Homeಕರ್ನಾಟಕಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಶಾಸಕರು ಅಂದರೆ ಖರೀದಿ ವಸ್ತುಗಳು ಎಂದರ್ಥ : ದೇವನೂರು ಮಹಾದೇವ

ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ.

- Advertisement -
- Advertisement -

ಇಂದಿನ ಪತ್ರಿಕೆಗಳಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಪಡ್ನವೀಸ್ ಹೇಳಿಕೆಯೊಂದು ಪ್ರಕಟವಾಗಿದೆ- “ಶಾಸಕರನ್ನು ಖರೀದಿ ಮಾಡದೇ ಇರಲು ಮೊದಲೇ ನಿರ್ಧರಿಸಿದ್ದೆವು. ಎನ್‌ಸಿಪಿ ಬೆಂಬಲ ಪಡೆದು ಸರ್ಕಾರ ರಚಿಸಿದೆವು. ಆಮೇಲೆ ಅಜಿತ್ ಪವಾರ್ ಬೆಂಬಲ ನೀಡಲಿಲ್ಲ. ಪಡ್ನವೀಸ್ ಸರ್ಕಾರ ರಚಿಸಲು ಆಗಲಿಲ್ಲ” ಎಂದಿದೆ. ಇದರ ಅರ್ಥ ಏನೆಂದರೆ ಶಾಸಕರು ಅಂದರೆ ಖರೀದಿ ವಸ್ತುಗಳು ಅಂತ ಎಂದು ದೇವನೂರು ಮಹಾದೇವ ಅಭಿಪ್ರಾಯಪಟ್ಟಿದ್ದಾರೆ.

ಸ್ವರಾಜ್ ಇಂಡಿಯಾ ವತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇಂಥಹ ಕೃತ್ಯ ಎಸಗುವುದನ್ನು ಅನೈತಿಕ ಎನ್ನುತ್ತಾರೆ, ಮನೆಮುರುಕ ಅಂತಾರೆ. ಇನ್ನೂ ಏನೇನೋ ಅನ್ನುತ್ತಾರೆ. ದೇಶವನ್ನು ಆಳ್ವಿಕೆ ನಡೆಸುತ್ತಿರುವ ಪಕ್ಷವೇ ಇಂದು ಇಂಥಹ ಕೃತ್ಯಗಳನ್ನು ಎಸಗುತ್ತಿದೆ. ಇಂಥವರ ಕೈಗೆ ದೇಶ ಕೊಟ್ಟರೆ ಆ ದೇಶವನ್ನು ದೇವರೂ ಕಾಪಾಡಲಾರನೇನೊ. ಅಂಥ ಪರಿಸ್ಥಿತಿ ಇಂದು ಭಾರತದ ಪ್ರಜೆಗಳಿಗೆ ವಕ್ಕರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪೋಲಿ ಕಥೆಗೆ ಬಹುಮಾನ ಬಂದ ಕತೆ: ದೇವನೂರು ಮಹಾದೇವರ ಮಾತಲ್ಲಿ ಕೇಳಿ…

ಈಗ, ಪಡ್ನವೀಸ್ ಮಾತುಗಳನ್ನು ಕರ್ನಾಟಕದ ಹಿನ್ನೆಲೆಯಲ್ಲಿ ನೋಡುವುದಾದರೆ, ಏನರ್ಥ ಬರುತ್ತದೆ? ಕರ್ನಾಟಕದಲ್ಲಿ ಶಾಸಕರನ್ನು ಖರೀದಿ ಮಾಡಿದರು, ಬಿಜೆಪಿ ಸರ್ಕಾರ ಬಂತು ಅಂತ ಅರ್ಥ ತಾನೆ? ಇದು ಪಡ್ನವೀಸ್ ಮಹಾಶಯರಿಗೆ ಚೆನ್ನಾಗಿ ಗೊತ್ತು. ಕರ್ನಾಟಕದ ಶಾಸಕರನ್ನು ಕಾಯ್ದುಕೊಂಡಿದ್ದು ಈತನೇ ತಾನೇ?
ಈಗ ಈ ಬಿಕರಿ ಶಾಸಕರಿಂದಾಗಿ ಕರ್ನಾಟಕದಲ್ಲಿ ಉಪಚುನಾವಣೆ ನಮ್ಮ ಮುಂದಿದೆ. ಈ ಬಿಕರಿ ಶಾಸಕರಿಗೆ, ದ್ರೋಹಿ ಅನ್ನುತ್ತಾರೆ. ನಮಾಕ್ ಹರಾಮ್ ಅನ್ನುತ್ತಾರೆ ನಮ್ಮ ಹಳ್ಳಿ ಕಡೆ ಒಂದು ಬೈಗುಳ ಇದೆ. ಅದು ನನಗೆ ಗೊತ್ತಿಲ್ಲ ಅಂತಲ್ಲ, ಗೊತ್ತಿದೆ. ಆದರೆ ಅದನ್ನು ಹೇಳಲು ಮನಸ್ಸಾಗುತ್ತಿಲ್ಲ ಎಂದರು.

