Homeಕರ್ನಾಟಕಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ.

- Advertisement -
- Advertisement -

ಇಂದಿನ ಪತ್ರಿಕೆಗಳಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪಡ್ನವೀಸ್ ಹೇಳಿಕೆಯೊಂದು ಪ್ರಕಟವಾಗಿದೆ- “ಶಾಸಕರನ್ನು ಖರೀದಿ ಮಾಡದೇ ಇರಲು ಮೊದಲೇ ನಿರ್ಧರಿಸಿದ್ದೆವು. ಎನ್‌ಸಿಪಿ ಬೆಂಬಲ ಪಡೆದು ಸರ್ಕಾರ ರಚಿಸಿದೆವು. ಆಮೇಲೆ ಅಜಿತ್ ಪವಾರ್ ಬೆಂಬಲ ನೀಡಲಿಲ್ಲ. ಪಡ್ನವೀಸ್ ಸರ್ಕಾರ ರಚಿಸಲು ಆಗಲಿಲ್ಲ” ಎಂದಿದೆ. ಇದರ ಅರ್ಥ ಏನೆಂದರೆ ಶಾಸಕರು ಅಂದರೆ ಖರೀದಿ ವಸ್ತುಗಳು ಅಂತ ಎಂದು ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಸ್ವರಾಜ್ ಇಂಡಿಯಾ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಂಥಹ ಕೃತ್ಯ ಎಸಗುವುದನ್ನು ಅನೈತಿಕ ಎನ್ನುತ್ತಾರೆ, ಮನೆಮುರುಕ ಅಂತಾರೆ. ಇನ್ನೂ ಏನೇನೋ ಅನ್ನುತ್ತಾರೆ. ದೇಶವನ್ನು ಆಳ್ವಿಕೆ ನಡೆಸುತ್ತಿರುವ ಪಕ್ಷವೇ ಇಂದು ಇಂಥಹ ಕೃತ್ಯಗಳನ್ನು ಎಸಗುತ್ತಿದೆ. ಇಂಥವರ ಕೈಗೆ ದೇಶ ಕೊಟ್ಟರೆ ಆ ದೇಶವನ್ನು ದೇವರೂ ಕಾಪಾಡಲಾರನೇನೊ. ಅಂಥ ಪರಿಸ್ಥಿತಿ ಇಂದು ಭಾರತದ ಪ್ರಜೆಗಳಿಗೆ ವಕ್ಕರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಈಗ, ಪಡ್ನವೀಸ್ ಮಾತುಗಳನ್ನು ಕರ್ನಾಟಕದ ಹಿನ್ನೆಲೆಯಲ್ಲಿ ನೋಡುವುದಾದರೆ, ಏನರ್ಥ ಬರುತ್ತದೆ? ಕರ್ನಾಟಕದಲ್ಲಿ ಶಾಸಕರನ್ನು ಖರೀದಿ ಮಾಡಿದರು, ಬಿಜೆಪಿ ಸರ್ಕಾರ ಬಂತು ಅಂತ ಅರ್ಥ ತಾನೆ? ಇದು ಪಡ್ನವೀಸ್ ಮಹಾಶಯರಿಗೆ ಚೆನ್ನಾಗಿ ಗೊತ್ತು. ಕರ್ನಾಟಕದ ಶಾಸಕರನ್ನು ಕಾಯ್ದುಕೊಂಡಿದ್ದು ಈತನೇ ತಾನೇ?
ಈಗ ಈ ಬಿಕರಿ ಶಾಸಕರಿಂದಾಗಿ ಕರ್ನಾಟಕದಲ್ಲಿ ಉಪಚುನಾವಣೆ ನಮ್ಮ ಮುಂದಿದೆ. ಈ ಬಿಕರಿ ಶಾಸಕರಿಗೆ, ದ್ರೋಹಿ ಅನ್ನುತ್ತಾರೆ. ನಮಾಕ್ ಹರಾಮ್ ಅನ್ನುತ್ತಾರೆ ನಮ್ಮ ಹಳ್ಳಿ ಕಡೆ ಒಂದು ಬೈಗುಳ ಇದೆ. ಅದು ನನಗೆ ಗೊತ್ತಿಲ್ಲ ಅಂತಲ್ಲ, ಗೊತ್ತಿದೆ. ಆದರೆ ಅದನ್ನು ಹೇಳಲು ಮನಸ್ಸಾಗುತ್ತಿಲ್ಲ ಎಂದರು.

