Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

- Advertisement -
- Advertisement -

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

ಸೌಜನ್ಯ ಪರ ಹೋರಾಟಗಾರರು ಮಾರ್ಚ್ 9ರಂದು ‘ಸಾಹಿತಿಗಳ ಸಮಲೋಚನಾ ಸಭೆ’ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ಹಣ ಪಾವತಿಸಿ ಅಕ್ಕಮಹಾದೇವಿ ಸಭಾಂಗಣವನ್ನು ಬುಕ್ ಮಾಡಿದ್ದರು. ಆದರೆ ಮಾರ್ಚ್ 8ರಂದು “ಧರ್ಮಸ್ಥಳದ ವಕೀಲರೊಬ್ಬರು ಲೀಗಲ್ ನೋಟಿಸ್ ನೋಟಿಸ್ ಮತ್ತು ಹೈಕೋರ್ಟ್ ರಿಟ್ ಆದೇಶದ ಪ್ರತಿ ನೀಡಿದ್ದಾರೆ. ಆ ಕಾರಣಕ್ಕಾಗಿ ಸಭಾಂಗಣದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗುವುದು” ಎಂದು ತಿಳಿಸಲಾಗಿತ್ತು. ಸಭಾಂಗಣ ದಿಢೀರ್ ಆಗಿ ರದ್ದಾದ ಕಾರಣ ಸಭೆಯನ್ನೂ ಕೂಡಾ ರದ್ದುಗೊಳಿಸಲಾಗಿತ್ತು.

ಇದೀಗ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. “ಧರ್ಮಸ್ಥಳದ ವಕೀಲರು ನೀಡಿದ್ದಾರೆ ಎಂದು ಕಳುಹಿಸಲಾದ ಲೀಗಲ್ ನೋಟಿಸ್‌ನಲ್ಲಿ ವಕೀಲನ ವಿಳಾಸ, ಇ-ಮೇಲ್ ಐಡಿ, ದೂರವಾಣಿ ಸಂಖ್ಯೆ ಇತ್ಯಾದಿಗಳು ಯಾವುದೂ ನಮೂದಿಸಲಾಗಿಲ್ಲ. ಎಸ್. ರಾಜಶೇಖರ್ ಎಂಬ ಹೆಸರಿನ ವಕೀಲರು ಯಾರು? ಅವರು ವೃತ್ತಿನಿರತರಾಗಿರುವ ಸ್ಥಳ ಯಾವುದು ಎಂಬ ಬಗೆಗಿನ ಯಾವ ಮಾಹಿತಿಯೂ ಇಲ್ಲವಾಗಿದ್ದು, ಖಾಲಿ ಹಾಳೆಯಲ್ಲಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ವಿವಿಪುರಂ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಇನ್ಸ್‌ಪೆಕ್ಟರ್ ಕೂಡಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿದ್ದಾರೆ. ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ನೀಡಲಾದ ನೋಟಿಸ್‌ನಲ್ಲಿ “ಜಸ್ಟಿಸ್ ಪಾರ್ ಸೌಜನ್ಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ ಕಾರ್ಯಗಳನ್ನು ಯಾರೂ ಕೂಡಾ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ವಾದ ಅಥವಾ ಹೇಳಿಕೆಗಳು ವಂಚನೆ ಮಾತ್ರವಲ್ಲ, ಹಾಸ್ಯಾಸ್ಪದವೂ ಆಗಿದೆ ಎಂದು ವಕೀಲ ಬಾಲನ್ ಹೇಳಿದ್ದಾರೆ.

“ಹೈಕೋರ್ಟ್ ತನ್ನ ಆದೇಶದಲ್ಲಿ ಸೌಜನ್ಯ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಯನ್ನು ನೀಡಿದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಪರಾಧ ನಡೆದರೆ, ಕಾನೂನಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯ. ಆದರೆ ಹೈಕೋರ್ಟ್‌ನ ಈ ಸ್ಪಷ್ಟ ಆದೇಶವನ್ನು ತಿರುಚಿ, ಧರ್ಮಸ್ಥಳದ ಬಗ್ಗೆ ಯಾರೂ ಮಾತನಾಡಬಾರದು ಎಂದು ಬಿಂಬಿಸಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ಆರೋಪಿಸಿದ್ದಾರೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಹಾಲ್ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಬಜರಂಗದಳ ಬೆದರಿಕೆ: ಔರಂಗಜೇಬ್ ಸಮಾಧಿಯ ಸುತ್ತ ಬಿಗಿ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...