Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...