Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...