Homeಮುಖಪುಟಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

ಖ್ಯಾತ ನಟ ದಿಲೀಪ್ ಕುಮಾರ್ ನಿಧನ: ಅಗಲಿದ ಚಿತ್ರರಂಗದ ದಂತಕತೆಗೆ ಗಣ್ಯರ ಕಂಬನಿ

- Advertisement -
- Advertisement -

ದಶಕಗಳ ಕಾಲ ದೇಶವನ್ನು ರಂಜಿಸಿದ ಭಾರತ ಚಿತ್ರರಂಗದ ದಂತಕತೆ  ದಿಲೀಪ್‌ ಕುಮಾರ್ ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. 98 ವರ್ಷಗಳ ಹಿರಿಯ ನಟ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸುಮಾರು 8 ಗಂಟೆಯ ಹೊತ್ತಿಗೆ ದಿಲೀಪ್‌ ಕುಮಾರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ನಟನ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದಾರೆ.ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಇತ್ತೀಚೆಗಷ್ಟೇ ದಿಲೀಪ್ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ನಂತರ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಪುನಃ ಅನಾರೋಗ್ಯ ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆ ಸೇರಿದ್ದರು. ದಿಲೀಪ್ ಅವರ ಅಂತಿಮಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ನಿಧನಕ್ಕೆ ದೇಶ ವಿದೇಶಗಳ ಗಣ್ಯರ ಕಂಬನಿ: ಭಾರತ ಸರ್ಕಾರದ ವಿರುದ್ಧ ಆಕ್ರೋಶ

1922 ಡಿಸೆಂಬರ್ 11ರಲ್ಲಿ ಅವಿಭಜಿತ ಭಾರತದ ಇಂದಿನ ಪಾಕಿಸ್ತಾನದಲ್ಲಿರುವ ಪೇಷಾವರದಲ್ಲಿ ಜನಸಿದ್ದ ದಿಲೀಪ್ ಕುಮಾರ್ ನಿಜವಾದ ಹೆಸರು ಮಹಮ್ಮದ್ ಯೂಸುಫ್ ಖಾನ್. ಹಾಗಾಗಿ ಇವರನ್ನು ಬಾಲಿವುಡ್ ನ ಮೊದಲ ಖಾನ್ ಎನ್ನಲಾಗುತ್ತಿತ್ತು. ಪತ್ನಿ ಸಾಯಿರಾ ಬಾನು ಜೊತೆ ತುಂಬು ಜೀವನ ನಡೆಸಿದ ದಿಲೀಪ್ ಕುಮಾರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಫಿಲ್ಮ್​ಫೇರ್ ಪ್ರಶಸ್ತಿ ಆರಂಭವಾದಾಗ ಅದನ್ನು ಪಡೆದ ಮೊದಲ ವ್ಯಕ್ತಿ ದಿಲೀಪ್ ಕುಮಾರ್. ಭಾರತ ಚಿತ್ರರಂಗದಲ್ಲಿ ಅತ್ಯಂತ ಗೌರವ ಮತ್ತು ಪ್ರೀತಿಗಳಿಸಿದ್ದ ಚಿತ್ರರಂಗದ ಗೆಳೆಯರು ಸಹುದ್ಯೋಗಿಗಳು ದಿಲೀಪ್ ಸಾಬ್‌ ಎಂದೇ ಸಂಭೋದಿಸುತ್ತಿದ್ದರು.

ದಿಲೀಪ್ ಕುಮಾರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಾಲಿವುಡ್‌ನ ಹಿರಿಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಮುಂಜಾನೆ ಟ್ಟಿಟ್ಟರ್ ಮತ್ತು ಫೇಸ್‌ಬುಕ್ ಸಂಪೂರ್ಣ ದಿಲೀಪ್‌ಕುಮಾರ್ ಮಯವಾಗಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದಿಲೀಪ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದೇನೆ. ದಿಲೀಪ್ ಅವರನ್ನು ಸಿನಿಮೀಯ ದಂತಕಥೆ ಎಂದು ಸ್ಮರಿಸಲಾಗುತ್ತದೆ ಎಂದು ಹೇಳಿದ್ದಾರೆ. ದಿಲೀಪ್ ಅವರು ಸಾಟಿಯಿಲ್ಲದ ಪ್ರತಿಭೆಯನ್ನು ಹೊಂದಿದ್ದರು. ಈ ಕಾರಣದಿಂದಲೇ ಸಾಕಷ್ಟು ಪ್ರೇಕ್ಷಕರ ಮನಗೆದ್ದಿದ್ದರು. ಅವರ ನಿಧನ ನಮ್ಮ ಸಾಂಸ್ಕೃತಿಕ ಜಗತ್ತಿಗೆ ಆಗಿರುವ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹಯಲ್ ಗಾಂಧಿ ಸೇರಿದಂತೆ ವಿವಿಧ ರಾಜಕೀಯ ನಾಯಕರು ದಿಲೀಪ್ ಕುಮಾರ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಭಾವಪೂರ್ಣ ಅಕ್ಷರಗಳ ಮೂಲಕ ಅಗಲಿದ ಹಿರಿಯ ನಟನಿಗೆ ಅಕ್ಷರ ನಮನ ಸಲ್ಲಿಸಿದ್ದಾರೆ.

