Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...