Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...