Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...