Homeಮುಖಪುಟಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

ಬ್ರೆಜಿಲ್‌ನಲ್ಲಿ ಎಡಪಕ್ಷದ ನಾಯಕ ಲುಲಾ ದಿಗ್ವಿಜಯ; ದಶಕದ ನಂತರ ಬಲಪಂಥೀಯ ಸರ್ಕಾರ ಪತನ

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಲೂಯಿಝ್‌ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಪ್ರಸ್ತುತ ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಾರೆ. ಎಡಪಂಥೀಯ ನಾಯಕರಾದ ಲುಲಾ ಅವರು ದಿಗ್ವಿಜಯ ಸಾಧಿಸಿದ್ದು, ಬಲಪಂಥೀಯ ಸರ್ಕಾರಕ್ಕೆ ದಶಕದ ನಂತರದ ಅಂತ್ಯಹಾಡಲಾಗಿದೆ.

ಲುಲಾ ಅವರು 50.8% ಮತಗಳನ್ನು ಹೊಂದಿದ್ದಾರೆ. ಬೋಲ್ಸನಾರೊ ಅವರಿಗೆ 49.2% ರಷ್ಟು ಮತಗಳು ಬಿದ್ದಿವೆ. 99.1%ರಷ್ಟು ಮತ ಯಂತ್ರಗಳನ್ನು ಎಣಿಸಲಾಗಿದೆ. ಫಲಿತಾಂಶವನ್ನು ‘ಗಣಿತಾತ್ಮಕವಾಗಿ ವ್ಯಾಖ್ಯಾನಿಸಲು ಇಷ್ಟು ಸಾಕಾಗುತ್ತದೆ’ ಎಂದು ಸುಪ್ರೀಂ ಎಲೆಕ್ಟೋರಲ್ ಕೋರ್ಟ್ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೋಲ್ಸನಾರೊ ಅವರ ಬಲಪಂಥೀಯವಾದಕ್ಕೆ ಹಿನ್ನಡೆಯಾಗಿದೆ. ಬ್ರೆಜಿಲ್ ದೇಶವು ಕೋವಿಡ್‌ ಸಾಂಕ್ರಾಮಿಕದ ವೇಳೆ ಕಳಪೆ ನಿರ್ವಹಣೆಗೆ ಸಾಕ್ಷಿಯಾಯಿತು. ಹೀಗಾಗಿ ಬಲಪಂಥೀಯ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಅನುಭವಿಸಿತು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.

ಲುಲಾ ಅವರು ಬ್ರೆಜಿಲ್‌ನಲ್ಲಿ ‘ಶಾಂತಿ ಮತ್ತು ಏಕತೆ’ಗೆ ಕರೆ ನೀಡಿದ್ದಾರೆ. ದೇಶವು ಇನ್ನು ಮುಂದೆ ಅಂತರಾಷ್ಟ್ರೀಯ ಅಡಿಯಾಳಲ್ಲ ಎಂದಿರುವ ಅವರು ‘ಅಮೆಜಾನ್‌ ಉಳಿವಿನ ಅಗತ್ಯ’ವನ್ನು ಎತ್ತಿಹಿಡಿದಿದ್ದಾರೆ.

ತಮ್ಮ ಭಾಷಣದಲ್ಲಿ ಲುಲಾ ಅವರು, ಬೆಂಬಲಿಗರು ಮತ್ತು ಪ್ರತಿಸ್ಪರ್ಧಿಗಳಿಗೆ ಸಮಾನವಾಗಿ ವಂದನೆಗಳನ್ನು ಅರ್ಪಿಸಿದ್ದಾರೆ. ಬ್ರೆಜಿಲ್‌ನ ಶಾಂತಿ, ಪ್ರಜಾಪ್ರಭುತ್ವ ಮತ್ತು ಅವಕಾಶಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ.

