Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...