Homeಕರ್ನಾಟಕವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಅದರ ಭಾನಗಡಿಗಳ ಬಗ್ಗೆ ಆಕ್ರೋಶ, ಅದರ ಪ್ರಸ್ತುತ್ತೆಯ ಬಗ್ಗೆ ಚರ್ಚೆ ನಡೆಯುವುದು ಸಹಜವೇ. ಕಳೆದ ವಾರದ ಪತ್ರಿಕೆಯಲ್ಲಿ ಹೃಷಿಕೇಶ ಬಹದ್ದೂರ ದೇಸಾಯಿಯವರು “ಮೇಲ್ಮನೆ ಯಾರಿಗೆ ಬೇಕಾಗಿದೆ?” ಎಂದು ಕೇಳಿದ್ದರು. ಅದರಲ್ಲಿ ಪರಿಷತ್ತು ಹೇಗೆ ತನ್ನ ಉದ್ದೇಶ, ಮೌಲ್ಯಗಳಿಂದ ದೂರ ಸರಿಯುತ್ತಾ ಅಪ್ರಸ್ತುತವಾಗುತ್ತಿದೆ, ಕುಟುಂಬ ರಾಜಕಾರಣ, ಸೋತವರ ರೀಹ್ಯಾಬಿಲಿಟೇಷನ್ ಸೆಂಟರ್ ಮತ್ತು ಮುಖ್ಯವಾಗಿ ಮೇಲ್ಮನೆಯಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಹೇಗೆ ಪ್ರಬಲ ಜಾತಿಗಳ ಅಡುಂಬೋಲವಾಗಿದೆ ಎಂದು ಸೋದಾಹರಣವಾಗಿ ವಿವರಿಸಿದ್ದರು. ಆದರೆ ನನಗೆ ಆ ಲೇಖನದ ಬಗ್ಗೆ ಎರಡು ಆಕ್ಷೇಪಗಳಿವೆ, ಹಾಗಾಗಿ ಇಲ್ಲಿ ಪತ್ರಿಕೆಯಲ್ಲೇ ಪ್ರತಿಕ್ರಿಯುಸುತ್ತಿದ್ದೇನೆ.

“ಮೇಲ್ಮನೆ ಯಾರಿಗೆ ಬೇಕಾಗಿದೆ?” ಎಂಬ ಪ್ರಶ್ನೆಯಲ್ಲಿ ಸದ್ಯದ ಪರಿಸ್ಥಿತಿಯ, ಅದು ತಲುಪಿರುವ ಅಧೋಗತಿಯ ಬಗ್ಗೆ ವಿಷಾದ ಇದೆ. ಇದು ನಮ್ಮ ನ್ಯಾಯಾಲಯಗಳು ಆಗಾಗ ’ಇಷ್ಟನ್ನೂ ಮಾಡಲಾಗದಿದ್ದರೆ ಏಕಿರಬೇಕು, ನಗರಪಾಲಿಕೆಯನ್ನು ಮುಚ್ಚಿಹಾಕಿಬಿಡೋಣವೆ’ ಎಂದು ರೆಟರಿಕ್ ಆಗಿ ಕೇಳುತ್ತಲ್ಲವೆ, ಹಾಗೆ ಎಂದು ನಾನು ಭಾವಿಸುತ್ತೇನೆ. ಆದರೆ ನ್ಯಾಯಾಲಯವಾದರೂ ಸರಿ, ನಾವಾದರೂ ಸರಿ, ಹೀಗೆ ಸಂಸ್ಥೆಗಳಲ್ಲಿನ ಸಮಸ್ಯೆಗಳಿಗೆ ಯಾವ ಮಟ್ಟದಲ್ಲಾದರೂ ಅದನ್ನು ಮುಚ್ಚುವ, ಬಹಿಷ್ಕರಿಸುವ ಮಾತಾಡುವುದು ಸಮಂಜಸವಲ್ಲವೆಂಬುದು ನನ್ನ ಭಾವನೆ. ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಸಂಘ ಪರಿವಾರ ಮತ್ತು ಬಿಜೆಪಿ ಬೆಂಬಲಿತ ಮಹೇಶ ಜೋಷಿ ಗೆದ್ದಾಗಲೂ ಇಂಥದ್ದೇ ಮಾತುಗಳು ಕೇಳಿಬಂದಿದ್ದವು. ಅದೂ ಯುಕ್ತವಲ್ಲ ಎಂದೇ ನನ್ನ ವಾದ. ರದ್ದು ಮಾಡುವುದೇ ಉತ್ತರವಾದರೆ ವಿಧಾನಸಭೆ, ಲೋಕಸಭೆಗಳೇನು ಕಮ್ಮಿ ಕೆಟ್ಟಿವೆಯೇ?

