Homeಕರ್ನಾಟಕಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರಿಂದ ರಂಗಪಾಠ

- Advertisement -
- Advertisement -

ವಿವಾದಗಳಿಂದಲೇ ಸದಾ ಚರ್ಚೆಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ರಂಗಪಾಠ ಮಾಡಿದ್ದಾರೆ.

ಎಡಪಂಥೀಯರ ಕುರಿತು ವಾಗ್ದಾಳಿ ನಡೆಸುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ ಬಹಿರಂಗ ಪತ್ರ ಬರೆದಿರುವ ಅವರು, “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿವೆ” ಎಂದು ತಿಳಿಸಿದ್ದಾರೆ.

ಪತ್ರದ ಪೂರ್ಣ ಪಠ್ಯ:

ಮಾನ್ಯರೇ,

ಕಳೆದ ಕೆಲವು ದಿನಗಳಿಂದ ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರಿಂದಾಗಿ ‘ರಂಗಾಯಣ ಮೈಸೂರು’ ವಿವಾದಗಳ ಕಗ್ಗಾಡಿನಲ್ಲಿ ಸಿಕ್ಕಿಬಿದ್ದಿದೆ. ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ.

ನಾನು ಬಿ.ವಿ.ಕಾರಂತರು ರಂಗಾಯಣವನ್ನು ಆರಂಭಿಸಿದಾಗಲೇ ನಟನಾಗಿ, ಕೆಲಸಗಾರನಾಗಿ, ನಿರಂತರವಾಗಿ ತೊಡಗಿಸಿಕೊಂಡು ನಿವೃತ್ತನಾದವನು. ನಾನು ರಂಗಾಯಣದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಅವರಲ್ಲಿ ಯಾರೂ ರಂಗಭೂಮಿಯ ಶಕ್ತಿಗೆ, ಸಾಧ್ಯತೆಗಳಿಗೆ ವಿರೋಧವೆನಿಸುವ ಕೆಲಸ ಮಾಡಿದ ಉದಾಹರಣೆ ಇಲ್ಲ. ಆದರೆ ಒಬ್ಬ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮಾನ್ಯ ಅಡ್ಡಂಡ ಕಾರ್ಯಪ್ಪನವರು ಬಂದ ಬಳಿಕ ತಾನು ಹೇಳಿದ್ದೇ ಮಾತು, ತಾನು ಹೇಳಿದಂತೆಯೇ ಆಗಬೇಕು. ಇತ್ಯಾದಿಯಾಗಿ ಹೇಳುತ್ತಾ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ.

ಅವರು ಯಾವುದೇ ಪಕ್ಷದ ಸಂಘಟನೆಯ ಕಾರ್ಯಕರ್ತನಾಗಿರಲಿ. ಒಂದು ಸಾರ್ವಜನಿಕ ಸಂಸ್ಥೆಯ ನೇತೃತ್ವ ವಹಿಸಿದ ಬಳಿಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಂಗಭೂಮಿಯ ಕಾಯಕವನ್ನು ನಿರ್ವಹಿಸಬೇಕು. ಇದು ರಂಗಭೂಮಿಯಲ್ಲಿ ಕೆಲಸ ಮಾಡುವ ಎಲ್ಲರ ಜವಾಬ್ದಾರಿ.

ಸಂಸ್ಥೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನಡೆಸಿದ ಎಲ್ಲ ಚಟುವಟಿಕೆಗಳು, ಮಾತುಗಳು, ವಿಡಿಯೋಗಳು ಅವರು ಅಂತರಂಗದಲ್ಲಿ ಎಂತಹ ವ್ಯಕ್ತಿತ್ವವುಳ್ಳವರು ಎಂಬುದನ್ನು ಬಹಿರಂಗಗೊಳಿಸಿವೆ. ಅವರು ಉಳಿದವರನ್ನು ನಿಂದಿಸುವ ರಭಸದಲ್ಲಿ ಮುಖ್ಯವಾಗಿ ಎಡಪಂಥೀಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ನಾಡಿನಲ್ಲಿ ಹೆಸರು ಮಾಡಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮತ್ತು ಖ್ಯಾತ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿಯವರನ್ನು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎನ್ನುವುದು ಬೇರೆ ಮಾತು. ಆದರೆ “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿ” ಎಂದು ಅವರಿಗೆ ತಿಳಿಯದೇ ಹೋಗುತ್ತದೆ.

ರಂಗಭೂಮಿ ಒಬ್ಬನದ್ದಲ್ಲ. ಅದು ಸಮೂಹ ಸೃಷ್ಟಿ. ನಟ ನಟಿಯರು, ನಿರ್ದೇಶಕರು ಮತ್ತು ಪ್ರೇಕ್ಷಕರು ಒಟ್ಟಾಗಿ ನಡೆಸುವ ಸಂವಹನ ಸಂಸ್ಕೃತಿ. ಅವರು ಎಷ್ಟೇ ಸಮರ್ಥನೆ ಮಾಡಿದರೂ ಪ್ರೇಕ್ಷಕರು ಮತ್ತು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುವುದರಿಂದ ಮಾನ್ಯ ಕಾರ್ಯಪ್ಪನವರು ತಮ್ಮಿಂದಾಗುತ್ತಿರುವ ತಪ್ಪು ಹೇಳಿಕೆಗಳನ್ನು ಧೋರಣೆಗಳನ್ನು ಗುರುತಿಸಿಕೊಳ್ಳಬೇಕು. ಅವರಿಗೆ ಒದಗಿರುವ ಗೌರವದ ನಿರ್ದೇಶಕನ ಸ್ಥಾನ ಮತ್ತು ಅವಕಾಶವನ್ನು ಸದುಪಯೋಗಗೊಳಿಸಬೇಕು. ಈ ಅವಕಾಶ ತಾತ್ಕಾಲಿಕವಾದದ್ದು, ರಂಗಭೂಮಿ ಯಾವತ್ತೂ ಜೀವಂತವಾಗಿ ಉಳಿಯುತ್ತದೆ. ಅದನ್ನು ಉಳಿಸುವುದು ಎಲ್ಲರ ಜವಾಬ್ದಾರಿ. ಸರ್ವಾಧಿಕಾರಿ ನಿಲುವುಗಳನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ, ವಿರೋಧಿಸುತ್ತಾರೆ, ಪ್ರತಿಭಟಿಸುತ್ತಾರೆ. ಇದು ಅವರೇ ಘೋಷಿಸಿಕೊಳ್ಳುವ ಸಂಸ್ಥೆ, ಪಕ್ಷ, ಸರಕಾರದವರು ಕೂಡಾ ಒಪ್ಪಿಕೊಳ್ಳಲಾರದ ವಿಚಾರವಾಗಿದೆ. ಆ ಸಂಸ್ಥೆಗಳವರೇ ಅಡ್ಡಂಡ ಕಾರ್ಯಪ್ಪನವರನ್ನು ತಮ್ಮ ಪಕ್ಷ, ಸಂಸ್ಥೆ ವಿರೋಧಿ ಧೋರಣೆಗಳಿಗಾಗಿ ದೂರ ತಳ್ಳುತ್ತಾರೆ, ತಿಳಿದಿರಲಿ.

ಮೈಮ್ ರಮೇಶ,
ರಂಗನಿರ್ದೇಶಕ, ನಿವೃತ್ತ ರಂಗಾಯಣ ಕಲಾವಿದ, ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...