ಲಿಂಗ ಮತ್ತು ಜನಾಂಗೀಯ ಸಮಾನತೆ, 33.1 ಮಿಲಿಯನ್ ಬ್ರೆಜಿಲಿಯನ್ನರ ಮೇಲೆ ಪರಿಣಾಮ ಬೀರುವ ಹಸಿವಿನ ಬಿಕ್ಕಟ್ಟನ್ನು ಎದುರಿಸುವ ತುರ್ತು ಅಗತ್ಯವಿದೆ ಎಂದಿದ್ದಾರೆ. “ಆರ್ಥಿಕತೆಯ ಚಕ್ರ ಮತ್ತೆ ತಿರುಗುತ್ತದೆ” ಎಂದು ಭರವಸೆಯನ್ನು ನೀಡಿದ್ದಾರೆ.

‘ಭೂಮಿಗೆ ಜೀವಂತ ಅಮೆಜಾನ್‌ನ ಅಗತ್ಯವಿದೆ’

“ಶಾಶ್ವತ ಯುದ್ಧದ ಸ್ಥಿತಿಯಲ್ಲಿ, ವಿಭಜಿತ ರಾಷ್ಟ್ರದಲ್ಲಿ ವಾಸಿಸಲು ಯಾರ ಆಸಕ್ತಿಯೂ ಇಲ್ಲ” ಎಂದು 77 ವರ್ಷ ವಯಸ್ಸಿನ ಎಡಪಂಥೀಯ ನಾಯಕ ಘೋಷಿಸಿದ್ದಾರೆ. “ಈ ದೇಶಕ್ಕೆ ಶಾಂತಿ ಮತ್ತು ಏಕತೆಯ ಅಗತ್ಯವಿದೆ. ಈ ಜನರು ಇನ್ನು ಮುಂದೆ ಹೋರಾಡಲು ಬಯಸುವುದಿಲ್ಲ” ಎಂದು ತಿಳಿಸಿದ್ದಾರೆ.

“ಇಂದು ನಾವು ಬ್ರೆಜಿಲ್ ಹಿಂತಿರುಗಿದೆ ಎಂದು ಜಗತ್ತಿಗೆ ಹೇಳುತ್ತೇವೆ” ಎಂದಿದ್ದಾರೆ.

ಅಮೆಜಾನ್ ಮಳೆಕಾಡಿನ ಭವಿಷ್ಯ, ಜಾಗತಿಕ ಹವಾಮಾನ ತುರ್ತುಸ್ಥಿತಿ ಕುರಿತು ಪಶ್ಚಿಮ ದೇಶಗಳು ಗಮನ ಹರಿಸಲು ಈ ಚುನಾವಣೆಯ ಫಲಿತಾಂಶ ಮಹತ್ವದ್ದಾಗಿದೆ.

“ಬ್ರೆಜಿಲ್ ಹವಾಮಾನ ಬಿಕ್ಕಟ್ಟಿನ ವಿರುದ್ಧದ ಹೋರಾಟದಲ್ಲಿ ತನ್ನ ಪಾತ್ರವನ್ನು ಹಿಂಪಡೆಯಲು ಸಿದ್ಧವಾಗಿದೆ, ನಮ್ಮ ಎಲ್ಲಾ ಜೀವವೈವಿಧ್ಯವನ್ನು ರಕ್ಷಿಸಲಾಗುತ್ತದೆ, ವಿಶೇಷವಾಗಿ ಅಮೆಜಾನ್ ಅರಣ್ಯವನ್ನು ರಕ್ಷಿಸಲಾಗುತ್ತದೆ” ಎಂದಿರುವ ಲುಲಾ, “ಬ್ರೆಜಿಲ್ ಮತ್ತು ಈ ಭೂಮಿಗೆ ಜೀವಂತ ಅಮೆಜಾನ್ ಅಗತ್ಯವಿದೆ” ಎಂಬ ಸಂದೇಶ ನೀಡಿದ್ದಾರೆ.

