Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...