’ಅನರ್ಹರ ಠೇವಣಿ ಹೋಗಲಿ; ಮತದಾರರ ಮಾನ ಉಳಿಯಲಿ’
ಆಯ್ತು, ನಾವೀಗ ಗಂಭೀರವಾಗಿ ಚಿಂತಿಸಬೇಕಾಗಿದೆ. ಯಾಕೆಂದರೆ ಈಗ ಅನರ್ಹ ಶಾಸಕರು ತಮ್ಮನ್ನು ಮಾರಾಟ ಮಾಡಿಕೊಂಡಿದ್ದು ತಮ್ಮೊಬ್ಬರನ್ನೇ ಅಲ್ಲ. ಯಾಕೆಂದರೆ ಇವರು ಶಾಸಕರಾಗಲು ಕಾರಣ ಮತದಾರರ ಮತಗಳು ಕಾರಣ. ಅಂದರೆ ಈ ಹೊಣೆಗೇಡಿಗಳು ನಿಜವಾದ ಅರ್ಥದಲ್ಲಿ ಮಾಡಿದ್ದಾದರೂ ಏನನ್ನು? ಮತದಾರರನ್ನೇ ಮಾರಿಬಿಟ್ಟರು! ರಾಜಕಾರಣ, ಜನತಂತ್ರ ವ್ಯವಸ್ಥೆಯನ್ನೆ ಗಲೀಜು ಮಾಡಿಬಿಟ್ಟರು. ಇದನ್ನು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈಗ ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ. ಒಟ್ಟಿನಲ್ಲಿ, ರಾಜಕಾರಣಿಗಳಿಗೆ ಚೆಲ್ಲಾಟ, ಪ್ರಜೆಗಳಿಗೆ ಪ್ರಾಣ ಸಂಕಟ ಎಂಬಂತಾಗಿದೆ ಎಂದಿದ್ದಾರೆ.

ಈಗ ಮತದಾರರ ಮುಂದೆ ಉಳಿದಿರುವುದು ಒಂದೇ ದಾರಿ- ಈ ಅನರ್ಹ ಶಾಸಕರಿಗೆ ಠೇವಣಿಯೂ ಸಿಗದಂತೆ ಮಾಡಿ ಮತದಾರರು ತಮ್ಮ ಮಾನ-ಮರ‍್ಯಾದೆ ಕಾಪಾಡಿಕೊಳ್ಳಬೇಕಿದೆ. ಈ ಉಪಚುನಾವಣೆಗೆ ಒಂದೇ ಘೋಷಣೆ- `ಅನರ್ಹರ ಠೇವಣಿ ಹೋಗಲಿ, ಮತದಾರರ ಮಾನ ಉಳಿಯಲಿ’ ಎಂದು ಘೋಷಿಸಿದರು.

ಇದನ್ನೂ ಓದಿ: ಮಾತ್ಮ ಗಾಂಧಿ ಅಂದ್ರ ಏನ್ ಅಂದ್ಕಂಡಿದ್ದೀರಿ? : ‘ಗಾಂಧಿ-150’ ನೆನಪಿನಲ್ಲಿ ದೇವನೂರು ಮಹಾದೇವರವರ ಸಂದರ್ಶನ

ರಾಜ್ಯ ಮುಳುಗಡೆಯಾದರೂ ತಮಗೇನೂ ಸಂಬಂಧವಿಲ್ಲದವರಂತೆ ಜನಪ್ರತಿನಿಧಿಗಳು ಇರುವಾಗ ಹಾಗೂ ಜನತಂತ್ರ ವ್ಯವಸ್ಥೆಯೇ ಬಿಕ್ಕಟ್ಟಿನಲ್ಲಿರುವ ಈ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷವು ಹೊಸ ದಾರಿಗಳಿಗಾಗಿ ಹುಡುಕುತ್ತಿದೆ. ರಾಜ್ಯದಲ್ಲಿ ಮುಂಬರುವ ತಾಲ್ಲೂಕು ಜಿಲ್ಲಾ ಪಂಚಾಯ್ತ್ ಚುನಾವಣೆಯಲ್ಲಿ ನಾಡು ಕಟ್ಟುವ ರಾಜಕಾರಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ‘ಹೊಸ ರಾಜಕಾರಣಕ್ಕೆ ಹೊಸ ಮುಖಗಳು’ ಎಂಬ ಆಲೋಚನೆಯಲ್ಲಿ ಹುಡುಕಾಟ ನಡೆಸಲಿದೆ. ಯುವಕರು, ಮಹಿಳೆಯರಿಗೆ ಆದ್ಯತೆ, ಅಷ್ಟೇ ಅಲ್ಲ, ನಾಡಿನ ಎಲ್ಲಾ ಸಮಾಜಮುಖಿ ಸಂಘಟನೆಗಳನ್ನೂ ಒಳಗೊಂಡು ಹಂಚಿಕೊಂಡು ಹೆಜ್ಜೆ ಹಾಕುವ ಪ್ರಯತ್ನವೂ ನಡೆದಿದೆ. ಈ ನಾಡು ಕಟ್ಟುವ ರಾಜಕಾರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸುವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...