Homeಕರ್ನಾಟಕವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸಖರಾಯಪಟ್ಟಣದ ಬಳಿ ತೋಟದ ಮನೆಯಿಂದ ಸೋಮವಾರ ಸಂಜೆ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡ ಅವರು ರಾತ್ರಿಯಾದರೂ ಹಿಂತಿರುಗಲಿಲ್ಲ. ಇದರಿಂದ ಭಯಗೊಂಡ ಮನೆಯವರು ಹುಡುಕಾಡಿದ್ದಾರೆ. ಗುಣಸಾಗರ – ಕಬ್ಳಿ ಮಾರ್ಗದ ನಡುವೆ ತಡರಾತ್ರಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಜೊತೆಗೆ ಧರ್ಮೇಗೌಡ ಅವರ ಮೃತದೇಹದ ಜತೆ ಡೆತ್‌ ನೋಟ್‌ ಸಿಕ್ಕಿದೆ. ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯ ಉಲ್ಲೇಖ ಅದರಲ್ಲಿ ಇದೆ ಎಂನ್ನಲಾಗಿದೆ.

ಧರ್ಮೇಗೌಡ ಅವರು ಬೀರೂರಿನ ಪರಿಚಯಸ್ಥರೊಬ್ಬರಿಗೆ ಸೋಮವಾರ ಸಂಜೆ ಫೋನ್‌ ಮಾಡಿ ಜನ ಶತಾಬ್ಧಿ ರೈಲಿನ ಸಮಯವನ್ನು ವಿಚಾರಿಸಿದ್ದರು. ಹುಬ್ಬಳ್ಳಿಯಿಂದ ಸ್ನೇಹಿತರೊಬ್ಬರು ರೈಲಿನಲ್ಲಿ ಬರುತ್ತಿದ್ದಾರೆ ಎಂದು ಅವರಿಗೆ ತಿಳಿಸಿದ್ದರು ಎಂದು ಆಪ್ತರೊಬ್ಬರು ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ಪ್ರಜಾವಾಣಿಗೆ ತಿಳಿಸಿದ್ದರು.

ಇದನ್ನೂ ಓದಿ:  ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಇವರಿಗೆ ಸಂತಾಪ ಸೂಚಿಸಿ ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ, “ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

 


ಇದನ್ನೂ ಓದಿ: ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...