Homeಕರ್ನಾಟಕವಿಧಾನ ಪರಿಷತ್ತಿಗೆ ಅನರ್ಹ ಶಾಸಕರ ಆಯ್ಕೆ 'ಹಿಂಬಾಗಿಲ ಪ್ರವೇಶ': ವಕೀಲ ಪ್ರಶಾಂತ್ ಭೂಷಣ್

ವಿಧಾನ ಪರಿಷತ್ತಿಗೆ ಅನರ್ಹ ಶಾಸಕರ ಆಯ್ಕೆ ‘ಹಿಂಬಾಗಿಲ ಪ್ರವೇಶ’: ವಕೀಲ ಪ್ರಶಾಂತ್ ಭೂಷಣ್

'ಆರ್.ಶಂಕರ್, ಎನ್.ನಾಗರಾಜ್ ಮತ್ತು ಎ.ಎಚ್.ವಿಶ್ವನಾಥ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಬೇಕು ಎನ್ನುವ ನಿರ್ಧಾರ ಮತ್ತು ಅವರ ನಾಮನಿರ್ದೇಶನವನ್ನು ಪ್ರಶ್ನಿಸುವ' ಪಿಐಎಲ್‌ಗಳ ಕುರಿತು ವಿಚಾರಣೆ ನಡೆಯುತ್ತಿದೆ.

- Advertisement -
- Advertisement -

“ವಿಧಾನ ಪರಿಷತ್ತಿಗೆ ಅನರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಅಥವಾ ನಾಮನಿರ್ದೇಶನ ಮಾಡುವುದು ಹಿಂಬಾಗಿಲಿನ ಪ್ರವೇಶಕ್ಕೆ ಸಮನಾಗಿರುತ್ತದೆ” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕರ್ನಾಟಕ ಹೈಕೋರ್ಟ್ ಮುಂದೆ ಬುಧವಾರ ವಾದಿಸಿದರು.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದಾರೆ.

‘ಆರ್.ಶಂಕರ್, ಎನ್.ನಾಗರಾಜ್ ಮತ್ತು ಎ.ಎಚ್.ವಿಶ್ವನಾಥ್ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಬೇಕು ಎನ್ನುವ ನಿರ್ಧಾರ ಮತ್ತು ಅವರ ನಾಮನಿರ್ದೇಶನವನ್ನು ಪ್ರಶ್ನಿಸುವ’ ಪಿಐಎಲ್‌ಗಳ ಕುರಿತು ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಅಧಿಕೃತವಾಗಿ ಬಿಜೆಪಿ ಸೇರಿದ 17 ಅನರ್ಹ ಶಾಸಕರು: ಭಾವೀ ಮಂತ್ರಿಗಳು ಎಂದ ಯಡಿಯೂರಪ್ಪ

ಅರ್ಜಿದಾರರನ್ನು ಪ್ರತಿನಿಧಿಸುತ್ತಿರುವ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, “ಈ ಮೂವರು ರಾಜಕಾರಣಿಗಳ ಅನರ್ಹತೆಯನ್ನು ಸ್ಪೀಕರ್ ಸಮರ್ಥಿಸಿದ್ದಾರೆ. ಆದ್ದರಿಂದ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಲು ಅಥವಾ ನಾಮನಿರ್ದೇಶನ ಮಾಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ಪ್ರತಿವಾದಿ ವಾದ ಮಂಡಿಸಲು ಸಮಯ ಕೋರಿರುವುದರಿಂದ ನ್ಯಾಯಪೀಠವು ಈ ವಿಚಾರಣೆಯನ್ನು ಇಂದು ನಡೆಸಲಿದೆ.

ಇದನ್ನೂ ಓದಿ: ಎಚ್. ವಿಶ್ವನಾಥ್, ಸಿ. ಪಿ. ಯೋಗೇಶ್ವರ್‌ ಸೇರಿ ಐವರು ವಿಧಾನಪರಿಷತ್‌ಗೆ ನಾಮನಿರ್ದೇಶನ

ಅನರ್ಹಗೊಂಡ ಶಾಸಕರಾದ ಎ.ಎಚ್.ವಿಶ್ವನಾಥ್ (ನಾಮನಿರ್ದೇಶಿತ) ಮತ್ತು ಎಂಟಿಬಿ ನಾಗರಾಜ್ ಡಿಸೆಂಬರ್ ಉಪಚುನಾವಣೆಯಲ್ಲಿ ಸೋತಿದ್ದರು. ಶಂಕರ್ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ.

ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶದಿಂದ ಮೇಲ್ಮನೆಗೆ ಇವರ ನಾಮನಿರ್ದೇಶನ/ಚುನಾವಣೆ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಇವರನ್ನು ಪರಿಷತ್ತಿನಲ್ಲಿ ಸೇರಿಸಿಕೊಳ್ಳುವುದು ಸಂವಿಧಾನದ 164 ಮತ್ತು 361 ಬಿ ವಿಧಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...