ಹೃಷಿಕೇಶರು ನೆರೆಯ ಆಂಧ್ರಪ್ರದೇಶದ ಉದಾಹರಣೆ ಕೊಟ್ಟಿದ್ದಾರೆ. ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಮಾಡುವ ಯುವ ಮುಖ್ಯಮಂತ್ರಿಯ ಹೊಸ ವಿಚಾರಕ್ಕೆ ವಿರೋಧಪಕ್ಷಗಳ ಬಾಹುಳ್ಯ ಇರುವ ಪರಿಷತ್ತು ಅಡ್ಡಿ ಆಗಿದೆ, ಹಾಗಾಗಿ ಪರಿಷತ್ತನ್ನು ಬರಖಾಸ್ತು ಮಾಡುವ ಕೂಗೆದ್ದಿದೆ ಎಂದು ಹೇಳಿದ್ದಾರೆ. 175ರಲ್ಲಿ 150 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತದೊಂದಿಗೆ ಆಡಳಿತ ನಡೆಸುತ್ತಿರುವ ಜಗನ್‌ಮೋಹನ ರೆಡ್ಡಿಯದು, ಮೋದಿಯನ್ನೂ ಮೀರಿದ ದುರಾಡಳಿತ, ಆರ್ಥಿಕ ಅಶಿಸ್ತು, ತುಘಲಕ್ ದರ್ಬಾರ್ ಮತ್ತು ದರ್ಪದ ಸರ್ವಾಧಿಕಾರ ಎಂಬುದು ನನ್ನ ಅಭಿಪ್ರಾಯ, ಇರಲಿ. ಮೂರು ರಾಜಧಾನಿಯದು ಕಾನೂನಾತ್ಮಕವಾಗಿಯೂ ಸಮಂಜಸವಾಗಿಲ್ಲ ಅಷ್ಟೇ ಅಲ್ಲ, ಅಲ್ಲಿ ಅಮರಾವತಿಯೇ ರಾಜಧಾನಿ ಆಗಿರಬೇಕೆಂದು ನಡೆಯುತ್ತಿರುವ “ನ್ಯಾಯಾಲಯಂ ನುಂಚಿ ದೇವಾಲಯಂ” ಪಾದಯಾತ್ರೆಗೆ ಲಭಿಸಿರುವ ಅಪಾರ ಜನಾದರಣೆಯನ್ನು, ಬೆಂಬಲವನ್ನೂ ನೋಡಿದರೆ ಜನಕ್ಕೂ ಮೂರು ರಾಜಧಾನಿಗಳು ಬೇಕಿಲ್ಲ ಎಂಬುದು ವಿದಿತ. ಇವತ್ತು ಇಷ್ಟು ದೊಡ್ಡ ಬಹುಮತ ಪಡೆದಿರುವ ಸರ್ಕಾರವೊಂದು ’ಗೂಳಿ’ಯಂತೆ ಮುನ್ನುಗ್ಗುವುದರಿಂದ, ಅದರ ಸರ್ವಾಧಿಕಾರಿ ಧೋರಣೆಗೆ ಇರುವ ಒಂದೇ ಅಂಕುಶ ಅಲ್ಲಿನ ಪರಿಷತ್ತು. ಇದುವರೆಗೂ ಹಲವು ರಾಜ್ಯಗಳಲ್ಲಿ ಪರಿಷತ್ತನ್ನು ರದ್ದು ಮಾಡಲಾಗಿದೆ. ಬಹುತೇಕ ಇದು ಆಳುವ ಪಕ್ಷಕ್ಕೆ ಪರಿಷತ್ತಿನಲ್ಲಿ ಬಹುಮತ ಇಲ್ಲದೇ ಇದ್ದಾಗಲೇ ಆಗಿದೆ. ಅದೇ ಅದರ ಪ್ರಸ್ತುತತೆ.

