Homeಮುಖಪುಟಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

- Advertisement -
- Advertisement -

ಖ್ಯಾತ ಹಿನ್ನೆಲೆ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಲತಾ ಮಂಗೇಶ್ಕರ್ ಭಾಜನರಾಗಿದ್ದಾರೆ. ಹಿಂದಿ ಚಿತ್ರರಂಗದ ಜೊತೆಗೆ ಮರಾಠಿ, ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಪ್ರಮುಖ ಸಂಗೀತ ಕುಟುಂಬಕ್ಕೆ ಸೇರಿದ ಲತಾ ಮಂಗೇಶ್ಕರ್ ಅವರು ಸಂಗೀತ ಸಂಯೋಜನೆಯ ಜೊತೆಗೆ ಬೆರಳೆಣಿಕೆಯಷ್ಟು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ಪ್ರಸಿದ್ಧ ಮರಾಠಿ ಸಂಗೀತಗಾರ ಮತ್ತು ರಂಗಭೂಮಿ ಕಲಾವಿದರಾಗಿದ್ದ ಪಂಡಿತ್ ದೀನನಾಥ್ ಮಂಗೇಶ್ಕರ್ ಮತ್ತು ಶೇವಂತಿ ಮಂಗೇಶ್ಕರ್ ಅವರ ಪುತ್ರಿಯಾಗಿ ಲತಾ ಅವರು 1929 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು. ಐದು ಒಡಹುಟ್ಟಿದವರಲ್ಲಿ ಲತಾ ಹಿರಿಯರಾಗಿದ್ದರು. ತಂದೆ ಪಂಡಿತ್ ದೀನನಾಥ್ ಮಂಗೇಶ್ಕರ್ ಬಳಿ ಸಂಗೀತ ಪಾಠ ಕಲಿತರು.

1942 ರಲ್ಲಿ, ಅವರ ತಂದೆ ನಿಧನರಾದಾಗ 13 ವರ್ಷದ ಅವರು ಸಂಗೀತದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1945 ರಲ್ಲಿ, ಮಧುಬಾಲಾ ನಟಿಸಿದ ಮಹಲ್ ಚಿತ್ರದ ’ಆಯೇಗಾ ಆನೇವಾಲಲಾ’ ಹಾಡಿನೊಂದಿಗೆ ಯಶಸ್ಸು ಲಭಿಸುತ್ತಾ ಹೋಯಿತು.

30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್‌ ಅವರಿ ಹಿಂದೆ ಭಾಷೆಯೊಂದರಲೇ ಅಧಙಿಕ ಹಾಡುಗಳನ್ನು ಹಾಡಿದ್ದಾರೆ, ಅವರ ಗಾಯನದ “ತುಜೆ ದೇಖಾ ತೋ ಯೇ ಜಾನಾ ಸನಮ್,” “ಗೋರಿ ಹೈ ಕಲೈಯಾನ್,” “ಲಗ್ ಜಾ ಗಲೇ,” “ಸಾವನ್ ಕಾ ಮಹಿನಾ,” “ಪ್ಯಾರ್ ಕಿಯಾ ಟು ಡರ್ನಾ ಕ್ಯಾ,” “ಏ ಮೇರೆ ವತನ್ ಕೆ ಲಾಗಿನ್”, ವೀರ್ ಝರಾ ಚಿತ್ರದ ‘ತೇರೆ ಲಿಯೇ’ ಹೆಚ್ಚು ಪ್ರಸಿದ್ಧಿ ಪಡೆದವು.

ಗಾಯಕಿ ಲತಾ ಮಂಗೇಶ್ಕರ್‌ ಕನ್ನಡದಲ್ಲಿಯೂ ಹಾಡಿದ್ದಾರೆ. 1967 ರಲ್ಲಿ ಬಿಡುಗಡೆಯಾಗಿದ್ದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಎರಡು ಹಾಡುಗಳಿಗೆ ಲತಾ ಮಂಗೇಶ್ಕರ್ ದನಿಯಾಗಿದ್ದರು. ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರುತಿರೋ ಬಂದಾರೆ ಬರುತೀರೋ ಎಂಬ ಹಾಡುಗಳನ್ನು ಹಾಡಿದ್ದಾರೆ.


ಇದನ್ನೂ ಓದಿ: ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...