‘ಗುಲಾಬಿ’ ಅಲೆ

ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಟ್ವೀಟ್‌ ಮಾಡಿ, “ಉಭಯ ನಾಯಕರು ತಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ನವೀಕರಿಸುತ್ತಾರೆ” ಎನ್ನುವ ಮೂಲಕ ಲುಲಾ ಅವರನ್ನು ಅಭಿನಂದಿಸಿದ್ದಾರೆ.

“ಮುಕ್ತ, ನ್ಯಾಯೋಚಿತ ಮತ್ತು ವಿಶ್ವಾಸಾರ್ಹ” ಚುನಾವಣೆಯಲ್ಲಿನ ಗೆಲುವಿಗಾಗಿ ಚುನಾಯಿತ ಬ್ರೆಜಿಲ್ ಅಧ್ಯಕ್ಷರನ್ನು ಭಾನುವಾರ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅಭಿನಂದಿಸಿದ್ದಾರೆ. ದೇಶಗಳ ನಡುವಿನ ಸಹಕಾರವನ್ನು ಮುಂದುವರೆಸಲು ಎದುರು ನೋಡುತ್ತಿರುವುದಾಗಿ ಬಿಡನ್‌ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇಂಟರ್‌ನ್ಯಾಷನಲ್ ಫೋಕಸ್; ಇದು ಬ್ರೆಜಿಲ್‌ನ ಕೊನೆಯ ಚುನಾವಣೆಯಾಗಲಿದೆಯೇ?

ಕೊಲಂಬಿಯಾ ಮತ್ತು ಚಿಲಿಯ ಚುನಾವಣೆಗಳಲ್ಲಿ ಎಡಪಂಥೀಯ ವಿಜಯಗಳ ನಂತರ ಲ್ಯಾಟಿನ್ ಅಮೆರಿಕಾದಲ್ಲಿ ಎಡಪಂಥೀಯರ ಗೆಲವು ‘ಗುಲಾಬಿ ಅಲೆ’ಯನ್ನು ಮುನ್ನೆಲೆಗೆ ತಂದಿದೆ.

ಬಡತನದಲ್ಲಿ ಜನಿಸಿದ ಮಾಜಿ ಯೂನಿಯನ್ ನಾಯಕ ಲುಲಾ, 1970ರ ದಶಕದಲ್ಲಿ ಬ್ರೆಜಿಲ್‌ನ ಮಿಲಿಟರಿ ಸರ್ಕಾರದ ವಿರುದ್ಧ ಮುಷ್ಕರಗಳನ್ನು ನಡೆಸಿದ್ದರು. ಜನನಾಯಕರಾಗಿ ಹೊಮ್ಮಿದ ಅವರು ಎರಡು ಅವಧಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಆದಾಗ್ಯೂ ಅವರ ವರ್ಕರ್ಸ್ ಪಕ್ಷದಿಂದಾದ ಆರ್ಥಿಕ ಹಿಂಜರಿತ ಮತ್ತು ಮಿತಿಮೀರಿದ ಭ್ರಷ್ಟಾಚಾರ ಹಗರಣದ ಆರೋಪದಿಂದಾಗಿ ಜೈಲುಪಾಲಾಗಿದ್ದರು. ಲಂಚದ ಪ್ರಕರಣಗಳ ಹಿನ್ನೆಲೆಯಲ್ಲಿ 19 ತಿಂಗಳ ಕಾಲ ಜೈಲಿನಲ್ಲಿದ್ದರು. ಈ ಶಿಕ್ಷೆಗಳನ್ನು ಕಳೆದ ವರ್ಷ, ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಮೂರನೇ ಅವಧಿಗೆ ಲುಲಾ ಅವರು ಆಯ್ಕೆಯಾಗಿದ್ದು, ಹಲವಾರು ಸವಾಲುಗಳು ಅವರ ಮುಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...