Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...