Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...