Homeಮುಖಪುಟಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

- Advertisement -
- Advertisement -

ಖ್ಯಾತ ಹಿನ್ನೆಲೆ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಲತಾ ಮಂಗೇಶ್ಕರ್ ಭಾಜನರಾಗಿದ್ದಾರೆ. ಹಿಂದಿ ಚಿತ್ರರಂಗದ ಜೊತೆಗೆ ಮರಾಠಿ, ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಪ್ರಮುಖ ಸಂಗೀತ ಕುಟುಂಬಕ್ಕೆ ಸೇರಿದ ಲತಾ ಮಂಗೇಶ್ಕರ್ ಅವರು ಸಂಗೀತ ಸಂಯೋಜನೆಯ ಜೊತೆಗೆ ಬೆರಳೆಣಿಕೆಯಷ್ಟು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ಪ್ರಸಿದ್ಧ ಮರಾಠಿ ಸಂಗೀತಗಾರ ಮತ್ತು ರಂಗಭೂಮಿ ಕಲಾವಿದರಾಗಿದ್ದ ಪಂಡಿತ್ ದೀನನಾಥ್ ಮಂಗೇಶ್ಕರ್ ಮತ್ತು ಶೇವಂತಿ ಮಂಗೇಶ್ಕರ್ ಅವರ ಪುತ್ರಿಯಾಗಿ ಲತಾ ಅವರು 1929 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು. ಐದು ಒಡಹುಟ್ಟಿದವರಲ್ಲಿ ಲತಾ ಹಿರಿಯರಾಗಿದ್ದರು. ತಂದೆ ಪಂಡಿತ್ ದೀನನಾಥ್ ಮಂಗೇಶ್ಕರ್ ಬಳಿ ಸಂಗೀತ ಪಾಠ ಕಲಿತರು.

1942 ರಲ್ಲಿ, ಅವರ ತಂದೆ ನಿಧನರಾದಾಗ 13 ವರ್ಷದ ಅವರು ಸಂಗೀತದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1945 ರಲ್ಲಿ, ಮಧುಬಾಲಾ ನಟಿಸಿದ ಮಹಲ್ ಚಿತ್ರದ ’ಆಯೇಗಾ ಆನೇವಾಲಲಾ’ ಹಾಡಿನೊಂದಿಗೆ ಯಶಸ್ಸು ಲಭಿಸುತ್ತಾ ಹೋಯಿತು.

30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್‌ ಅವರಿ ಹಿಂದೆ ಭಾಷೆಯೊಂದರಲೇ ಅಧಙಿಕ ಹಾಡುಗಳನ್ನು ಹಾಡಿದ್ದಾರೆ, ಅವರ ಗಾಯನದ “ತುಜೆ ದೇಖಾ ತೋ ಯೇ ಜಾನಾ ಸನಮ್,” “ಗೋರಿ ಹೈ ಕಲೈಯಾನ್,” “ಲಗ್ ಜಾ ಗಲೇ,” “ಸಾವನ್ ಕಾ ಮಹಿನಾ,” “ಪ್ಯಾರ್ ಕಿಯಾ ಟು ಡರ್ನಾ ಕ್ಯಾ,” “ಏ ಮೇರೆ ವತನ್ ಕೆ ಲಾಗಿನ್”, ವೀರ್ ಝರಾ ಚಿತ್ರದ ‘ತೇರೆ ಲಿಯೇ’ ಹೆಚ್ಚು ಪ್ರಸಿದ್ಧಿ ಪಡೆದವು.

ಗಾಯಕಿ ಲತಾ ಮಂಗೇಶ್ಕರ್‌ ಕನ್ನಡದಲ್ಲಿಯೂ ಹಾಡಿದ್ದಾರೆ. 1967 ರಲ್ಲಿ ಬಿಡುಗಡೆಯಾಗಿದ್ದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಎರಡು ಹಾಡುಗಳಿಗೆ ಲತಾ ಮಂಗೇಶ್ಕರ್ ದನಿಯಾಗಿದ್ದರು. ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರುತಿರೋ ಬಂದಾರೆ ಬರುತೀರೋ ಎಂಬ ಹಾಡುಗಳನ್ನು ಹಾಡಿದ್ದಾರೆ.


ಇದನ್ನೂ ಓದಿ: ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...