ಇನ್ನು ಸದ್ಯ ಇರುವಂತೆ ಪರಿಷತ್ತು ದಿನೇದಿನೇ ಅಪ್ರಸ್ತುತವಾಗುತ್ತಾ ಹೋಗುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ ಇದಕ್ಕೆ ಹೃಷಿಕೇಶರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಆದರೆ ನಾವು ಇವತ್ತು ಅದರ ಸಂರಚನೆಯನ್ನು ಪ್ರಸ್ತುತಗೊಳಿಸಬೇಕಿದೆ. ಇವತ್ತು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಅರ್ಥವೇ ಉಳಿದಿಲ್ಲ. ಪದವೀಧರರು ವಿರಳವಾಗಿದ್ದ ಕಾಲಕ್ಕೆ ಅದು ಬೇಕಾಗಿತ್ತು, ಇವತ್ತಿಗಲ್ಲ. ಪದವೀಧರರೆಲ್ಲರೂ ಮೇಧಾವಿಗಳು, ವಿವೇಕಯುಕ್ತರು ಎಂಬಂತಿದೆ. ಇನ್ನು ಶಿಕ್ಷಕರಿಗೆ ಮಾತ್ರ ಏಕೆ ನಾಲ್ಕು ಸ್ಥಾನಗಳು? ಅವರು ಮಾತ್ರವೇ ಪ್ರಜ್ಞಾವಂತರೆಂದೋ? ಇವತ್ತು ಅನೇಕ ಇತರೆ ದನಿ ಇಲ್ಲದ, ಪ್ರಾತಿನಿಧ್ಯ ಇಲ್ಲದ ಗುಂಪುಗಳಿಗೆ ಪರಿಷತ್ತಿನಲ್ಲಿ ತಾವು ಮಾಡಿಕೊಡಬೇಕಿದೆ.

ಅಂತಹ ಗುಂಪುಗಳ ಪ್ರಾತಿನಿಧ್ಯಕ್ಕೆ ಕೆಲವು ಸಲಹೆಗಳು: ಈ ವಲಯಗಳಿಂದ ಆಯ್ಕೆ ಆಗುವ ಸದಸ್ಯರು ಕಡ್ಡಾಯವಾಗಿ ಅದೇ ವಲಯದಲ್ಲಿ ತೊಡಗಿಸಿಕೊಂಡಿರುವವರಾಗಿರಬೇಕು. ಆ ರೀತಿಯ ನಿಯಮಗಳನ್ನು ಪ್ರತಿ ವಲಯಕ್ಕೂ ತರಬೇಕು.

1. ರಾಜ್ಯದ ಮಹಿಳೆಯರು: ಅವರ 5-6 ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು, ಲೈಂಗಿಕ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ.
2. ರಾಜ್ಯದ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತರಿಗೆ ಒಂದು ಸ್ಥಾನ, ಪೌರಕಾರ್ಮಿಕರಿಗೆ ಒಂದು ಸ್ಥಾನ.
3. ರಾಜ್ಯದ ರೈತರು ಅವರ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು.
4. ರಾಜ್ಯದ ಕಾರ್ಮಿಕರಿಗೆ ಕನಿಷ್ಠ ಎರಡು ಸ್ಥಾನ
5. ಶಿಕ್ಷಕರ ಪ್ರಾತಿನಿಧ್ಯವನ್ನು ಗರಿಷ್ಠ ಎರಡಕ್ಕೆ ಮಿತಿಗೊಳಿಸುವುದು. ಇನ್ನುಳಿದ ಎರಡು ಪ್ರತಿನಿಧಿಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು.
6. ರಾಜ್ಯದ ವೈದ್ಯರು ಒಂದು ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ.
7. ರಾಜ್ಯದ ಸಹಕಾರಿ ವಲಯದಿಂದ ಕೆಲವು ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಿದೆ.

