Homeಕರ್ನಾಟಕಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ವಕೀಲರಿಂದ ಲೀಗಲ್ ನೋಟಿಸ್

- Advertisement -
- Advertisement -

ಧರ್ಮಸ್ಥಳದ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಲ್ಲಿ ಸಾಹಿತಿ- ಚಿಂತಕರ ಸಭೆಗೆ ನೀಡಲಾಗಿದ್ದ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಸೌಜನ್ಯ ಪರ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ.

ಎಸ್ ಬಾಲನ್ ಅವರು ನೀಡಿರುವ ಲೀಗಲ್ ನೋಟಿಸ್‌ನಲ್ಲಿ ”ಧರ್ಮಸ್ಥಳದ ವಕೀಲರ ಹೆಸರಿನಲ್ಲಿ ನೀಡಲಾದ ಲೀಗಲ್ ನೋಟಿಸ್‌ಗೆ ವಿಳಾಸ, ಲೆಟರ್ ಹೆಡ್, ಸಂಪರ್ಕ ಸೇರಿದಂತೆ ಯಾವುದೇ ತಲೆ-ಬಾಲ ಇಲ್ಲವಾಗಿದ್ದು, ಸೌಜನ್ಯ ಪರ ಹೋರಾಟಗಾರರನ್ನು ದಾರಿ ತಪ್ಪಿಸಲು ಹೈಕೋರ್ಟ್ ಆದೇಶವನ್ನು ತಿರುಚಿ ವಂಚನೆ ಮಾಡಲಾಗಿದೆ” ಎಂದು ವಿವರಿಸಲಾಗಿದೆ.

ಸೌಜನ್ಯ ಪರ ಹೋರಾಟಗಾರರು ಮಾರ್ಚ್ 9ರಂದು ‘ಸಾಹಿತಿಗಳ ಸಮಲೋಚನಾ ಸಭೆ’ ನಡೆಸಲು ಕನ್ನಡ ಸಾಹಿತ್ಯ ಪರಿಷತ್‌ಗೆ ಹಣ ಪಾವತಿಸಿ ಅಕ್ಕಮಹಾದೇವಿ ಸಭಾಂಗಣವನ್ನು ಬುಕ್ ಮಾಡಿದ್ದರು. ಆದರೆ ಮಾರ್ಚ್ 8ರಂದು “ಧರ್ಮಸ್ಥಳದ ವಕೀಲರೊಬ್ಬರು ಲೀಗಲ್ ನೋಟಿಸ್ ನೋಟಿಸ್ ಮತ್ತು ಹೈಕೋರ್ಟ್ ರಿಟ್ ಆದೇಶದ ಪ್ರತಿ ನೀಡಿದ್ದಾರೆ. ಆ ಕಾರಣಕ್ಕಾಗಿ ಸಭಾಂಗಣದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗುವುದು” ಎಂದು ತಿಳಿಸಲಾಗಿತ್ತು. ಸಭಾಂಗಣ ದಿಢೀರ್ ಆಗಿ ರದ್ದಾದ ಕಾರಣ ಸಭೆಯನ್ನೂ ಕೂಡಾ ರದ್ದುಗೊಳಿಸಲಾಗಿತ್ತು.