ಬಾಲಿವುಡ್ ನಟ ಅಕ್ಷಯ್‌ ಕುಮಾರ್ ಭಾರತ ಚಿತ್ರರಂಗದ ಗಣ್ಯರು ದಿಲೀಪ್ ಕುಮಾರ್ ಸಾವು ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ತಂದೊಡ್ಡಿದೆಯೆಂದು ಕಂಬನಿ ಮಿಡಿದಿದ್ದಾರೆ.

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಕೂಡ ದಿಲೀಪ್ ಕುಮಾರ್ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.

ದೇಶದಲ್ಲಿ 1950-1960  ರ ದಶಕಗಳಲ್ಲಿ ದಿಲೀಪ್ ಕುಮಾರ್ ಅವರನ್ನೇ ರೋಲ್‌ ಮಾಡೆಲ್ ಆಗಿಸಕೊಂಡಿದ್ದ ದೊಡ್ಡ ವರ್ಗವೇ ಬೆಳೆದಿತ್ತು. ಇಂದಿಗೂ ಲಕ್ಷಾಂತರ ಜನರು ದಿಲೀಪ್ ಅವರ ಅಭಿನಯವನ್ನು ವ್ಯಕ್ತಿತ್ವವನ್ನು ಆರಾಧಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ. ಇವರೆಲ್ಲರ ಪ್ರೀತಿ ಕಂಬನಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಹಿಂದಿ ಚಿತ್ರರಂಗದ ಆರಂಭಿಕ ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ದಿಲೀಪ್ ಕುಮಾರ್‌ ಅವರ ನಟೆನೆಯನ್ನು ನೋಡಿ ಸಾಕಷ್ಟು ಜನರು ಚಿತ್ರರಂಗಕ್ಕೆ ಬಂದಿದ್ದಾರೆ. 3-4 ತಲೆಮಾರುಗಳಿಗೆ ದಿಲೀಪ್ ದೊಡ್ಡ ಪ್ರೇರಣೆಯಾಗಿದ್ದರು ಮತ್ತು ಹಿಂದಿ ಚಿತ್ರರಂಗಕ್ಕೂ ದಿಲೀಪ್ ಕುಮಾರ್‌ ದೊಡ್ಡ ಪ್ರೇರಕ ಶಕ್ತಿಯಾಗಿದ್ದರು. ಖ್ಯಾತ ನಟ ಶಾರುಖ್‌ ಖಾನ್ ಹಲವು ಸಂದರ್ಶನಗಳಲ್ಲಿ ತಮಗೆ ದಿಲೀಪ್‌ ಕುಮಾರ್‌ ಅವರೇ ಪ್ರೇರಣೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ನಟ ಅಮಿರ್ ಖಾನ್‌ ಕೂಡ ದಿಲೀಪ್ ಕುಮಾರ್‌ ಅವರ ಸಿನೆಮಾಗಳಿಂದ ಸಾಕಷ್ಟು ನಟನೆಯ ಪಾಠಗಳನ್ನು ಕಲಿತಿರುವುದಾಗಿ ಈ ಹಿಂದೆ ಹೇಳಿದ್ದರು.

ದಿಲೀಪ್ ಕುಮಾರ್ ಸಾಬ್ ಇಂದು ಭೌತಿಕವಾಗಿ ನಮ್ಮನಗಲಿರಬಹುದು ಆದರೆ ಅಂದಾಜ್, ದಾಗ್, ದೇವದಾಸ್, ಆಜಾದ್, ಶಕ್ತಿ, ಮಸಾಲ್, ಸೌದಾಗರ್, ಕ್ರಾಂತಿ, ಮಘಲ್ ಎ ಆಜಮ್ ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

 

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು : ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...