Homeಕರ್ನಾಟಕಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ.

- Advertisement -
- Advertisement -

ಇಂದಿನ ಪತ್ರಿಕೆಗಳಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪಡ್ನವೀಸ್ ಹೇಳಿಕೆಯೊಂದು ಪ್ರಕಟವಾಗಿದೆ- “ಶಾಸಕರನ್ನು ಖರೀದಿ ಮಾಡದೇ ಇರಲು ಮೊದಲೇ ನಿರ್ಧರಿಸಿದ್ದೆವು. ಎನ್‌ಸಿಪಿ ಬೆಂಬಲ ಪಡೆದು ಸರ್ಕಾರ ರಚಿಸಿದೆವು. ಆಮೇಲೆ ಅಜಿತ್ ಪವಾರ್ ಬೆಂಬಲ ನೀಡಲಿಲ್ಲ. ಪಡ್ನವೀಸ್ ಸರ್ಕಾರ ರಚಿಸಲು ಆಗಲಿಲ್ಲ” ಎಂದಿದೆ. ಇದರ ಅರ್ಥ ಏನೆಂದರೆ ಶಾಸಕರು ಅಂದರೆ ಖರೀದಿ ವಸ್ತುಗಳು ಅಂತ ಎಂದು ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಸ್ವರಾಜ್ ಇಂಡಿಯಾ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಂಥಹ ಕೃತ್ಯ ಎಸಗುವುದನ್ನು ಅನೈತಿಕ ಎನ್ನುತ್ತಾರೆ, ಮನೆಮುರುಕ ಅಂತಾರೆ. ಇನ್ನೂ ಏನೇನೋ ಅನ್ನುತ್ತಾರೆ. ದೇಶವನ್ನು ಆಳ್ವಿಕೆ ನಡೆಸುತ್ತಿರುವ ಪಕ್ಷವೇ ಇಂದು ಇಂಥಹ ಕೃತ್ಯಗಳನ್ನು ಎಸಗುತ್ತಿದೆ. ಇಂಥವರ ಕೈಗೆ ದೇಶ ಕೊಟ್ಟರೆ ಆ ದೇಶವನ್ನು ದೇವರೂ ಕಾಪಾಡಲಾರನೇನೊ. ಅಂಥ ಪರಿಸ್ಥಿತಿ ಇಂದು ಭಾರತದ ಪ್ರಜೆಗಳಿಗೆ ವಕ್ಕರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಈಗ, ಪಡ್ನವೀಸ್ ಮಾತುಗಳನ್ನು ಕರ್ನಾಟಕದ ಹಿನ್ನೆಲೆಯಲ್ಲಿ ನೋಡುವುದಾದರೆ, ಏನರ್ಥ ಬರುತ್ತದೆ? ಕರ್ನಾಟಕದಲ್ಲಿ ಶಾಸಕರನ್ನು ಖರೀದಿ ಮಾಡಿದರು, ಬಿಜೆಪಿ ಸರ್ಕಾರ ಬಂತು ಅಂತ ಅರ್ಥ ತಾನೆ? ಇದು ಪಡ್ನವೀಸ್ ಮಹಾಶಯರಿಗೆ ಚೆನ್ನಾಗಿ ಗೊತ್ತು. ಕರ್ನಾಟಕದ ಶಾಸಕರನ್ನು ಕಾಯ್ದುಕೊಂಡಿದ್ದು ಈತನೇ ತಾನೇ?
ಈಗ ಈ ಬಿಕರಿ ಶಾಸಕರಿಂದಾಗಿ ಕರ್ನಾಟಕದಲ್ಲಿ ಉಪಚುನಾವಣೆ ನಮ್ಮ ಮುಂದಿದೆ. ಈ ಬಿಕರಿ ಶಾಸಕರಿಗೆ, ದ್ರೋಹಿ ಅನ್ನುತ್ತಾರೆ. ನಮಾಕ್ ಹರಾಮ್ ಅನ್ನುತ್ತಾರೆ ನಮ್ಮ ಹಳ್ಳಿ ಕಡೆ ಒಂದು ಬೈಗುಳ ಇದೆ. ಅದು ನನಗೆ ಗೊತ್ತಿಲ್ಲ ಅಂತಲ್ಲ, ಗೊತ್ತಿದೆ. ಆದರೆ ಅದನ್ನು ಹೇಳಲು ಮನಸ್ಸಾಗುತ್ತಿಲ್ಲ ಎಂದರು.