ಇದೀಗ ಸಭಾಂಗಣವನ್ನು ರದ್ದುಗೊಳಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿಗೆ ಹೋರಾಟಗಾರರ ಪರವಾಗಿ ಎಸ್ ಬಾಲನ್ ಲೀಗಲ್ ನೋಟಿಸ್ ನೀಡಿದ್ದಾರೆ. “ಧರ್ಮಸ್ಥಳದ ವಕೀಲರು ನೀಡಿದ್ದಾರೆ ಎಂದು ಕಳುಹಿಸಲಾದ ಲೀಗಲ್ ನೋಟಿಸ್‌ನಲ್ಲಿ ವಕೀಲನ ವಿಳಾಸ, ಇ-ಮೇಲ್ ಐಡಿ, ದೂರವಾಣಿ ಸಂಖ್ಯೆ ಇತ್ಯಾದಿಗಳು ಯಾವುದೂ ನಮೂದಿಸಲಾಗಿಲ್ಲ. ಎಸ್. ರಾಜಶೇಖರ್ ಎಂಬ ಹೆಸರಿನ ವಕೀಲರು ಯಾರು? ಅವರು ವೃತ್ತಿನಿರತರಾಗಿರುವ ಸ್ಥಳ ಯಾವುದು ಎಂಬ ಬಗೆಗಿನ ಯಾವ ಮಾಹಿತಿಯೂ ಇಲ್ಲವಾಗಿದ್ದು, ಖಾಲಿ ಹಾಳೆಯಲ್ಲಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ತನ್ನ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ವಿವಿಪುರಂ ಪೊಲೀಸ್ ಇನ್ಸ್‌ಪೆಕ್ಟರ್‌ಗೂ ನೋಟಿಸ್ ನೀಡಲಾಗಿದೆ. ಈ ನೋಟಿಸ್ ಅನ್ನು ಇನ್ಸ್‌ಪೆಕ್ಟರ್ ಕೂಡಾ ಕನ್ನಡ ಸಾಹಿತ್ಯ ಪರಿಷತ್‌ಗೆ ನೀಡಿದ್ದಾರೆ. ರಾಜಶೇಖರ್ ಎಂಬ ವಕೀಲರ ಹೆಸರಿನಲ್ಲಿ ನೀಡಲಾದ ನೋಟಿಸ್‌ನಲ್ಲಿ “ಜಸ್ಟಿಸ್ ಪಾರ್ ಸೌಜನ್ಯ ಹೆಸರಿನಲ್ಲಿ ಯಾವುದೇ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ ಕಾರ್ಯಗಳನ್ನು ಯಾರೂ ಕೂಡಾ ನಡೆಸದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದು ಉಲ್ಲೇಖಿಸಲಾಗಿದೆ. ಆದರೆ ಈ ವಾದ ಅಥವಾ ಹೇಳಿಕೆಗಳು ವಂಚನೆ ಮಾತ್ರವಲ್ಲ, ಹಾಸ್ಯಾಸ್ಪದವೂ ಆಗಿದೆ ಎಂದು ವಕೀಲ ಬಾಲನ್ ಹೇಳಿದ್ದಾರೆ.

“ಹೈಕೋರ್ಟ್ ತನ್ನ ಆದೇಶದಲ್ಲಿ ಸೌಜನ್ಯ ಪ್ರಕರಣದಲ್ಲಿ ಯಾವುದೇ ವ್ಯಕ್ತಿಯು ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಯನ್ನು ನೀಡಿದರೆ ಅಥವಾ ಅಂತಹ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಪ್ರತಿವಾದಿ ಪೊಲೀಸರು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. ಅಪರಾಧ ನಡೆದರೆ, ಕಾನೂನಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯ. ಆದರೆ ಹೈಕೋರ್ಟ್‌ನ ಈ ಸ್ಪಷ್ಟ ಆದೇಶವನ್ನು ತಿರುಚಿ, ಧರ್ಮಸ್ಥಳದ ಬಗ್ಗೆ ಯಾರೂ ಮಾತನಾಡಬಾರದು ಎಂದು ಬಿಂಬಿಸಿ ನೋಟಿಸ್ ನೀಡಲಾಗಿದೆ” ಎಂದು ಬಾಲನ್ ಆರೋಪಿಸಿದ್ದಾರೆ.

“ತಲೆ ಮತ್ತು ಬಾಲವಿಲ್ಲದ ಲೀಗಲ್ ನೋಟಿಸ್ ಆಧಾರದ ಮೇಲೆ ನೀವು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಮಾಡಲಾಗಿದ್ದ ಹಾಲ್ ಬುಕಿಂಗ್ ಅನ್ನು ಹೇಗೆ ರದ್ದುಗೊಳಿಸಿದ್ದೀರಿ” ಎಂದು ಸೌಜನ್ಯ ಪರ ಹೋರಾಟಗಾರರ ವಕೀಲ ಬಾಲನ್ ಪ್ರಶ್ನಿಸಿದ್ದಾರೆ.

ಬಜರಂಗದಳ ಬೆದರಿಕೆ: ಔರಂಗಜೇಬ್ ಸಮಾಧಿಯ ಸುತ್ತ ಬಿಗಿ ಭದ್ರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...