Homeಮುಖಪುಟಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

ಲೀಗಲ್ ನೋಟಿಸ್: ಜೈಭೀಮ್‌ ನಟ ಸೂರ್ಯ ಬೆಂಬಲಕ್ಕೆ ನಿಂತವರು ಇವರು!

- Advertisement -
- Advertisement -

‘ಜೈ ಭೀಮ್‌’ ಚಿತ್ರದ ನಾಯಕ ನಟ ಸೂರ್ಯ ಹಾಗೂ ನಿರ್ದೇಶಕ ಟಿ.ಜೆ.ಜ್ಞಾನವೇಲ್‌ ಅವರಿಗೆ ವನ್ನಿಯಾರ್‌ ಸಂಘದ ಅಧ್ಯಕ್ಷ ಲೀಗಲ್‌ ನೋಟೀಸ್ ಕಳುಹಿಸಿದ್ದು, ‘ಜೈ ಭೀಮ್‌’ ಸಿನಿಮಾದಲ್ಲಿ ವನ್ನಿಯಾರ್‌ ಸಮುದಾಯವನ್ನು ಕೆಟ್ಟದ್ದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿದ್ದರು. ಆದರೆ ಇದನ್ನು ವಿರೋಧಿಸಿ ನಟ ಸೂರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜೊತೆಗೆ ಟ್ವಿಟರ್‌ನಲ್ಲಿ #WeStandWithSuriya ಎಂಬ ಹ್ಯಾಶ್ ಟ್ಯಾಗ್‌ ಅಗ್ರ ಸ್ಥಾನದಲ್ಲಿ ಟ್ರೆಂಡ್‌ ಕೂಡಾ ಆಗಿತ್ತು.

“ವಣ್ಣಿಯಾರ್‌ ಸಮುದಾಯವನ್ನು ಅಪಮಾನಿಸಿರುವ ದೃಶ್ಯವನ್ನು ಚಿತ್ರದಿಂದ ತೆಗೆಯಬೇಕು, ಜೊತೆಗೆ ಐದು ಕೋಟಿ ರೂ. ಪರಿಹಾರವನ್ನು ಒದಗಿಸಬೇಕು” ಎಂದು ವಣ್ಣಿಯಾರ್‌ ಸಂಘಟನೆ ಆಗ್ರಹಿಸಿತ್ತು. ಚಿತ್ರವು ನೈಜ ಕಥೆಯನ್ನು ಆಧರಿಸಿದ್ದರೂ ಕೊಲೆಯಾದ ವ್ಯಕ್ತಿ ರಾಜಾಕಣ್ಣುಗೆ ಚಿತ್ರಹಿಂಸೆ ನೀಡುವ ಪೊಲೀಸ್ ಪಾತ್ರವನ್ನು ಉದ್ದೇಶಪೂರ್ವಕವಾಗಿ ವನ್ನಿಯಾರ್ ಜಾತಿಗೆ ಸೇರಿದವನೆಂದು ಚಿತ್ರಿಸಲಾಗಿದೆ ಎಂದು ವನ್ನಿಯಾರ್ ಸಂಘಮ್‌ ಅಧ್ಯಕ್ಷ ಪು.ತಾ.ಅರುಲ್ಮೋಳಿ ದೂರಿದ್ದರು.

ಇದನ್ನೂ ಓದಿ: ಜೈ ಭೀಮ್‌‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಟಿ.ಜೆ.ಜ್ಞಾನವೇಲ್‌ಗೆ ಲೀಗಲ್‌ ನೋಟೀಸ್‌

ವನ್ನಿಯಾರ್ ಜಾತಿಯ ಹಿತಾಸಕ್ತಿಗಳನ್ನು ಪ್ರತಿನಿಧಿಸುವ ಪಕ್ಷವಾದ ಪಟ್ಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮುಖ್ಯಸ್ಥ, ಒಕ್ಕೂಟ ಸರ್ಕಾರದ ಮಾಜಿ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಈ ಆರೋಪದ ರೂವಾರಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಸೂರ್ಯ, “ಚಿತ್ರದ ಮೂಲಕ ಆಡಳಿತರೂಢರ ವಿರುದ್ಧ ದನಿ ಎತ್ತಲಾಗಿದೆ. ಇದನ್ನು ರಾಜಕೀಯಗೊಳಿಸಿ ವಿಷಯವನ್ನು ತಿರುಚಬಾರದು. ನಿವೃತ್ತ ನ್ಯಾಯಮೂರ್ತಿ ಚಂದ್ರು ಅವರು ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟವನ್ನು ಹೇಗೆ ನಡೆಸಿದರು ಎಂಬುದನ್ನು ಸಿನಿಮಾ ಹೇಳುತ್ತದೆ. ಸ್ಥಳೀಯ ಜನರು ತಮ್ಮ ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲು ಸಿನಿಮಾ ಪ್ರಯತ್ನಿಸಿದೆ” ಎಂದಿದ್ದಾರೆ.

