Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...