Homeಕರ್ನಾಟಕಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರಿಂದ ರಂಗಪಾಠ

- Advertisement -
- Advertisement -

ವಿವಾದಗಳಿಂದಲೇ ಸದಾ ಚರ್ಚೆಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ರಂಗಪಾಠ ಮಾಡಿದ್ದಾರೆ.

ಎಡಪಂಥೀಯರ ಕುರಿತು ವಾಗ್ದಾಳಿ ನಡೆಸುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ ಬಹಿರಂಗ ಪತ್ರ ಬರೆದಿರುವ ಅವರು, “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿವೆ” ಎಂದು ತಿಳಿಸಿದ್ದಾರೆ.

ಪತ್ರದ ಪೂರ್ಣ ಪಠ್ಯ:

ಮಾನ್ಯರೇ,

ಕಳೆದ ಕೆಲವು ದಿನಗಳಿಂದ ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರಿಂದಾಗಿ ‘ರಂಗಾಯಣ ಮೈಸೂರು’ ವಿವಾದಗಳ ಕಗ್ಗಾಡಿನಲ್ಲಿ ಸಿಕ್ಕಿಬಿದ್ದಿದೆ. ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ.

ನಾನು ಬಿ.ವಿ.ಕಾರಂತರು ರಂಗಾಯಣವನ್ನು ಆರಂಭಿಸಿದಾಗಲೇ ನಟನಾಗಿ, ಕೆಲಸಗಾರನಾಗಿ, ನಿರಂತರವಾಗಿ ತೊಡಗಿಸಿಕೊಂಡು ನಿವೃತ್ತನಾದವನು. ನಾನು ರಂಗಾಯಣದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಅವರಲ್ಲಿ ಯಾರೂ ರಂಗಭೂಮಿಯ ಶಕ್ತಿಗೆ, ಸಾಧ್ಯತೆಗಳಿಗೆ ವಿರೋಧವೆನಿಸುವ ಕೆಲಸ ಮಾಡಿದ ಉದಾಹರಣೆ ಇಲ್ಲ. ಆದರೆ ಒಬ್ಬ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮಾನ್ಯ ಅಡ್ಡಂಡ ಕಾರ್ಯಪ್ಪನವರು ಬಂದ ಬಳಿಕ ತಾನು ಹೇಳಿದ್ದೇ ಮಾತು, ತಾನು ಹೇಳಿದಂತೆಯೇ ಆಗಬೇಕು. ಇತ್ಯಾದಿಯಾಗಿ ಹೇಳುತ್ತಾ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ.

ಅವರು ಯಾವುದೇ ಪಕ್ಷದ ಸಂಘಟನೆಯ ಕಾರ್ಯಕರ್ತನಾಗಿರಲಿ. ಒಂದು ಸಾರ್ವಜನಿಕ ಸಂಸ್ಥೆಯ ನೇತೃತ್ವ ವಹಿಸಿದ ಬಳಿಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಂಗಭೂಮಿಯ ಕಾಯಕವನ್ನು ನಿರ್ವಹಿಸಬೇಕು. ಇದು ರಂಗಭೂಮಿಯಲ್ಲಿ ಕೆಲಸ ಮಾಡುವ ಎಲ್ಲರ ಜವಾಬ್ದಾರಿ.

ಸಂಸ್ಥೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನಡೆಸಿದ ಎಲ್ಲ ಚಟುವಟಿಕೆಗಳು, ಮಾತುಗಳು, ವಿಡಿಯೋಗಳು ಅವರು ಅಂತರಂಗದಲ್ಲಿ ಎಂತಹ ವ್ಯಕ್ತಿತ್ವವುಳ್ಳವರು ಎಂಬುದನ್ನು ಬಹಿರಂಗಗೊಳಿಸಿವೆ. ಅವರು ಉಳಿದವರನ್ನು ನಿಂದಿಸುವ ರಭಸದಲ್ಲಿ ಮುಖ್ಯವಾಗಿ ಎಡಪಂಥೀಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ನಾಡಿನಲ್ಲಿ ಹೆಸರು ಮಾಡಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮತ್ತು ಖ್ಯಾತ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿಯವರನ್ನು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎನ್ನುವುದು ಬೇರೆ ಮಾತು. ಆದರೆ “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿ” ಎಂದು ಅವರಿಗೆ ತಿಳಿಯದೇ ಹೋಗುತ್ತದೆ.

ರಂಗಭೂಮಿ ಒಬ್ಬನದ್ದಲ್ಲ. ಅದು ಸಮೂಹ ಸೃಷ್ಟಿ. ನಟ ನಟಿಯರು, ನಿರ್ದೇಶಕರು ಮತ್ತು ಪ್ರೇಕ್ಷಕರು ಒಟ್ಟಾಗಿ ನಡೆಸುವ ಸಂವಹನ ಸಂಸ್ಕೃತಿ. ಅವರು ಎಷ್ಟೇ ಸಮರ್ಥನೆ ಮಾಡಿದರೂ ಪ್ರೇಕ್ಷಕರು ಮತ್ತು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುವುದರಿಂದ ಮಾನ್ಯ ಕಾರ್ಯಪ್ಪನವರು ತಮ್ಮಿಂದಾಗುತ್ತಿರುವ ತಪ್ಪು ಹೇಳಿಕೆಗಳನ್ನು ಧೋರಣೆಗಳನ್ನು ಗುರುತಿಸಿಕೊಳ್ಳಬೇಕು. ಅವರಿಗೆ ಒದಗಿರುವ ಗೌರವದ ನಿರ್ದೇಶಕನ ಸ್ಥಾನ ಮತ್ತು ಅವಕಾಶವನ್ನು ಸದುಪಯೋಗಗೊಳಿಸಬೇಕು. ಈ ಅವಕಾಶ ತಾತ್ಕಾಲಿಕವಾದದ್ದು, ರಂಗಭೂಮಿ ಯಾವತ್ತೂ ಜೀವಂತವಾಗಿ ಉಳಿಯುತ್ತದೆ. ಅದನ್ನು ಉಳಿಸುವುದು ಎಲ್ಲರ ಜವಾಬ್ದಾರಿ. ಸರ್ವಾಧಿಕಾರಿ ನಿಲುವುಗಳನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ, ವಿರೋಧಿಸುತ್ತಾರೆ, ಪ್ರತಿಭಟಿಸುತ್ತಾರೆ. ಇದು ಅವರೇ ಘೋಷಿಸಿಕೊಳ್ಳುವ ಸಂಸ್ಥೆ, ಪಕ್ಷ, ಸರಕಾರದವರು ಕೂಡಾ ಒಪ್ಪಿಕೊಳ್ಳಲಾರದ ವಿಚಾರವಾಗಿದೆ. ಆ ಸಂಸ್ಥೆಗಳವರೇ ಅಡ್ಡಂಡ ಕಾರ್ಯಪ್ಪನವರನ್ನು ತಮ್ಮ ಪಕ್ಷ, ಸಂಸ್ಥೆ ವಿರೋಧಿ ಧೋರಣೆಗಳಿಗಾಗಿ ದೂರ ತಳ್ಳುತ್ತಾರೆ, ತಿಳಿದಿರಲಿ.

ಮೈಮ್ ರಮೇಶ,
ರಂಗನಿರ್ದೇಶಕ, ನಿವೃತ್ತ ರಂಗಾಯಣ ಕಲಾವಿದ, ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...