Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

- Advertisement -
- Advertisement -

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

ಸೌಜನ್ಯ ಪರ ಹೋರಾಟಗಾರರು ಮಾರ್ಚ್ 9ರಂದು ‘ಸಾಹಿತಿಗಳ ಸಮಲೋಚನಾ ಸಭೆ’ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ಹಣ ಪಾವತಿಸಿ ಅಕ್ಕಮಹಾದೇವಿ ಸಭಾಂಗಣವನ್ನು ಬುಕ್ ಮಾಡಿದ್ದರು. ಆದರೆ ಮಾರ್ಚ್ 8ರಂದು “ಧರ್ಮಸ್ಥಳದ ವಕೀಲರೊಬ್ಬರು ಲೀಗಲ್ ನೋಟಿಸ್ ನೋಟಿಸ್ ಮತ್ತು ಹೈಕೋರ್ಟ್ ರಿಟ್ ಆದೇಶದ ಪ್ರತಿ ನೀಡಿದ್ದಾರೆ. ಆ ಕಾರಣಕ್ಕಾಗಿ ಸಭಾಂಗಣದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗುವುದು” ಎಂದು ತಿಳಿಸಲಾಗಿತ್ತು. ಸಭಾಂಗಣ ದಿಢೀರ್ ಆಗಿ ರದ್ದಾದ ಕಾರಣ ಸಭೆಯನ್ನೂ ಕೂಡಾ ರದ್ದುಗೊಳಿಸಲಾಗಿತ್ತು.

ಇದೀಗ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. “ಧರ್ಮಸ್ಥಳದ ವಕೀಲರು ನೀಡಿದ್ದಾರೆ ಎಂದು ಕಳುಹಿಸಲಾದ ಲೀಗಲ್ ನೋಟಿಸ್‌ನಲ್ಲಿ ವಕೀಲನ ವಿಳಾಸ, ಇ-ಮೇಲ್ ಐಡಿ, ದೂರವಾಣಿ ಸಂಖ್ಯೆ ಇತ್ಯಾದಿಗಳು ಯಾವುದೂ ನಮೂದಿಸಲಾಗಿಲ್ಲ. ಎಸ್. ರಾಜಶೇಖರ್ ಎಂಬ ಹೆಸರಿನ ವಕೀಲರು ಯಾರು? ಅವರು ವೃತ್ತಿನಿರತರಾಗಿರುವ ಸ್ಥಳ ಯಾವುದು ಎಂಬ ಬಗೆಗಿನ ಯಾವ ಮಾಹಿತಿಯೂ ಇಲ್ಲವಾಗಿದ್ದು, ಖಾಲಿ ಹಾಳೆಯಲ್ಲಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ವಿವಿಪುರಂ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಇನ್ಸ್‌ಪೆಕ್ಟರ್ ಕೂಡಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿದ್ದಾರೆ. ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ನೀಡಲಾದ ನೋಟಿಸ್‌ನಲ್ಲಿ “ಜಸ್ಟಿಸ್ ಪಾರ್ ಸೌಜನ್ಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ ಕಾರ್ಯಗಳನ್ನು ಯಾರೂ ಕೂಡಾ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ವಾದ ಅಥವಾ ಹೇಳಿಕೆಗಳು ವಂಚನೆ ಮಾತ್ರವಲ್ಲ, ಹಾಸ್ಯಾಸ್ಪದವೂ ಆಗಿದೆ ಎಂದು ವಕೀಲ ಬಾಲನ್ ಹೇಳಿದ್ದಾರೆ.

“ಹೈಕೋರ್ಟ್ ತನ್ನ ಆದೇಶದಲ್ಲಿ ಸೌಜನ್ಯ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಯನ್ನು ನೀಡಿದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಪರಾಧ ನಡೆದರೆ, ಕಾನೂನಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯ. ಆದರೆ ಹೈಕೋರ್ಟ್‌ನ ಈ ಸ್ಪಷ್ಟ ಆದೇಶವನ್ನು ತಿರುಚಿ, ಧರ್ಮಸ್ಥಳದ ಬಗ್ಗೆ ಯಾರೂ ಮಾತನಾಡಬಾರದು ಎಂದು ಬಿಂಬಿಸಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ಆರೋಪಿಸಿದ್ದಾರೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಹಾಲ್ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಬಜರಂಗದಳ ಬೆದರಿಕೆ: ಔರಂಗಜೇಬ್ ಸಮಾಧಿಯ ಸುತ್ತ ಬಿಗಿ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....