Homeಕರ್ನಾಟಕವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

- Advertisement -
- Advertisement -

ವಿಧಾನ ಪರಿಷತ್ ಚುನಾವಣೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಅದರ ಭಾನಗಡಿಗಳ ಬಗ್ಗೆ ಆಕ್ರೋಶ, ಅದರ ಪ್ರಸ್ತುತ್ತೆಯ ಬಗ್ಗೆ ಚರ್ಚೆ ನಡೆಯುವುದು ಸಹಜವೇ. ಕಳೆದ ವಾರದ ಪತ್ರಿಕೆಯಲ್ಲಿ ಹೃಷಿಕೇಶ ಬಹದ್ದೂರ ದೇಸಾಯಿಯವರು “ಮೇಲ್ಮನೆ ಯಾರಿಗೆ ಬೇಕಾಗಿದೆ?” ಎಂದು ಕೇಳಿದ್ದರು. ಅದರಲ್ಲಿ ಪರಿಷತ್ತು ಹೇಗೆ ತನ್ನ ಉದ್ದೇಶ, ಮೌಲ್ಯಗಳಿಂದ ದೂರ ಸರಿಯುತ್ತಾ ಅಪ್ರಸ್ತುತವಾಗುತ್ತಿದೆ, ಕುಟುಂಬ ರಾಜಕಾರಣ, ಸೋತವರ ರೀಹ್ಯಾಬಿಲಿಟೇಷನ್ ಸೆಂಟರ್ ಮತ್ತು ಮುಖ್ಯವಾಗಿ ಮೇಲ್ಮನೆಯಲ್ಲಿ ಮೀಸಲಾತಿ ಇಲ್ಲದಿರುವುದರಿಂದ ಹೇಗೆ ಪ್ರಬಲ ಜಾತಿಗಳ ಅಡುಂಬೋಲವಾಗಿದೆ ಎಂದು ಸೋದಾಹರಣವಾಗಿ ವಿವರಿಸಿದ್ದರು. ಆದರೆ ನನಗೆ ಆ ಲೇಖನದ ಬಗ್ಗೆ ಎರಡು ಆಕ್ಷೇಪಗಳಿವೆ, ಹಾಗಾಗಿ ಇಲ್ಲಿ ಪತ್ರಿಕೆಯಲ್ಲೇ ಪ್ರತಿಕ್ರಿಯುಸುತ್ತಿದ್ದೇನೆ.

“ಮೇಲ್ಮನೆ ಯಾರಿಗೆ ಬೇಕಾಗಿದೆ?” ಎಂಬ ಪ್ರಶ್ನೆಯಲ್ಲಿ ಸದ್ಯದ ಪರಿಸ್ಥಿತಿಯ, ಅದು ತಲುಪಿರುವ ಅಧೋಗತಿಯ ಬಗ್ಗೆ ವಿಷಾದ ಇದೆ. ಇದು ನಮ್ಮ ನ್ಯಾಯಾಲಯಗಳು ಆಗಾಗ ’ಇಷ್ಟನ್ನೂ ಮಾಡಲಾಗದಿದ್ದರೆ ಏಕಿರಬೇಕು, ನಗರಪಾಲಿಕೆಯನ್ನು ಮುಚ್ಚಿಹಾಕಿಬಿಡೋಣವೆ’ ಎಂದು ರೆಟರಿಕ್ ಆಗಿ ಕೇಳುತ್ತಲ್ಲವೆ, ಹಾಗೆ ಎಂದು ನಾನು ಭಾವಿಸುತ್ತೇನೆ. ಆದರೆ ನ್ಯಾಯಾಲಯವಾದರೂ ಸರಿ, ನಾವಾದರೂ ಸರಿ, ಹೀಗೆ ಸಂಸ್ಥೆಗಳಲ್ಲಿನ ಸಮಸ್ಯೆಗಳಿಗೆ ಯಾವ ಮಟ್ಟದಲ್ಲಾದರೂ ಅದನ್ನು ಮುಚ್ಚುವ, ಬಹಿಷ್ಕರಿಸುವ ಮಾತಾಡುವುದು ಸಮಂಜಸವಲ್ಲವೆಂಬುದು ನನ್ನ ಭಾವನೆ. ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಸಂಘ ಪರಿವಾರ ಮತ್ತು ಬಿಜೆಪಿ ಬೆಂಬಲಿತ ಮಹೇಶ ಜೋಷಿ ಗೆದ್ದಾಗಲೂ ಇಂಥದ್ದೇ ಮಾತುಗಳು ಕೇಳಿಬಂದಿದ್ದವು. ಅದೂ ಯುಕ್ತವಲ್ಲ ಎಂದೇ ನನ್ನ ವಾದ. ರದ್ದು ಮಾಡುವುದೇ ಉತ್ತರವಾದರೆ ವಿಧಾನಸಭೆ, ಲೋಕಸಭೆಗಳೇನು ಕಮ್ಮಿ ಕೆಟ್ಟಿವೆಯೇ?

