Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

- Advertisement -
- Advertisement -

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

ಸೌಜನ್ಯ ಪರ ಹೋರಾಟಗಾರರು ಮಾರ್ಚ್ 9ರಂದು ‘ಸಾಹಿತಿಗಳ ಸಮಲೋಚನಾ ಸಭೆ’ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ಹಣ ಪಾವತಿಸಿ ಅಕ್ಕಮಹಾದೇವಿ ಸಭಾಂಗಣವನ್ನು ಬುಕ್ ಮಾಡಿದ್ದರು. ಆದರೆ ಮಾರ್ಚ್ 8ರಂದು “ಧರ್ಮಸ್ಥಳದ ವಕೀಲರೊಬ್ಬರು ಲೀಗಲ್ ನೋಟಿಸ್ ನೋಟಿಸ್ ಮತ್ತು ಹೈಕೋರ್ಟ್ ರಿಟ್ ಆದೇಶದ ಪ್ರತಿ ನೀಡಿದ್ದಾರೆ. ಆ ಕಾರಣಕ್ಕಾಗಿ ಸಭಾಂಗಣದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗುವುದು” ಎಂದು ತಿಳಿಸಲಾಗಿತ್ತು. ಸಭಾಂಗಣ ದಿಢೀರ್ ಆಗಿ ರದ್ದಾದ ಕಾರಣ ಸಭೆಯನ್ನೂ ಕೂಡಾ ರದ್ದುಗೊಳಿಸಲಾಗಿತ್ತು.

ಇದೀಗ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. “ಧರ್ಮಸ್ಥಳದ ವಕೀಲರು ನೀಡಿದ್ದಾರೆ ಎಂದು ಕಳುಹಿಸಲಾದ ಲೀಗಲ್ ನೋಟಿಸ್‌ನಲ್ಲಿ ವಕೀಲನ ವಿಳಾಸ, ಇ-ಮೇಲ್ ಐಡಿ, ದೂರವಾಣಿ ಸಂಖ್ಯೆ ಇತ್ಯಾದಿಗಳು ಯಾವುದೂ ನಮೂದಿಸಲಾಗಿಲ್ಲ. ಎಸ್. ರಾಜಶೇಖರ್ ಎಂಬ ಹೆಸರಿನ ವಕೀಲರು ಯಾರು? ಅವರು ವೃತ್ತಿನಿರತರಾಗಿರುವ ಸ್ಥಳ ಯಾವುದು ಎಂಬ ಬಗೆಗಿನ ಯಾವ ಮಾಹಿತಿಯೂ ಇಲ್ಲವಾಗಿದ್ದು, ಖಾಲಿ ಹಾಳೆಯಲ್ಲಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ವಿವಿಪುರಂ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಇನ್ಸ್‌ಪೆಕ್ಟರ್ ಕೂಡಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿದ್ದಾರೆ. ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ನೀಡಲಾದ ನೋಟಿಸ್‌ನಲ್ಲಿ “ಜಸ್ಟಿಸ್ ಪಾರ್ ಸೌಜನ್ಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ ಕಾರ್ಯಗಳನ್ನು ಯಾರೂ ಕೂಡಾ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ವಾದ ಅಥವಾ ಹೇಳಿಕೆಗಳು ವಂಚನೆ ಮಾತ್ರವಲ್ಲ, ಹಾಸ್ಯಾಸ್ಪದವೂ ಆಗಿದೆ ಎಂದು ವಕೀಲ ಬಾಲನ್ ಹೇಳಿದ್ದಾರೆ.

“ಹೈಕೋರ್ಟ್ ತನ್ನ ಆದೇಶದಲ್ಲಿ ಸೌಜನ್ಯ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಯನ್ನು ನೀಡಿದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಪರಾಧ ನಡೆದರೆ, ಕಾನೂನಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯ. ಆದರೆ ಹೈಕೋರ್ಟ್‌ನ ಈ ಸ್ಪಷ್ಟ ಆದೇಶವನ್ನು ತಿರುಚಿ, ಧರ್ಮಸ್ಥಳದ ಬಗ್ಗೆ ಯಾರೂ ಮಾತನಾಡಬಾರದು ಎಂದು ಬಿಂಬಿಸಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ಆರೋಪಿಸಿದ್ದಾರೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಹಾಲ್ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಬಜರಂಗದಳ ಬೆದರಿಕೆ: ಔರಂಗಜೇಬ್ ಸಮಾಧಿಯ ಸುತ್ತ ಬಿಗಿ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...