Homeಮುಖಪುಟಲತಾ ಮಂಗೇಶ್ಕರ್ ನಿಧನಕ್ಕೆ ಗಣ್ಯರ ಸಂತಾಪ: ಎರಡು ದಿನ ಶೋಕಾಚರಣೆ

ಲತಾ ಮಂಗೇಶ್ಕರ್ ನಿಧನಕ್ಕೆ ಗಣ್ಯರ ಸಂತಾಪ: ಎರಡು ದಿನ ಶೋಕಾಚರಣೆ

- Advertisement -
- Advertisement -

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥವಾಗಿ ದೇಶದಲ್ಲಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇಂದು ಸಂಜೆ 6.30ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಶ್ರೇಷ್ಠ ಗಾಯಕಿಗೆ ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್‌ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ, ಪಂಹಾಬ್ ಸಿಎಂ ಚರಣ್‌ಜಿತ್ ಚನ್ನಿ, ಸಂಗೀತ ನಿರ್ದೇಶಕ ರೆಹಮಾನ್, ಗಾಯಕಿ ಶ್ರೇಯಾ ಘೋಷಲ್, ನಟಿ ಕಾಜೋಲ್, ಭೂಮಿ ಪಡ್ನೇಕರ್‌, ನಟ ಅಕ್ಷಯ್ ಕುಮಾರ್‍, ಮಹೇಶ್ ಬಾಬು, ಮಮ್ಮುಟಿ, ಸಂಜಯ್ ದತ್‌, ಗೌತಮ್ ಗಂಭೀರ್‌, ಸೆಹ್ವಾಗ್ ಸೇರಿದಂತೆ ಎಲ್ಲಾ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

’ಲತಾಜಿ ಅವರ ನಿಧನವು ನನ್ನ ಹೃದಯವನ್ನು ಕಲುಕಿದೆ, ಇದೆ ರೀತಿ ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಆಗಿದೆ. ಅವರು ಹಾಡುಗಳ ಮೂಲಕ ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದ್ದಾರೆ’ ಎಂದಿದ್ದಾರೆ.

ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಹೇಳಿಕೊಳ್ಳಲಾಗದಷ್ಟು ನಾನು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ಅವರು ನಮ್ಮನ್ನು ಅಗಲಿದ್ದಾರೆ. ಅವರು ದೇಶದಲ್ಲಿ ತುಂಬಲಾರದ ಶೂನ್ಯವನ್ನು ಬಿಟ್ಟು ಹೋಗಿದ್ದಾರೆ. ಮುಂಬರುವ ಪೀಳಿಗೆ ಅವರನ್ನು ಭಾರತೀಯ ಸಂಸ್ಕೃತಿಯ ಧೀಮಂತಿಕೆ ಎಂದು ನೆನಪಿಸಿಕೊಳ್ಳುತ್ತಾರೆ. ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಅದು ನನಗೆ ಸಿಕ್ಕ ಗೌರವವೆಂದು ಭಾವಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕುಡ ಸಂತಾಪ ವ್ಯಕ್ತಪಡಿಸಿದ್ದಾರೆ. “ಲತಾ ಮಂಗೇಶ್ಕರ್ ಅವರ ನಿಧನದ ದುಃಖದ ಸುದ್ದಿ ತಿಳಿಯಿತು. ಅವರು ಹಲವು ದಶಕಗಳಿಂದ ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿ ಉಳಿದರು. ಅವರ ಧ್ವನಿ ಅಮರವಾಗಿದೆ. ಅವರ ಅಭಿಮಾನಿಗಳ ಹೃದಯದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದಿದ್ದಾರೆ.

“ಮಧುರ ಕಂಠದ ಮೂಲಕ‌ ದಶಕಗಳಿಂದ ಜನಮನವನ್ನು ರಂಜಿಸಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ. ನಮ್ಮನ್ನು ಅಗಲಿ ಹೋದರೂ ಅಮರ ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ.” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ನುಡಿ ನೆನಪು; ಕಪ್ಪು ಮೊಗದ ಸುಂದರ – ಸಿಡ್ನಿ ಪಾಟಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...