ಇನ್ನು ಪರಿಷತ್ತಿನಲ್ಲಿ ರಾಜ್ಯದ ಸ್ವಾಯತ್ತ ಸಂಸ್ಥೆಗಳ ನೇತೃತ್ವ ವಹಿಸಿದವರೆಲ್ಲರನ್ನೂ ex-officio ಸದಸ್ಯರನ್ನಾಗಿ ಮಾಡಬೇಕು. ಈ ಹುದ್ದೆಗಳ politicisation ತಡೆಯಲು ಅಗತ್ಯವಿದ್ದರೆ ಇವರಿಗೆ ಮತದಾನದ ಹಕ್ಕು ನೀಡದಿರುವುದು ಅಗತ್ಯವಾಗಬಹುದು. ಆದರೆ ಇವರೆಲ್ಲರೂ ಪರಿಷತ್ತಿನಲ್ಲಿ ಇದ್ದರೆ, ಈ ಸಂಸ್ಥೆಗಳ ವರದಿಗಳನ್ನು ಕಡ್ಡಾಯವಾಗಿ ಮಂಡಿಸುವಂತಾದರೆ, ಅಲ್ಲಿನ ಚರ್ಚೆಗೊಂದು ವಿಸ್ತಾರವೂ, ಸರ್ಕಾರಕ್ಕೊಂದು ಅಂಕುಶವೂ ಇರುತ್ತದೆ.

ಇವರೆಲ್ಲರೂ ex-officio ಸದಸ್ಯರಾಗಬೇಕು:

1. ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷರು
2. ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು
3. ಕರ್ನಾಟಕದ ಆಡಿಟರ್ ಜನರಲ್
4. ಕರ್ನಾಟಕ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು
5. ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು
6. ಕರ್ನಾಟಕ ಲೋಕಾಯುಕ್ತರು
7. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು
8. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು
9. ಈ ನಾಡಿನ ಎಲ್ಲ ಸರ್ಕಾರೀ ವಿಶ್ವವಿದ್ಯಾಲಯಗಳ ಉಪಕುಲಪತಿಗಳು.
10. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು
11. ಕರ್ನಾಟಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು
12. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು

ಇನ್ನು ಪರಿಷತ್ತಿನಲ್ಲಿ ಈ ಕೂಡಲೇ ಮೀಸಲಾತಿ ತರಬೇಕಿದೆ. ದಿ ಹಿಂದೂ ಪತ್ರಿಕೆಯು ಈಗ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಿಲ್ಲಿಸಿರುವ ಉಮೇದುವಾರರ ಜಾತಿಗಣತಿ ನಡೆಸಿ ಎಲ್ಲ ಉಮೇದುವಾರರ ಪೈಕಿ ಶೇ.60ಕ್ಕಿಂತಲೂ ಹೆಚ್ಚು ಜನ ಒಕ್ಕಲಿಗ, ಲಿಂಗಾಯತ ಜಾತಿಗಳಿಗೆ ಸೇರಿದವರು ಎಂದು ತೋರಿಸಿದ್ದಾರೆ. ಮೀಸಲಾತಿ ಇಲ್ಲದಿದ್ದರೆ ಎಲ್ಲೆಡೆಯೂ ಇದೇ ವಾಸ್ತವ. ಇನ್ನು ಹಿರಿಯರ, ಪ್ರಾಜ್ಞರ ಮನೆಗೆ ಮೀಸಲಾತಿ ಇಲ್ಲದಿರುವುದು ಕೆಟ್ಟ ಮೆರಿಟ್ ವಾದವನ್ನು ಸರ್ಕಾರವೇ ಮಾಡಿದಂತೆ. ಈ ಕೂಡಲೇ ಪರಿಶಿಷ್ಟ ಜಾತಿ, ವರ್ಗಗಳಿಗೆ ಸಾಂವಿಧಾನಿಕ ಹಕ್ಕಾದ ಮೀಸಲಾತಿಯನ್ನು ನೀಡಬೇಕು.

ಹೀಗೆ ಇನ್ನೂ ಬೆಳೆಸಿ ಪರಿಷತ್ತನ್ನು ನಿಜಕ್ಕೂ ಮತ್ತೆ ಪ್ರಜಾಪ್ರತಿನಿಧಿ ಸಭೆ ಮಾಡಬೇಕಿದೆ. ಈ ರೀತಿಯಾಗಿ ಪ್ರತಿನಿಧಿತ್ವವನ್ನು ಸರಿಪಡಿಸಿ ವಿಧಾನ ಪರಿಷತ್ತನ್ನು ಉಳಿಸಿಕೊಳ್ಳುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿದೆ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ: ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...