ಹೃಷಿಕೇಶರು ನೆರೆಯ ಆಂಧ್ರಪ್ರದೇಶದ ಉದಾಹರಣೆ ಕೊಟ್ಟಿದ್ದಾರೆ. ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ಮಾಡುವ ಯುವ ಮುಖ್ಯಮಂತ್ರಿಯ ಹೊಸ ವಿಚಾರಕ್ಕೆ ವಿರೋಧಪಕ್ಷಗಳ ಬಾಹುಳ್ಯ ಇರುವ ಪರಿಷತ್ತು ಅಡ್ಡಿ ಆಗಿದೆ, ಹಾಗಾಗಿ ಪರಿಷತ್ತನ್ನು ಬರಖಾಸ್ತು ಮಾಡುವ ಕೂಗೆದ್ದಿದೆ ಎಂದು ಹೇಳಿದ್ದಾರೆ. 175ರಲ್ಲಿ 150 ಸ್ಥಾನಗಳನ್ನು ಗೆದ್ದು ಪ್ರಚಂಡ ಬಹುಮತದೊಂದಿಗೆ ಆಡಳಿತ ನಡೆಸುತ್ತಿರುವ ಜಗನ್‌ಮೋಹನ ರೆಡ್ಡಿಯದು, ಮೋದಿಯನ್ನೂ ಮೀರಿದ ದುರಾಡಳಿತ, ಆರ್ಥಿಕ ಅಶಿಸ್ತು, ತುಘಲಕ್ ದರ್ಬಾರ್ ಮತ್ತು ದರ್ಪದ ಸರ್ವಾಧಿಕಾರ ಎಂಬುದು ನನ್ನ ಅಭಿಪ್ರಾಯ, ಇರಲಿ. ಮೂರು ರಾಜಧಾನಿಯದು ಕಾನೂನಾತ್ಮಕವಾಗಿಯೂ ಸಮಂಜಸವಾಗಿಲ್ಲ ಅಷ್ಟೇ ಅಲ್ಲ, ಅಲ್ಲಿ ಅಮರಾವತಿಯೇ ರಾಜಧಾನಿ ಆಗಿರಬೇಕೆಂದು ನಡೆಯುತ್ತಿರುವ “ನ್ಯಾಯಾಲಯಂ ನುಂಚಿ ದೇವಾಲಯಂ” ಪಾದಯಾತ್ರೆಗೆ ಲಭಿಸಿರುವ ಅಪಾರ ಜನಾದರಣೆಯನ್ನು, ಬೆಂಬಲವನ್ನೂ ನೋಡಿದರೆ ಜನಕ್ಕೂ ಮೂರು ರಾಜಧಾನಿಗಳು ಬೇಕಿಲ್ಲ ಎಂಬುದು ವಿದಿತ. ಇವತ್ತು ಇಷ್ಟು ದೊಡ್ಡ ಬಹುಮತ ಪಡೆದಿರುವ ಸರ್ಕಾರವೊಂದು ’ಗೂಳಿ’ಯಂತೆ ಮುನ್ನುಗ್ಗುವುದರಿಂದ, ಅದರ ಸರ್ವಾಧಿಕಾರಿ ಧೋರಣೆಗೆ ಇರುವ ಒಂದೇ ಅಂಕುಶ ಅಲ್ಲಿನ ಪರಿಷತ್ತು. ಇದುವರೆಗೂ ಹಲವು ರಾಜ್ಯಗಳಲ್ಲಿ ಪರಿಷತ್ತನ್ನು ರದ್ದು ಮಾಡಲಾಗಿದೆ. ಬಹುತೇಕ ಇದು ಆಳುವ ಪಕ್ಷಕ್ಕೆ ಪರಿಷತ್ತಿನಲ್ಲಿ ಬಹುಮತ ಇಲ್ಲದೇ ಇದ್ದಾಗಲೇ ಆಗಿದೆ. ಅದೇ ಅದರ ಪ್ರಸ್ತುತತೆ.

