Homeಕರ್ನಾಟಕಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಕಾದಂಬರಿ, ರಂಗಕೃತಿಗೆ ಎಡಪಂಥೀಯ ಧೋರಣೆ ಆಧಾರ: ಮೈಮ್‌ ರಮೇಶ್

ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್ ರಮೇಶ್ ಅವರಿಂದ ರಂಗಪಾಠ

- Advertisement -
- Advertisement -

ವಿವಾದಗಳಿಂದಲೇ ಸದಾ ಚರ್ಚೆಯಲ್ಲಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ರಂಗಾಯಣದ ನಿವೃತ್ತ ಕಲಾವಿದ, ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ರಂಗಪಾಠ ಮಾಡಿದ್ದಾರೆ.

ಎಡಪಂಥೀಯರ ಕುರಿತು ವಾಗ್ದಾಳಿ ನಡೆಸುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ ಬಹಿರಂಗ ಪತ್ರ ಬರೆದಿರುವ ಅವರು, “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿವೆ” ಎಂದು ತಿಳಿಸಿದ್ದಾರೆ.

ಪತ್ರದ ಪೂರ್ಣ ಪಠ್ಯ:

ಮಾನ್ಯರೇ,

ಕಳೆದ ಕೆಲವು ದಿನಗಳಿಂದ ಮೈಸೂರು ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ಅವರಿಂದಾಗಿ ‘ರಂಗಾಯಣ ಮೈಸೂರು’ ವಿವಾದಗಳ ಕಗ್ಗಾಡಿನಲ್ಲಿ ಸಿಕ್ಕಿಬಿದ್ದಿದೆ. ರಂಗಭೂಮಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲರೂ ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ.

ನಾನು ಬಿ.ವಿ.ಕಾರಂತರು ರಂಗಾಯಣವನ್ನು ಆರಂಭಿಸಿದಾಗಲೇ ನಟನಾಗಿ, ಕೆಲಸಗಾರನಾಗಿ, ನಿರಂತರವಾಗಿ ತೊಡಗಿಸಿಕೊಂಡು ನಿವೃತ್ತನಾದವನು. ನಾನು ರಂಗಾಯಣದ ಹಲವು ನಿರ್ದೇಶಕರ ಜೊತೆ ಕೆಲಸ ಮಾಡಿದ್ದೇನೆ. ಅವರಲ್ಲಿ ಯಾರೂ ರಂಗಭೂಮಿಯ ಶಕ್ತಿಗೆ, ಸಾಧ್ಯತೆಗಳಿಗೆ ವಿರೋಧವೆನಿಸುವ ಕೆಲಸ ಮಾಡಿದ ಉದಾಹರಣೆ ಇಲ್ಲ. ಆದರೆ ಒಬ್ಬ ನಟನಾಗಿ, ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮಾನ್ಯ ಅಡ್ಡಂಡ ಕಾರ್ಯಪ್ಪನವರು ಬಂದ ಬಳಿಕ ತಾನು ಹೇಳಿದ್ದೇ ಮಾತು, ತಾನು ಹೇಳಿದಂತೆಯೇ ಆಗಬೇಕು. ಇತ್ಯಾದಿಯಾಗಿ ಹೇಳುತ್ತಾ ಸರ್ವಾಧಿಕಾರಿ ಧೋರಣೆ ತಾಳಿದ್ದಾರೆ.

ಅವರು ಯಾವುದೇ ಪಕ್ಷದ ಸಂಘಟನೆಯ ಕಾರ್ಯಕರ್ತನಾಗಿರಲಿ. ಒಂದು ಸಾರ್ವಜನಿಕ ಸಂಸ್ಥೆಯ ನೇತೃತ್ವ ವಹಿಸಿದ ಬಳಿಕ ಪ್ರಜಾಪ್ರಭುತ್ವ ಮಾದರಿಯಲ್ಲಿ ಕೆಲಸ ನಿರ್ವಹಿಸಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಂಗಭೂಮಿಯ ಕಾಯಕವನ್ನು ನಿರ್ವಹಿಸಬೇಕು. ಇದು ರಂಗಭೂಮಿಯಲ್ಲಿ ಕೆಲಸ ಮಾಡುವ ಎಲ್ಲರ ಜವಾಬ್ದಾರಿ.

