂದಾಗಿ ‘ರಂಗಾಯಣ ಮೈಸೂರು’ ವಿವಾದಗಳ ಕಗ್ಗಾಡಿನಲ್ಲಿ ಸಿಕ್ಕಿಬಿದ್ದಿದೆ. ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ.

ನಾನು ಬಿ.ವಿ.ಕಾರಂತರು ರಂಗಾಯಣವನ್ನು ಆರಂಭಿಸಿದಾಗಲೇ ನಟನಾಗಿ, ಕೆಲಸಗಾರನಾಗಿ, ನಿರಂತರವಾಗಿ ತೊಡಗಿಸಿಕೊಂಡು ನಿವೃತ್ತನಾದವನು. ನಾನು ರಂಗಾಯಣದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಅವರಲ್ಲಿ ಯಾರೂ ರಂಗಭೂಮಿಯ ಶಕ್ತಿಗೆ, ಸಾಧ್ಯತೆಗಳಿಗೆ ವಿರೋಧವೆನಿಸುವ ಕೆಲಸ ಮಾಡಿದ ಉದಾಹರಣೆ ಇಲ್ಲ. ಆದರೆ ಒಬ್ಬ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮಾನ್ಯ ಅಡ್ಡಂಡ ಕಾರ್ಯಪ್ಪನವರು ಬಂದ ಬಳಿಕ ತಾನು ಹೇಳಿದ್ದೇ ಮಾತು, ತಾನು ಹೇಳಿದಂತೆಯೇ ಆಗಬೇಕು. ಇತ್ಯಾದಿಯಾಗಿ ಹೇಳುತ್ತಾ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ.

ಅವರು ಯಾವುದೇ ಪಕ್ಷದ ಸಂಘಟನೆಯ ಕಾರ್ಯಕರ್ತನಾಗಿರಲಿ. ಒಂದು ಸಾರ್ವಜನಿಕ ಸಂಸ್ಥೆಯ ನೇತೃತ್ವ ವಹಿಸಿದ ಬಳಿಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಂಗಭೂಮಿಯ ಕಾಯಕವನ್ನು ನಿರ್ವಹಿಸಬೇಕು. ಇದು ರಂಗಭೂಮಿಯಲ್ಲಿ ಕೆಲಸ ಮಾಡುವ ಎಲ್ಲರ ಜವಾಬ್ದಾರಿ.

ಸಂಸ್ಥೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನಡೆಸಿದ ಎಲ್ಲ ಚಟುವಟಿಕೆಗಳು, ಮಾತುಗಳು, ವಿಡಿಯೋಗಳು ಅವರು ಅಂತರಂಗದಲ್ಲಿ ಎಂತಹ ವ್ಯಕ್ತಿತ್ವವುಳ್ಳವರು ಎಂಬುದನ್ನು ಬಹಿರಂಗಗೊಳಿಸಿವೆ. ಅವರು ಉಳಿದವರನ್ನು ನಿಂದಿಸುವ ರಭಸದಲ್ಲಿ ಮುಖ್ಯವಾಗಿ ಎಡಪಂಥೀಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ನಾಡಿನಲ್ಲಿ ಹೆಸರು ಮಾಡಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮತ್ತು ಖ್ಯಾತ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿಯವರನ್ನು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎನ್ನುವುದು ಬೇರೆ ಮಾತು. ಆದರೆ “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿ” ಎಂದು ಅವರಿಗೆ ತಿಳಿಯದೇ ಹೋಗುತ್ತದೆ.

ರಂಗಭೂಮಿ ಒಬ್ಬನದ್ದಲ್ಲ. ಅದು ಸಮೂಹ ಸೃಷ್ಟಿ. ನಟ ನಟಿಯರು, ನಿರ್ದೇಶಕರು ಮತ್ತು ಪ್ರೇಕ್ಷಕರು ಒಟ್ಟಾಗಿ ನಡೆಸುವ ಸಂವಹನ ಸಂಸ್ಕೃತಿ. ಅವರು ಎಷ್ಟೇ ಸಮರ್ಥನೆ ಮಾಡಿದರೂ ಪ್ರೇಕ್ಷಕರು ಮತ್ತು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುವುದರಿಂದ ಮಾನ್ಯ ಕಾರ್ಯಪ್ಪನವರು ತಮ್ಮಿಂದಾಗುತ್ತಿರುವ ತಪ್ಪು ಹೇಳಿಕೆಗಳನ್ನು ಧೋರಣೆಗಳನ್ನು ಗುರುತಿಸಿಕೊಳ್ಳಬೇಕು. ಅವರಿಗೆ ಒದಗಿರುವ ಗೌರವದ ನಿರ್ದೇಶಕನ ಸ್ಥಾನ ಮತ್ತು ಅವಕಾಶವನ್ನು ಸದುಪಯೋಗಗೊಳಿಸಬೇಕು. ಈ ಅವಕಾಶ ತಾತ್ಕಾಲಿಕವಾದದ್ದು, ರಂಗಭೂಮಿ ಯಾವತ್ತೂ ಜೀವಂತವಾಗಿ ಉಳಿಯುತ್ತದೆ. ಅದನ್ನು ಉಳಿಸುವುದು ಎಲ್ಲರ ಜವಾಬ್ದಾರಿ. ಸರ್ವಾಧಿಕಾರಿ ನಿಲುವುಗಳನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ, ವಿರೋಧಿಸುತ್ತಾರೆ, ಪ್ರತಿಭಟಿಸುತ್ತಾರೆ. ಇದು ಅವರೇ ಘೋಷಿಸಿಕೊಳ್ಳುವ ಸಂಸ್ಥೆ, ಪಕ್ಷ, ಸರಕಾರದವರು ಕೂಡಾ ಒಪ್ಪಿಕೊಳ್ಳಲಾರದ ವಿಚಾರವಾಗಿದೆ. ಆ ಸಂಸ್ಥೆಗಳವರೇ ಅಡ್ಡಂಡ ಕಾರ್ಯಪ್ಪನವರನ್ನು ತಮ್ಮ ಪಕ್ಷ, ಸಂಸ್ಥೆ ವಿರೋಧಿ ಧೋರಣೆಗಳಿಗಾಗಿ ದೂರ ತಳ್ಳುತ್ತಾರೆ, ತಿಳಿದಿರಲಿ.

ಮೈಮ್ ರಮೇಶ,
ರಂಗನಿರ್ದೇಶಕ, ನಿವೃತ್ತ ರಂಗಾಯಣ ಕಲಾವಿದ, ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...