ಇನ್ನು ಸದ್ಯ ಇರುವಂತೆ ಪರಿಷತ್ತು ದಿನೇದಿನೇ ಅಪ್ರಸ್ತುತವಾಗುತ್ತಾ ಹೋಗುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ ಇದಕ್ಕೆ ಹೃಷಿಕೇಶರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಆದರೆ ನಾವು ಇವತ್ತು ಅದರ ಸಂರಚನೆಯನ್ನು ಪ್ರಸ್ತುತಗೊಳಿಸಬೇಕಿದೆ. ಇವತ್ತು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಕ್ಕೆ ಅರ್ಥವೇ ಉಳಿದಿಲ್ಲ. ಪದವೀಧರರು ವಿರಳವಾಗಿದ್ದ ಕಾಲಕ್ಕೆ ಅದು ಬೇಕಾಗಿತ್ತು, ಇವತ್ತಿಗಲ್ಲ. ಪದವೀಧರರೆಲ್ಲರೂ ಮೇಧಾವಿಗಳು, ವಿವೇಕಯುಕ್ತರು ಎಂಬಂತಿದೆ. ಇನ್ನು ಶಿಕ್ಷಕರಿಗೆ ಮಾತ್ರ ಏಕೆ ನಾಲ್ಕು ಸ್ಥಾನಗಳು? ಅವರು ಮಾತ್ರವೇ ಪ್ರಜ್ಞಾವಂತರೆಂದೋ? ಇವತ್ತು ಅನೇಕ ಇತರೆ ದನಿ ಇಲ್ಲದ, ಪ್ರಾತಿನಿಧ್ಯ ಇಲ್ಲದ ಗುಂಪುಗಳಿಗೆ ಪರಿಷತ್ತಿನಲ್ಲಿ ತಾವು ಮಾಡಿಕೊಡಬೇಕಿದೆ.

ಅಂತಹ ಗುಂಪುಗಳ ಪ್ರಾತಿನಿಧ್ಯಕ್ಕೆ ಕೆಲವು ಸಲಹೆಗಳು: ಈ ವಲಯಗಳಿಂದ ಆಯ್ಕೆ ಆಗುವ ಸದಸ್ಯರು ಕಡ್ಡಾಯವಾಗಿ ಅದೇ ವಲಯದಲ್ಲಿ ತೊಡಗಿಸಿಕೊಂಡಿರುವವರಾಗಿರಬೇಕು. ಆ ರೀತಿಯ ನಿಯಮಗಳನ್ನು ಪ್ರತಿ ವಲಯಕ್ಕೂ ತರಬೇಕು.

1. ರಾಜ್ಯದ ಮಹಿಳೆಯರು: ಅವರ 5-6 ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು, ಲೈಂಗಿಕ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ.
2. ರಾಜ್ಯದ ಅಂಗನವಾಡಿ, ಆಶಾ, ಬಿಸಿಯೂಟ ಕಾರ್ಯಕರ್ತರಿಗೆ ಒಂದು ಸ್ಥಾನ, ಪೌರಕಾರ್ಮಿಕರಿಗೆ ಒಂದು ಸ್ಥಾನ.
3. ರಾಜ್ಯದ ರೈತರು ಅವರ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು.
4. ರಾಜ್ಯದ ಕಾರ್ಮಿಕರಿಗೆ ಕನಿಷ್ಠ ಎರಡು ಸ್ಥಾನ
5. ಶಿಕ್ಷಕರ ಪ್ರಾತಿನಿಧ್ಯವನ್ನು ಗರಿಷ್ಠ ಎರಡಕ್ಕೆ ಮಿತಿಗೊಳಿಸುವುದು. ಇನ್ನುಳಿದ ಎರಡು ಪ್ರತಿನಿಧಿಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು.
6. ರಾಜ್ಯದ ವೈದ್ಯರು ಒಂದು ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ.
7. ರಾಜ್ಯದ ಸಹಕಾರಿ ವಲಯದಿಂದ ಕೆಲವು ಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಿದೆ.