ಸಂಸ್ಥೆಯ ಜವಾಬ್ದಾರಿ ಸ್ವೀಕರಿಸಿದ ಬಳಿಕ ಅವರು ನಡೆಸಿದ ಎಲ್ಲ ಚಟುವಟಿಕೆಗಳು, ಮಾತುಗಳು, ವಿಡಿಯೋಗಳು ಅವರು ಅಂತರಂಗದಲ್ಲಿ ಎಂತಹ ವ್ಯಕ್ತಿತ್ವವುಳ್ಳವರು ಎಂಬುದನ್ನು ಬಹಿರಂಗಗೊಳಿಸಿವೆ. ಅವರು ಉಳಿದವರನ್ನು ನಿಂದಿಸುವ ರಭಸದಲ್ಲಿ ಮುಖ್ಯವಾಗಿ ಎಡಪಂಥೀಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ನಾಡಿನಲ್ಲಿ ಹೆಸರು ಮಾಡಿರುವ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರನ್ನು ಮತ್ತು ಖ್ಯಾತ ರಂಗ ನಿರ್ದೇಶಕ ಪ್ರಕಾಶ್ ಬೆಳವಾಡಿಯವರನ್ನು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಒಪ್ಪಿಗೆ ಇದೆಯೋ ಇಲ್ಲವೋ ಎನ್ನುವುದು ಬೇರೆ ಮಾತು. ಆದರೆ “ಕಾದಂಬರಿ ಮತ್ತು ರಂಗಕೃತಿ ಎರಡೂ ಜಾಗತಿಕವಾಗಿ ಚಾಲ್ತಿಯಲ್ಲಿರುವ ಎಡಪಂಥೀಯ ಧೋರಣೆಯನ್ನು ಆಧರಿಸಿ” ಎಂದು ಅವರಿಗೆ ತಿಳಿಯದೇ ಹೋಗುತ್ತದೆ.

ರಂಗಭೂಮಿ ಒಬ್ಬನದ್ದಲ್ಲ. ಅದು ಸಮೂಹ ಸೃಷ್ಟಿ. ನಟ ನಟಿಯರು, ನಿರ್ದೇಶಕರು ಮತ್ತು ಪ್ರೇಕ್ಷಕರು ಒಟ್ಟಾಗಿ ನಡೆಸುವ ಸಂವಹನ ಸಂಸ್ಕೃತಿ. ಅವರು ಎಷ್ಟೇ ಸಮರ್ಥನೆ ಮಾಡಿದರೂ ಪ್ರೇಕ್ಷಕರು ಮತ್ತು ಸಾರ್ವಜನಿಕರು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸುವುದರಿಂದ ಮಾನ್ಯ ಕಾರ್ಯಪ್ಪನವರು ತಮ್ಮಿಂದಾಗುತ್ತಿರುವ ತಪ್ಪು ಹೇಳಿಕೆಗಳನ್ನು ಧೋರಣೆಗಳನ್ನು ಗುರುತಿಸಿಕೊಳ್ಳಬೇಕು. ಅವರಿಗೆ ಒದಗಿರುವ ಗೌರವದ ನಿರ್ದೇಶಕನ ಸ್ಥಾನ ಮತ್ತು ಅವಕಾಶವನ್ನು ಸದುಪಯೋಗಗೊಳಿಸಬೇಕು. ಈ ಅವಕಾಶ ತಾತ್ಕಾಲಿಕವಾದದ್ದು, ರಂಗಭೂಮಿ ಯಾವತ್ತೂ ಜೀವಂತವಾಗಿ ಉಳಿಯುತ್ತದೆ. ಅದನ್ನು ಉಳಿಸುವುದು ಎಲ್ಲರ ಜವಾಬ್ದಾರಿ. ಸರ್ವಾಧಿಕಾರಿ ನಿಲುವುಗಳನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ, ವಿರೋಧಿಸುತ್ತಾರೆ, ಪ್ರತಿಭಟಿಸುತ್ತಾರೆ. ಇದು ಅವರೇ ಘೋಷಿಸಿಕೊಳ್ಳುವ ಸಂಸ್ಥೆ, ಪಕ್ಷ, ಸರಕಾರದವರು ಕೂಡಾ ಒಪ್ಪಿಕೊಳ್ಳಲಾರದ ವಿಚಾರವಾಗಿದೆ. ಆ ಸಂಸ್ಥೆಗಳವರೇ ಅಡ್ಡಂಡ ಕಾರ್ಯಪ್ಪನವರನ್ನು ತಮ್ಮ ಪಕ್ಷ, ಸಂಸ್ಥೆ ವಿರೋಧಿ ಧೋರಣೆಗಳಿಗಾಗಿ ದೂರ ತಳ್ಳುತ್ತಾರೆ, ತಿಳಿದಿರಲಿ.

ಮೈಮ್ ರಮೇಶ,
ರಂಗನಿರ್ದೇಶಕ, ನಿವೃತ್ತ ರಂಗಾಯಣ ಕಲಾವಿದ, ಮೈಸೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...