’ಅನರ್ಹರ ಠೇವಣಿ ಹೋಗಲಿ; ಮತದಾರರ ಮಾನ ಉಳಿಯಲಿ’
ಆಯ್ತು, ನಾವೀಗ ಗಂಭೀರವಾಗಿ ಚಿಂತಿಸಬೇಕಾಗಿದೆ. ಯಾಕೆಂದರೆ ಈಗ ಅನರ್ಹ ಶಾಸಕರು ತಮ್ಮನ್ನು ಮಾರಾಟ ಮಾಡಿಕೊಂಡಿದ್ದು ತಮ್ಮೊಬ್ಬರನ್ನೇ ಅಲ್ಲ. ಯಾಕೆಂದರೆ ಇವರು ಶಾಸಕರಾಗಲು ಕಾರಣ ಮತದಾರರ ಮತಗಳು ಕಾರಣ. ಅಂದರೆ ಈ ಹೊಣೆಗೇಡಿಗಳು ನಿಜವಾದ ಅರ್ಥದಲ್ಲಿ ಮಾಡಿದ್ದಾದರೂ ಏನನ್ನು? ಮತದಾರರನ್ನೇ ಮಾರಿಬಿಟ್ಟರು! ರಾಜಕಾರಣ, ಜನತಂತ್ರ ವ್ಯವಸ್ಥೆಯನ್ನೆ ಗಲೀಜು ಮಾಡಿಬಿಟ್ಟರು. ಇದನ್ನು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈಗ ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ. ಒಟ್ಟಿನಲ್ಲಿ, ರಾಜಕಾರಣಿಗಳಿಗೆ ಚೆಲ್ಲಾಟ, ಪ್ರಜೆಗಳಿಗೆ ಪ್ರಾಣ ಸಂಕಟ ಎಂಬಂತಾಗಿದೆ ಎಂದಿದ್ದಾರೆ.

ಈಗ ಮತದಾರರ ಮುಂದೆ ಉಳಿದಿರುವುದು ಒಂದೇ ದಾರಿ- ಈ ಅನರ್ಹ ಶಾಸಕರಿಗೆ ಠೇವಣಿಯೂ ಸಿಗದಂತೆ ಮಾಡಿ ಮತದಾರರು ತಮ್ಮ ಮಾನ-ಮರ‍್ಯಾದೆ ಕಾಪಾಡಿಕೊಳ್ಳಬೇಕಿದೆ. ಈ ಉಪಚುನಾವಣೆಗೆ ಒಂದೇ ಘೋಷಣೆ- `ಅನರ್ಹರ ಠೇವಣಿ ಹೋಗಲಿ, ಮತದಾರರ ಮಾನ ಉಳಿಯಲಿ’ ಎಂದು ಘೋಷಿಸಿದರು.

ಇದನ್ನೂ ಓದಿ: ಮಾತ್ಮ ಗಾಂಧಿ ಅಂದ್ರ ಏನ್ ಅಂದ್ಕಂಡಿದ್ದೀರಿ? : ‘ಗಾಂಧಿ-150’ ನೆನಪಿನಲ್ಲಿ ದೇವನೂರು ಮಹಾದೇವರವರ ಸಂದರ್ಶನ

ರಾಜ್ಯ ಮುಳುಗಡೆಯಾದರೂ ತಮಗೇನೂ ಸಂಬಂಧವಿಲ್ಲದವರಂತೆ ಜನಪ್ರತಿನಿಧಿಗಳು ಇರುವಾಗ ಹಾಗೂ ಜನತಂತ್ರ ವ್ಯವಸ್ಥೆಯೇ ಬಿಕ್ಕಟ್ಟಿನಲ್ಲಿರುವ ಈ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷವು ಹೊಸ ದಾರಿಗಳಿಗಾಗಿ ಹುಡುಕುತ್ತಿದೆ. ರಾಜ್ಯದಲ್ಲಿ ಮುಂಬರುವ ತಾಲ್ಲೂಕು ಜಿಲ್ಲಾ ಪಂಚಾಯ್ತ್ ಚುನಾವಣೆಯಲ್ಲಿ ನಾಡು ಕಟ್ಟುವ ರಾಜಕಾರಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ‘ಹೊಸ ರಾಜಕಾರಣಕ್ಕೆ ಹೊಸ ಮುಖಗಳು’ ಎಂಬ ಆಲೋಚನೆಯಲ್ಲಿ ಹುಡುಕಾಟ ನಡೆಸಲಿದೆ. ಯುವಕರು, ಮಹಿಳೆಯರಿಗೆ ಆದ್ಯತೆ, ಅಷ್ಟೇ ಅಲ್ಲ, ನಾಡಿನ ಎಲ್ಲಾ ಸಮಾಜಮುಖಿ ಸಂಘಟನೆಗಳನ್ನೂ ಒಳಗೊಂಡು ಹಂಚಿಕೊಂಡು ಹೆಜ್ಜೆ ಹಾಕುವ ಪ್ರಯತ್ನವೂ ನಡೆದಿದೆ. ಈ ನಾಡು ಕಟ್ಟುವ ರಾಜಕಾರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸುವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...