’ಅನರ್ಹರ ಠೇವಣಿ ಹೋಗಲಿ; ಮತದಾರರ ಮಾನ ಉಳಿಯಲಿ’
ಆಯ್ತು, ನಾವೀಗ ಗಂಭೀರವಾಗಿ ಚಿಂತಿಸಬೇಕಾಗಿದೆ. ಯಾಕೆಂದರೆ ಈಗ ಅನರ್ಹ ಶಾಸಕರು ತಮ್ಮನ್ನು ಮಾರಾಟ ಮಾಡಿಕೊಂಡಿದ್ದು ತಮ್ಮೊಬ್ಬರನ್ನೇ ಅಲ್ಲ. ಯಾಕೆಂದರೆ ಇವರು ಶಾಸಕರಾಗಲು ಕಾರಣ ಮತದಾರರ ಮತಗಳು ಕಾರಣ. ಅಂದರೆ ಈ ಹೊಣೆಗೇಡಿಗಳು ನಿಜವಾದ ಅರ್ಥದಲ್ಲಿ ಮಾಡಿದ್ದಾದರೂ ಏನನ್ನು? ಮತದಾರರನ್ನೇ ಮಾರಿಬಿಟ್ಟರು! ರಾಜಕಾರಣ, ಜನತಂತ್ರ ವ್ಯವಸ್ಥೆಯನ್ನೆ ಗಲೀಜು ಮಾಡಿಬಿಟ್ಟರು. ಇದನ್ನು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈಗ ಈ ಕುಬ್ಜ ರಾಜಕಾರಣಿಗಳು ಮತ್ತೆ ಚುನಾವಣೆಗೆ ಸ್ಪರ್ಧಿಸಿ ಮತದಾರರ ಮುಂದೆ ಮತ ಯಾಚಿಸುತ್ತಿದ್ದಾರೆ. ಇದನ್ನು ಧೈರ್ಯ ಅನ್ನಬೇಕೋ, ಭಂಡತನ ಅನ್ನಬೇಕೋ ಅಥವ ನಿರ್ಲಜ್ಜ ಅನ್ನಬೇಕೋ ತಿಳಿಯದಾಗಿದೆ. ಒಟ್ಟಿನಲ್ಲಿ, ರಾಜಕಾರಣಿಗಳಿಗೆ ಚೆಲ್ಲಾಟ, ಪ್ರಜೆಗಳಿಗೆ ಪ್ರಾಣ ಸಂಕಟ ಎಂಬಂತಾಗಿದೆ ಎಂದಿದ್ದಾರೆ.

ಈಗ ಮತದಾರರ ಮುಂದೆ ಉಳಿದಿರುವುದು ಒಂದೇ ದಾರಿ- ಈ ಅನರ್ಹ ಶಾಸಕರಿಗೆ ಠೇವಣಿಯೂ ಸಿಗದಂತೆ ಮಾಡಿ ಮತದಾರರು ತಮ್ಮ ಮಾನ-ಮರ‍್ಯಾದೆ ಕಾಪಾಡಿಕೊಳ್ಳಬೇಕಿದೆ. ಈ ಉಪಚುನಾವಣೆಗೆ ಒಂದೇ ಘೋಷಣೆ- `ಅನರ್ಹರ ಠೇವಣಿ ಹೋಗಲಿ, ಮತದಾರರ ಮಾನ ಉಳಿಯಲಿ’ ಎಂದು ಘೋಷಿಸಿದರು.

ಇದನ್ನೂ ಓದಿ: ಮಾತ್ಮ ಗಾಂಧಿ ಅಂದ್ರ ಏನ್ ಅಂದ್ಕಂಡಿದ್ದೀರಿ? : ‘ಗಾಂಧಿ-150’ ನೆನಪಿನಲ್ಲಿ ದೇವನೂರು ಮಹಾದೇವರವರ ಸಂದರ್ಶನ

ರಾಜ್ಯ ಮುಳುಗಡೆಯಾದರೂ ತಮಗೇನೂ ಸಂಬಂಧವಿಲ್ಲದವರಂತೆ ಜನಪ್ರತಿನಿಧಿಗಳು ಇರುವಾಗ ಹಾಗೂ ಜನತಂತ್ರ ವ್ಯವಸ್ಥೆಯೇ ಬಿಕ್ಕಟ್ಟಿನಲ್ಲಿರುವ ಈ ಸಂದರ್ಭದಲ್ಲಿ ಸ್ವರಾಜ್ ಇಂಡಿಯಾ ಪಕ್ಷವು ಹೊಸ ದಾರಿಗಳಿಗಾಗಿ ಹುಡುಕುತ್ತಿದೆ. ರಾಜ್ಯದಲ್ಲಿ ಮುಂಬರುವ ತಾಲ್ಲೂಕು ಜಿಲ್ಲಾ ಪಂಚಾಯ್ತ್ ಚುನಾವಣೆಯಲ್ಲಿ ನಾಡು ಕಟ್ಟುವ ರಾಜಕಾರಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ‘ಹೊಸ ರಾಜಕಾರಣಕ್ಕೆ ಹೊಸ ಮುಖಗಳು’ ಎಂಬ ಆಲೋಚನೆಯಲ್ಲಿ ಹುಡುಕಾಟ ನಡೆಸಲಿದೆ. ಯುವಕರು, ಮಹಿಳೆಯರಿಗೆ ಆದ್ಯತೆ, ಅಷ್ಟೇ ಅಲ್ಲ, ನಾಡಿನ ಎಲ್ಲಾ ಸಮಾಜಮುಖಿ ಸಂಘಟನೆಗಳನ್ನೂ ಒಳಗೊಂಡು ಹಂಚಿಕೊಂಡು ಹೆಜ್ಜೆ ಹಾಕುವ ಪ್ರಯತ್ನವೂ ನಡೆದಿದೆ. ಈ ನಾಡು ಕಟ್ಟುವ ರಾಜಕಾರಣಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ವಿನಂತಿಸುವೆ ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...