Homeಮುಖಪುಟಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

- Advertisement -
- Advertisement -

ಖ್ಯಾತ ಹಿನ್ನೆಲೆ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಲತಾ ಮಂಗೇಶ್ಕರ್ ಭಾಜನರಾಗಿದ್ದಾರೆ. ಹಿಂದಿ ಚಿತ್ರರಂಗದ ಜೊತೆಗೆ ಮರಾಠಿ, ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಪ್ರಮುಖ ಸಂಗೀತ ಕುಟುಂಬಕ್ಕೆ ಸೇರಿದ ಲತಾ ಮಂಗೇಶ್ಕರ್ ಅವರು ಸಂಗೀತ ಸಂಯೋಜನೆಯ ಜೊತೆಗೆ ಬೆರಳೆಣಿಕೆಯಷ್ಟು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ಪ್ರಸಿದ್ಧ ಮರಾಠಿ ಸಂಗೀತಗಾರ ಮತ್ತು ರಂಗಭೂಮಿ ಕಲಾವಿದರಾಗಿದ್ದ ಪಂಡಿತ್ ದೀನನಾಥ್ ಮಂಗೇಶ್ಕರ್ ಮತ್ತು ಶೇವಂತಿ ಮಂಗೇಶ್ಕರ್ ಅವರ ಪುತ್ರಿಯಾಗಿ ಲತಾ ಅವರು 1929 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು. ಐದು ಒಡಹುಟ್ಟಿದವರಲ್ಲಿ ಲತಾ ಹಿರಿಯರಾಗಿದ್ದರು. ತಂದೆ ಪಂಡಿತ್ ದೀನನಾಥ್ ಮಂಗೇಶ್ಕರ್ ಬಳಿ ಸಂಗೀತ ಪಾಠ ಕಲಿತರು.

1942 ರಲ್ಲಿ, ಅವರ ತಂದೆ ನಿಧನರಾದಾಗ 13 ವರ್ಷದ ಅವರು ಸಂಗೀತದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1945 ರಲ್ಲಿ, ಮಧುಬಾಲಾ ನಟಿಸಿದ ಮಹಲ್ ಚಿತ್ರದ ’ಆಯೇಗಾ ಆನೇವಾಲಲಾ’ ಹಾಡಿನೊಂದಿಗೆ ಯಶಸ್ಸು ಲಭಿಸುತ್ತಾ ಹೋಯಿತು.

30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್‌ ಅವರಿ ಹಿಂದೆ ಭಾಷೆಯೊಂದರಲೇ ಅಧಙಿಕ ಹಾಡುಗಳನ್ನು ಹಾಡಿದ್ದಾರೆ, ಅವರ ಗಾಯನದ “ತುಜೆ ದೇಖಾ ತೋ ಯೇ ಜಾನಾ ಸನಮ್,” “ಗೋರಿ ಹೈ ಕಲೈಯಾನ್,” “ಲಗ್ ಜಾ ಗಲೇ,” “ಸಾವನ್ ಕಾ ಮಹಿನಾ,” “ಪ್ಯಾರ್ ಕಿಯಾ ಟು ಡರ್ನಾ ಕ್ಯಾ,” “ಏ ಮೇರೆ ವತನ್ ಕೆ ಲಾಗಿನ್”, ವೀರ್ ಝರಾ ಚಿತ್ರದ ‘ತೇರೆ ಲಿಯೇ’ ಹೆಚ್ಚು ಪ್ರಸಿದ್ಧಿ ಪಡೆದವು.

ಗಾಯಕಿ ಲತಾ ಮಂಗೇಶ್ಕರ್‌ ಕನ್ನಡದಲ್ಲಿಯೂ ಹಾಡಿದ್ದಾರೆ. 1967 ರಲ್ಲಿ ಬಿಡುಗಡೆಯಾಗಿದ್ದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಎರಡು ಹಾಡುಗಳಿಗೆ ಲತಾ ಮಂಗೇಶ್ಕರ್ ದನಿಯಾಗಿದ್ದರು. ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರುತಿರೋ ಬಂದಾರೆ ಬರುತೀರೋ ಎಂಬ ಹಾಡುಗಳನ್ನು ಹಾಡಿದ್ದಾರೆ.


ಇದನ್ನೂ ಓದಿ: ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...