Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....