Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...