Homeಮುಖಪುಟಲತಾ ಮಂಗೇಶ್ಕರ್ ನಿಧನಕ್ಕೆ ಗಣ್ಯರ ಸಂತಾಪ: ಎರಡು ದಿನ ಶೋಕಾಚರಣೆ

ಲತಾ ಮಂಗೇಶ್ಕರ್ ನಿಧನಕ್ಕೆ ಗಣ್ಯರ ಸಂತಾಪ: ಎರಡು ದಿನ ಶೋಕಾಚರಣೆ

- Advertisement -
- Advertisement -

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥವಾಗಿ ದೇಶದಲ್ಲಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇಂದು ಸಂಜೆ 6.30ಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಶ್ರೇಷ್ಠ ಗಾಯಕಿಗೆ ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರ 10 ಎವರ್‌‌ಗ್ರೀನ್‌ ಹಾಡುಗಳು

ಲತಾ ಮಂಗೇಶ್ಕರ್‌ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ, ಪಂಹಾಬ್ ಸಿಎಂ ಚರಣ್‌ಜಿತ್ ಚನ್ನಿ, ಸಂಗೀತ ನಿರ್ದೇಶಕ ರೆಹಮಾನ್, ಗಾಯಕಿ ಶ್ರೇಯಾ ಘೋಷಲ್, ನಟಿ ಕಾಜೋಲ್, ಭೂಮಿ ಪಡ್ನೇಕರ್‌, ನಟ ಅಕ್ಷಯ್ ಕುಮಾರ್‍, ಮಹೇಶ್ ಬಾಬು, ಮಮ್ಮುಟಿ, ಸಂಜಯ್ ದತ್‌, ಗೌತಮ್ ಗಂಭೀರ್‌, ಸೆಹ್ವಾಗ್ ಸೇರಿದಂತೆ ಎಲ್ಲಾ ರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

’ಲತಾಜಿ ಅವರ ನಿಧನವು ನನ್ನ ಹೃದಯವನ್ನು ಕಲುಕಿದೆ, ಇದೆ ರೀತಿ ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಆಗಿದೆ. ಅವರು ಹಾಡುಗಳ ಮೂಲಕ ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದ್ದಾರೆ’ ಎಂದಿದ್ದಾರೆ.

ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಹೇಳಿಕೊಳ್ಳಲಾಗದಷ್ಟು ನಾನು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ಅವರು ನಮ್ಮನ್ನು ಅಗಲಿದ್ದಾರೆ. ಅವರು ದೇಶದಲ್ಲಿ ತುಂಬಲಾರದ ಶೂನ್ಯವನ್ನು ಬಿಟ್ಟು ಹೋಗಿದ್ದಾರೆ. ಮುಂಬರುವ ಪೀಳಿಗೆ ಅವರನ್ನು ಭಾರತೀಯ ಸಂಸ್ಕೃತಿಯ ಧೀಮಂತಿಕೆ ಎಂದು ನೆನಪಿಸಿಕೊಳ್ಳುತ್ತಾರೆ. ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಅದು ನನಗೆ ಸಿಕ್ಕ ಗೌರವವೆಂದು ಭಾವಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ಲತಾ ಮಂಗೇಶ್ಕರ್‌ : ನಿಮಗೆ ಗೊತ್ತಿರದ ಲತಾಜಿ ಬಗ್ಗೆ ವಿಶೇಷ ಮಾಹಿತಿ ಇಲ್ಲಿವೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕುಡ ಸಂತಾಪ ವ್ಯಕ್ತಪಡಿಸಿದ್ದಾರೆ. “ಲತಾ ಮಂಗೇಶ್ಕರ್ ಅವರ ನಿಧನದ ದುಃಖದ ಸುದ್ದಿ ತಿಳಿಯಿತು. ಅವರು ಹಲವು ದಶಕಗಳಿಂದ ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿ ಉಳಿದರು. ಅವರ ಧ್ವನಿ ಅಮರವಾಗಿದೆ. ಅವರ ಅಭಿಮಾನಿಗಳ ಹೃದಯದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದಿದ್ದಾರೆ.

“ಮಧುರ ಕಂಠದ ಮೂಲಕ‌ ದಶಕಗಳಿಂದ ಜನಮನವನ್ನು ರಂಜಿಸಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಸಾವು ನನ್ನಂತಹ ಕೋಟ್ಯಂತರ ಅಭಿಮಾನಿಗಳ ಮನಸ್ಸನ್ನು ಆಘಾತಕ್ಕೀಡು ಮಾಡಿದೆ. ನಮ್ಮನ್ನು ಅಗಲಿ ಹೋದರೂ ಅಮರ ಕಂಠ ಸಿರಿಯ ಮೂಲಕ ನಮ್ಮೊಳಗೆ ಲತಾ ದೀದಿ ಅಜರಾಮರ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುವೆ.” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ನುಡಿ ನೆನಪು; ಕಪ್ಪು ಮೊಗದ ಸುಂದರ – ಸಿಡ್ನಿ ಪಾಟಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...