Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...