Homeಮುಖಪುಟಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

ಭಾರತ ರತ್ನ, ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ನಿಧನ

- Advertisement -
- Advertisement -

ಖ್ಯಾತ ಹಿನ್ನೆಲೆ ಗಾಯಕಿ, ಭಾರತ ರತ್ನ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ  92 ವರ್ಷ ವಯಸ್ಸಾಗಿತ್ತು.

ನೈಟಿಂಗೇಲ್ ಆಫ್ ಇಂಡಿಯಾ ಎಂದು ಕರೆಸಿಕೊಳ್ಳುತ್ತಿದ್ದ ಗಾಯಕಿ ಜನವರಿಯಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಫೆ.6) ನಿಧನರಾಗಿದ್ದಾರೆ.

ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳಿಗೆ ಲತಾ ಮಂಗೇಶ್ಕರ್ ಭಾಜನರಾಗಿದ್ದಾರೆ. ಹಿಂದಿ ಚಿತ್ರರಂಗದ ಜೊತೆಗೆ ಮರಾಠಿ, ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲಿ ಹಾಡಿದ್ದಾರೆ. ಪ್ರಮುಖ ಸಂಗೀತ ಕುಟುಂಬಕ್ಕೆ ಸೇರಿದ ಲತಾ ಮಂಗೇಶ್ಕರ್ ಅವರು ಸಂಗೀತ ಸಂಯೋಜನೆಯ ಜೊತೆಗೆ ಬೆರಳೆಣಿಕೆಯಷ್ಟು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ನಟಿಯ ಬಗ್ಗೆ ಅವಹೇಳನಾಕಾರಿ ಪ್ರಶ್ನೆ ಕೇಳಿದ ಪತ್ರಕರ್ತ: ಇದು ಮಹಿಳೆಯರ ಮೇಲೆ ಆತನಿಗಿರುವ ಗೌರವ ವ್ಯಕ್ತಪಡಿಸುತ್ತದೆ ಎಂದ ನಟಿ

ಪ್ರಸಿದ್ಧ ಮರಾಠಿ ಸಂಗೀತಗಾರ ಮತ್ತು ರಂಗಭೂಮಿ ಕಲಾವಿದರಾಗಿದ್ದ ಪಂಡಿತ್ ದೀನನಾಥ್ ಮಂಗೇಶ್ಕರ್ ಮತ್ತು ಶೇವಂತಿ ಮಂಗೇಶ್ಕರ್ ಅವರ ಪುತ್ರಿಯಾಗಿ ಲತಾ ಅವರು 1929 ರಲ್ಲಿ ಮಧ್ಯಪ್ರದೇಶದ ಇಂದೋರ್‌ನಲ್ಲಿ ಜನಿಸಿದರು. ಐದು ಒಡಹುಟ್ಟಿದವರಲ್ಲಿ ಲತಾ ಹಿರಿಯರಾಗಿದ್ದರು. ತಂದೆ ಪಂಡಿತ್ ದೀನನಾಥ್ ಮಂಗೇಶ್ಕರ್ ಬಳಿ ಸಂಗೀತ ಪಾಠ ಕಲಿತರು.

1942 ರಲ್ಲಿ, ಅವರ ತಂದೆ ನಿಧನರಾದಾಗ 13 ವರ್ಷದ ಅವರು ಸಂಗೀತದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 1945 ರಲ್ಲಿ, ಮಧುಬಾಲಾ ನಟಿಸಿದ ಮಹಲ್ ಚಿತ್ರದ ’ಆಯೇಗಾ ಆನೇವಾಲಲಾ’ ಹಾಡಿನೊಂದಿಗೆ ಯಶಸ್ಸು ಲಭಿಸುತ್ತಾ ಹೋಯಿತು.

30,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಮಂಗೇಶ್ಕರ್‌ ಅವರಿ ಹಿಂದೆ ಭಾಷೆಯೊಂದರಲೇ ಅಧಙಿಕ ಹಾಡುಗಳನ್ನು ಹಾಡಿದ್ದಾರೆ, ಅವರ ಗಾಯನದ “ತುಜೆ ದೇಖಾ ತೋ ಯೇ ಜಾನಾ ಸನಮ್,” “ಗೋರಿ ಹೈ ಕಲೈಯಾನ್,” “ಲಗ್ ಜಾ ಗಲೇ,” “ಸಾವನ್ ಕಾ ಮಹಿನಾ,” “ಪ್ಯಾರ್ ಕಿಯಾ ಟು ಡರ್ನಾ ಕ್ಯಾ,” “ಏ ಮೇರೆ ವತನ್ ಕೆ ಲಾಗಿನ್”, ವೀರ್ ಝರಾ ಚಿತ್ರದ ‘ತೇರೆ ಲಿಯೇ’ ಹೆಚ್ಚು ಪ್ರಸಿದ್ಧಿ ಪಡೆದವು.

ಗಾಯಕಿ ಲತಾ ಮಂಗೇಶ್ಕರ್‌ ಕನ್ನಡದಲ್ಲಿಯೂ ಹಾಡಿದ್ದಾರೆ. 1967 ರಲ್ಲಿ ಬಿಡುಗಡೆಯಾಗಿದ್ದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಎರಡು ಹಾಡುಗಳಿಗೆ ಲತಾ ಮಂಗೇಶ್ಕರ್ ದನಿಯಾಗಿದ್ದರು. ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರುತಿರೋ ಬಂದಾರೆ ಬರುತೀರೋ ಎಂಬ ಹಾಡುಗಳನ್ನು ಹಾಡಿದ್ದಾರೆ.


ಇದನ್ನೂ ಓದಿ: ಮುಂಬೈನ 3% ವಿಚ್ಛೇದನಕ್ಕೆ ಟ್ರಾಫಿಕ್ ಕಾರಣ!: ಮಾಜಿ ಸಿಎಂ ಪತ್ನಿ ಅಮೃತ ಫಡ್ನವಿಸ್‌‌‌ ವಿಚಿತ್ರ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...