Homeಕರ್ನಾಟಕವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸಖರಾಯಪಟ್ಟಣದ ಬಳಿ ತೋಟದ ಮನೆಯಿಂದ ಸೋಮವಾರ ಸಂಜೆ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡ ಅವರು ರಾತ್ರಿಯಾದರೂ ಹಿಂತಿರುಗಲಿಲ್ಲ. ಇದರಿಂದ ಭಯಗೊಂಡ ಮನೆಯವರು ಹುಡುಕಾಡಿದ್ದಾರೆ. ಗುಣಸಾಗರ – ಕಬ್ಳಿ ಮಾರ್ಗದ ನಡುವೆ ತಡರಾತ್ರಿ ಶವ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡದೆ ಸರ್ಕಾರಿ ಮನೆ ತೊರೆದ ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ

ಜೊತೆಗೆ ಧರ್ಮೇಗೌಡ ಅವರ ಮೃತದೇಹದ ಜತೆ ಡೆತ್‌ ನೋಟ್‌ ಸಿಕ್ಕಿದೆ. ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯ ಉಲ್ಲೇಖ ಅದರಲ್ಲಿ ಇದೆ ಎಂನ್ನಲಾಗಿದೆ.

ಧರ್ಮೇಗೌಡ ಅವರು ಬೀರೂರಿನ ಪರಿಚಯಸ್ಥರೊಬ್ಬರಿಗೆ ಸೋಮವಾರ ಸಂಜೆ ಫೋನ್‌ ಮಾಡಿ ಜನ ಶತಾಬ್ಧಿ ರೈಲಿನ ಸಮಯವನ್ನು ವಿಚಾರಿಸಿದ್ದರು. ಹುಬ್ಬಳ್ಳಿಯಿಂದ ಸ್ನೇಹಿತರೊಬ್ಬರು ರೈಲಿನಲ್ಲಿ ಬರುತ್ತಿದ್ದಾರೆ ಎಂದು ಅವರಿಗೆ ತಿಳಿಸಿದ್ದರು ಎಂದು ಆಪ್ತರೊಬ್ಬರು ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಈಚೆಗೆ ನಡೆದ ಘಟನೆಯಿಂದ ಧರ್ಮೇಗೌಡ ಅವರು ಮನನೊಂದಿದ್ದರು, ಸಹೋದರ ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌.ಭೋಜೇಗೌಡ ಅವರೊಂದಿಗೆ ಬೇಸರ ಹಂಚಿಕೊಂಡಿದ್ದರು ಎಂದು ಧರ್ಮೇಗೌಡ ಅವರ ಆಪ್ತರೊಬ್ಬರು ಪ್ರಜಾವಾಣಿಗೆ ತಿಳಿಸಿದ್ದರು.

ಇದನ್ನೂ ಓದಿ:  ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಇವರಿಗೆ ಸಂತಾಪ ಸೂಚಿಸಿ ಯಡಿಯೂರಪ್ಪನವರು ಟ್ವೀಟ್ ಮಾಡಿದ್ದಾರೆ, “ವಿಧಾನಪರಿಷತ್ ಉಪಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡರ ನಿಧನದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಇದನ್ನು ನಂಬಲಿಕ್ಕೇ ಸಾಧ್ಯವಾಗುತ್ತಿಲ್ಲ. ಶಾಸಕರಾಗಿ, ಉಪಸಭಾಪತಿಗಳಾಗಿ ಜನಮನ್ನಣೆ ಗಳಿಸಿದ್ದ ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ. ಹಿರಿಯ ಅಧಿಕಾರಿಗಳಿಂದ ಘಟನೆಯ ವಿವರ ಪಡೆದುಕೊಳ್ಳುತ್ತಿದ್ದೇನೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಬರೆದುಕೊಂಡಿದ್ದಾರೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104

 


ಇದನ್ನೂ ಓದಿ: ವಿಧಾನ ಪರಿಷತ್‌ ಕೋಲಾಹಲ: ಬಿಜೆಪಿ-ಜೆಡಿಎಸ್‌ನ ‍ಷಡ್ಯಂತ್ರ ಎಂದ ಸಿದ್ದರಾಮಯ್ಯ – ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...