ನಟ ಸೂರ್ಯ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ ನಿರ್ದೇಶಕ ಪ. ರಂಜಿತ್‌, ವೆಟ್ರಿಮಾರನ್‌, ನಟ ಪ್ರಕಾಶ್ ರಾಜ್ ಸೇರಿದಂತೆ ಹಲವಾರು ಸ್ವತಂತ್ರ ಪತ್ರಕರ್ತರು, ಚಿತ್ರೋದ್ಯಮಿಗಳು ಹಾಗೂ ಯೂಟ್ಯೂಬರ್‌ಗಳು ಧ್ವನಿ ಎತ್ತಿದ್ದಾರೆ.

ನಟ ಸೂರ್ಯ ಅವರ ವಿರುದ್ದ ಲೀಗಲ್ ನೋಟಿಸ್ ವಿಷಯ ಸುದ್ದಿ ಆಗುತ್ತಿದ್ದಂತೆ ನಿರ್ದೇಶಕ ಪ. ರಂಜಿತ್‌ “ನಾವು ಸೂರ್ಯ ಅವರ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರದಲ್ಲಿ ಹಿಂದಿ ಮಾತನಾಡುವ ವ್ಯಕ್ತಿಗೆ ಕಪಾಳ ಮೋಕ್ಷ: ಪ್ರಕಾಶ್ ರಾಜ್‌ ಹೇಳಿದ್ದೇನು?

ದೇಶದ ಮತ್ತೊಬ್ಬ ಪ್ರತಿಭಾವಂತ ನಿರ್ದೇಶಕ ವೆಟ್ರಿ ಮಾರನ್‌ ಕೂಡಾ ಸೂರ್ಯ ಬೆಂಬಲಕ್ಕೆ ನಿಂತಿದ್ದು, “ಜೈ ಭೀಮ್ ತಂಡ ಸರಿಯಾದ ಕೆಲಸವನ್ನು ಮಾಡಿದೆ. ನಟ ಸೂರ್ಯ ತಮ್ಮ ತಾರಾ ಪಟ್ಟವನ್ನು ಮರುವ್ಯಾಖ್ಯಾನಿಸುತ್ತಿರುವ ಒಬ್ಬ ತಾರೆ. ನಾನು ಜೈ ಭೀಮ್‌ನ ಇಡೀ ತಂಡದ ಬೆಂಬಲಕ್ಕೆ ಇದ್ದೇನೆ” ಎಂದು ಹೇಳಿದ್ದಾರೆ.

ಜೈಭೀಮ್ ಚಿತ್ರದ ಸಹನಟ ಕೂಡಾ ಆಗಿರುವ ಹಿರಿಯ ನಟ ಪ್ರಕಾಶ್ ರಾಜ್ ಕೂಡಾ “ಸೂರ್ಯ ಬೆಂಬಲಕ್ಕೆ ನಾವಿದ್ದೇವೆ” ಎಂದು ಹೇಳಿದ್ದಾರೆ.

ಚಿತ್ರ ನಿರ್ದೇಶಕ ವೆಂಕಟ್‌ ಪ್ರಭು ಅವರು, “ಒಂಟಿಯಾಗಿ ನಿಂತರೂ ಸರಿ, ಸರಿಯಾದ ವಿಷಯಕ್ಕೆ ನಿಲ್ಲು. ನಾವು ಸೂರ್ಯ ಬೆಂಬಲಕ್ಕೆ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಳೆತು ನಾರುತ್ತಿರುವ ವ್ಯವಸ್ಥೆಯ ಕಥೆ ಹೇಳುವ ‘ಜೈ ಭೀಮ್’…

ಪತ್ರಕರ್ತೆ ಆಶಾಮೀರಾ ಅಯ್ಯಪ್ಪನ್ ಅವರು, “ಸತ್ಯ ಎಂಬುವುದು ಬೆಳಕು ಇದ್ದಹಾಗೆ. ಅದಕ್ಕಾಗಿ ಹೋರಾಡುವುದು ಯಾವತ್ತಿಗೂ ಬಿಡಬಾರದು” ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ, ಇನ್ನೂ ಹಲವಾರು ಜನರು ನಟ ಸೂರ್ಯ ಅವರ ಪರವಾಗಿ ನಿಂತಿದ್ದಾರೆ. ಅದನ್ನು ಇಲ್ಲಿ ಕ್ಲಿಕ್ ನೋಡಬಹುದು.

ಇದನ್ನೂ ಓದಿ: ‘ಜೈ ಭೀಮ್‌’ ಚಿತ್ರಕ್ಕೆ ಸ್ಪೂರ್ತಿಯಾದ ವಕೀಲ ‘ಚಂದ್ರು’ ಯಾರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...