ಇನ್ನು ಪರಿಷತ್ತಿನಲ್ಲಿ ರಾಜ್ಯದ ಸ್ವಾಯತ್ತ ಸಂಸ್ಥೆಗಳ ನೇತೃತ್ವ ವಹಿಸಿದವರೆಲ್ಲರನ್ನೂ ex-officio ಸದಸ್ಯರನ್ನಾಗಿ ಮಾಡಬೇಕು. ಈ ಹುದ್ದೆಗಳ politicisation ತಡೆಯಲು ಅಗತ್ಯವಿದ್ದರೆ ಇವರಿಗೆ ಮತದಾನದ ಹಕ್ಕು ನೀಡದಿರುವುದು ಅಗತ್ಯವಾಗಬಹುದು. ಆದರೆ ಇವರೆಲ್ಲರೂ ಪರಿಷತ್ತಿನಲ್ಲಿ ಇದ್ದರೆ, ಈ ಸಂಸ್ಥೆಗಳ ವರದಿಗಳನ್ನು ಕಡ್ಡಾಯವಾಗಿ ಮಂಡಿಸುವಂತಾದರೆ, ಅಲ್ಲಿನ ಚರ್ಚೆಗೊಂದು ವಿಸ್ತಾರವೂ, ಸರ್ಕಾರಕ್ಕೊಂದು ಅಂಕುಶವೂ ಇರುತ್ತದೆ.

ಇವರೆಲ್ಲರೂ ex-officio ಸದಸ್ಯರಾಗಬೇಕು:

1. ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷರು
2. ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು
3. ಕರ್ನಾಟಕದ ಆಡಿಟರ್ ಜನರಲ್
4. ಕರ್ನಾಟಕ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು
5. ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು
6. ಕರ್ನಾಟಕ ಲೋಕಾಯುಕ್ತರು
7. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು
8. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು
9. ಈ ನಾಡಿನ ಎಲ್ಲ ಸರ್ಕಾರೀ ವಿಶ್ವವಿದ್ಯಾಲಯಗಳ ಉಪಕುಲಪತಿಗಳು.
10. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು
11. ಕರ್ನಾಟಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು
12. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು

ಇನ್ನು ಪರಿಷತ್ತಿನಲ್ಲಿ ಈ ಕೂಡಲೇ ಮೀಸಲಾತಿ ತರಬೇಕಿದೆ. ದಿ ಹಿಂದೂ ಪತ್ರಿಕೆಯು ಈಗ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಿಲ್ಲಿಸಿರುವ ಉಮೇದುವಾರರ ಜಾತಿಗಣತಿ ನಡೆಸಿ ಎಲ್ಲ ಉಮೇದುವಾರರ ಪೈಕಿ ಶೇ.60ಕ್ಕಿಂತಲೂ ಹೆಚ್ಚು ಜನ ಒಕ್ಕಲಿಗ, ಲಿಂಗಾಯತ ಜಾತಿಗಳಿಗೆ ಸೇರಿದವರು ಎಂದು ತೋರಿಸಿದ್ದಾರೆ. ಮೀಸಲಾತಿ ಇಲ್ಲದಿದ್ದರೆ ಎಲ್ಲೆಡೆಯೂ ಇದೇ ವಾಸ್ತವ. ಇನ್ನು ಹಿರಿಯರ, ಪ್ರಾಜ್ಞರ ಮನೆಗೆ ಮೀಸಲಾತಿ ಇಲ್ಲದಿರುವುದು ಕೆಟ್ಟ ಮೆರಿಟ್ ವಾದವನ್ನು ಸರ್ಕಾರವೇ ಮಾಡಿದಂತೆ. ಈ ಕೂಡಲೇ ಪರಿಶಿಷ್ಟ ಜಾತಿ, ವರ್ಗಗಳಿಗೆ ಸಾಂವಿಧಾನಿಕ ಹಕ್ಕಾದ ಮೀಸಲಾತಿಯನ್ನು ನೀಡಬೇಕು.

ಹೀಗೆ ಇನ್ನೂ ಬೆಳೆಸಿ ಪರಿಷತ್ತನ್ನು ನಿಜಕ್ಕೂ ಮತ್ತೆ ಪ್ರಜಾಪ್ರತಿನಿಧಿ ಸಭೆ ಮಾಡಬೇಕಿದೆ. ಈ ರೀತಿಯಾಗಿ ಪ್ರತಿನಿಧಿತ್ವವನ್ನು ಸರಿಪಡಿಸಿ ವಿಧಾನ ಪರಿಷತ್ತನ್ನು ಉಳಿಸಿಕೊಳ್ಳುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿದೆ.


ಇದನ್ನೂ ಓದಿ: ಮೇಲ್ಮನೆ ವಿಧಾನ ಪರಿಷತ್ ಯಾರಿಗೆ ಬೇಕಾಗಿದೆ?

ಇದನ್ನೂ ಓದಿ: ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...